ನಟ ಸುದೀಪ್‌ ವಿರುದ್ಧ ಬಾಡಿಗೆ ವಂಚನೆ ಪ್ರಕರಣ : ಮೇ 4ರಂದು ವಿಚಾರಣೆ­!

 ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ  ಮನೆ ಬಾಡಿಗೆ ವಿವಾದ

Team Udayavani, Apr 6, 2021, 7:56 PM IST

fcgdrtr

ಚಿಕ್ಕಮಗಳೂರು: ನಟ ಸುದೀಪ್‌ ಮಾಲೀಕತ್ವದ ಕಿಚ್ಚ ಪ್ರೊಡಕ್ಷನ್‌ ವತಿಯಿಂದ ನಿರ್ಮಿಸಲಾದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ ಅಲಿಖೀತ ಒಪ್ಪಂದದ ಮೂಲಕ ಮನೆ ಮತ್ತು ತೋಟದ ಜಾಗ ಬಾಡಿಗೆ ನೀಡಿದ್ದು ಬಾಡಿಗೆ ಹಣವನ್ನು ನೀಡದೆ ವಂಚಿಸಿರುವ ಬಗ್ಗೆ ಸ್ಥಳಿಯ ನ್ಯಾಯಾಲಯದಲ್ಲಿ ಸಿವಿಲ್‌ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆ ಮೇ 4ಕ್ಕೆ ನಡೆಯಲಿದೆ. ನಟ ಸುದೀಪ್‌ ತಮ್ಮ ಮೇಲಿನ ಪ್ರಕರಣಗಳು ಖುಲಾಸೆಯಾಗಿವೆ. ಯಾವುದೇ ಪ್ರಕರಣ ಬಾಕಿ ಇಲ್ಲವೆಂದು ಸುಳ್ಳು ಹೇಳಿದ್ದಾರೆ ಎಂದು ಮನೆ ಮಾಲೀಕ ದೀಪಕ್‌ ಮಯೂರ್‌ ಪಟೇಲ್‌ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರಲ್ಲಿ ವಾರಸ್ಥಾರ ಧಾರಾವಾಹಿ ಚಿತ್ರೀಕರಣಕ್ಕೆ ಕಿಚ್ಚ ಪ್ರೊಡಕ್ಷನ್‌ ವ್ಯವಸ್ಥಾಪಕ ಮಹೇಶ್‌ ತನ್ನ ಮನೆ ಹಾಗೂ ಜಾಗ ಕೇಳಿದ್ದು ಅಲಿಖೀತ ಒಪ್ಪಂದದ ಮೂಲಕ ಅನೇಕ ವರ್ಷಗಳ ಹಳೆಯದಾದ ತನ್ನ ಮನೆ ಹಾಗೂ ಜಾಗವನ್ನು ಧಾರಾವಾಹಿ ಚಿತ್ರೀಕರಣಕ್ಕೆ ಬಾಡಿಗೆ ನೀಡಿದ್ದೆ. ಮೂರು ತಿಂಗಳು ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು, ಬಾಡಿಗೆ ಹಣದಲ್ಲಿ ಸ್ವಲ್ಪ ಭಾಗವನ್ನು ಮಾತ್ರ ನೀಡಿದ್ದ ವ್ಯವಸ್ಥಾಪಕರು ಬಾಕಿ ಮೊತ್ತವನ್ನು ನೀಡಿರಲಿಲ್ಲ. ಚಿಕ್ಕಮಗಳೂರು ನ್ಯಾಯಾಲಯದಲ್ಲಿ 420 ಪ್ರಕರಣ ದಾಖಲಿಸಿ ದಾಗ ಸುದೀಪ್‌ ಅವರು ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಖುಲಾಸೆಗೊಳಿಸಿಕೊಂಡಿದ್ದರು ಎಂದರು.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಧಾರಾವಾಹಿ ಸಂಬಂಧ ತನ್ನ ಮೇಲೆ ಯಾವುದೇ ಪ್ರಕರಣಗಳಿಲ್ಲ. ದೀಪಕ್‌ ಮಯೂರ್‌ ಪಟೇಲ್‌ ಏನೇ ಹೇಳಿಕೆ ನೀಡಿದರೂ ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಆದರೆ ಸುದೀಪ್‌ ಮಾಲೀಕತ್ವದ ಕಿಚ್ಚ ಪ್ರೊಡಕ್ಷನ್‌ ಹಾಗೂ ಅದರ ವ್ಯವಸ್ಥಾಪಕನ ಮೇಲೆ ತನಗೆ ಬರಬೇಕಿದ್ದ ಬಾಕಿ ಹಣದ ವಿಚಾರವಾಗಿ 2020ರ ಮಾರ್ಚ್‌ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಿವಿಲ್‌ ಪ್ರಕರಣ ದಾಖಲಿಸಿದ್ದು, ಈ ಪ್ರಕರಣದ ವಿಚಾರಣೆ ಮೇ 4ರಂದು ನಡೆಯಲಿದೆ ಎಂದರು.

ಕಿಚ್ಚ ಸುದೀಪ್‌ ಅಭಿಮಾನಿ ಸಂಘದ ಅಧ್ಯಕ್ಷ ನವೀನ್‌ ತನಗೆ ಜೀವ ಬೆದರಿಕೆ ಹಾಕಿದ್ದು, ಜಿಲ್ಲೆಯ ಎರಡನೇ ಹೆಚ್ಚುವರಿ ನ್ಯಾಯಾಲಯದಲ್ಲಿ 506ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿದೆ. ವಾರಸ್ಥಾರ ಧಾರಾವಾಹಿಗೆ ತನ್ನ ಮನೆ ಹಾಗೂ ಜಾಗವನ್ನು ಬಾಡಿಗೆಗೆ ಪಡೆದು ಬಾಕಿ ಬಾಡಿಗೆ ಹಣ ನೀಡದಿರುವ ಸಂಬಂಧ ಸುದೀಪ್‌ ಮೇಲೆ ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದರೂ ಸುದೀಪ್‌ ತನ್ನ ಮೇಲೆ ಯಾವುದೇ ಪ್ರಕರಣ ಇಲ್ಲ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ವಕೀಲ ಜಯರಾಮ್‌, ಸ್ವರೂಪ್‌ ಇದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.