ತನಿಖೆ ಬಳಿಕ ಸಿಡಿ ನಿರ್ಮಾಪಕ, ನಟ, ನಿರ್ದೇಶಕ ಬಯಲು: ರವಿ
Team Udayavani, Mar 16, 2021, 8:16 PM IST
ಚಿಕ್ಕಮಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಂತರ ಇದರ ಹಿಂದೆ ಯಾರ್ಯಾರು ಇದ್ದಾರೆ, ಪ್ರೊಡ್ನೂಸರ್, ಡೈರೆಕ್ಟರ್, ಆ್ಯಕ್ಟರ್ ಯಾರೆಂಬುದು ತಿಳಿಯುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ ಹೆಸರು ಏಕೆ ಥಳಕು ಹಾಕಿಕೊಂಡಿದೆಯೋ ಗೊತ್ತಿಲ್ಲ, ವಿಚಾರಣೆ ನಂತರ ಎಲ್ಲವೂ ತಿಳಿಯಲಿದೆ. ಸಿಡಿ ಪ್ರಕರಣ ರಾಜ್ಯ ರಾಜಕಾರಣಕ್ಕೆ ಗೌರವ ತರುವಂತಹ ವಿಷಯವಲ್ಲ, ಹಿಂದೆ ಮೌಲ್ಯಾಧಾರಿತ ರಾಜಕೀಯ ಚರ್ಚೆ ನಡೆಯುತ್ತಿತ್ತು.
ಈಗ ಸಿಡಿ ಆಧಾರಿತ ರಾಜಕೀಯ ಚರ್ಚೆ ನಡೆಯುತ್ತಿದೆ. ಮೌಲ್ಯಧಾರಿತವೋ ಅಥವಾ ಸಿಡಿ ಆಧಾರಿತ ರಾಜಕಾರಣ ಬೇಕೋ ಎಂದು ಯೋಚಿಸಬೇಕು. ಸಾರ್ವಜನಿಕ ಜೀವನದಲ್ಲಿರುವರು ಪರಿಶುದ್ಧವಾಗಿ ರಾಜಕಾರಣದ ಬಗ್ಗೆ ಆಲೋಚನೆ ಮಾಡಬೇಕು. ಜನಲಜ್ಜೆ ಮತ್ತು ಮನಲಜ್ಜೆ ಇರಬೇಕು. ನಮಗೆ ನಾವೇ ಪರಿಮಿತಿ ಹಾಕಿಕೊಳ್ಳಬೇಕು.
ತಮಿಳುನಾಡು ಚುನಾವಣೆಯಲ್ಲಿ 234 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ. ಉಳಿದ ಕ್ಷೇತ್ರಗಳಿಗೆ ಎಐಡಿಎಂಕೆ ನೇತೃತ್ವದಲ್ಲಿ ಎನ್ಡಿಎ ಸ್ಪರ್ಧೆ ನಡೆಸಲಿದೆ. ಎಐಡಿಎಂಕೆ ನೇತೃತ್ವದಲ್ಲಿ ಎನ್ಡಿಎ ಅಧಿ ಕಾರಕ್ಕೆ ಬರುವುದು ಖಚಿತ. ಬಿಜೆಪಿ ಸ್ಪರ್ಧಿಸಿರುವ 20 ಸ್ಥಾನಗಳಲ್ಲಿ 10ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಮಾಜಿ ಐಪಿಎಸ್ ಅ ಧಿಕಾರಿ ಅಣ್ಣಾಮಲೈ ಅವರಿಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಅವರು ಗೆಲುವು ಸಾಧಿ ಸಿ ತಮಿಳುನಾಡಿಗೆ ಒಳ್ಳೆಯ ನಾಯಕತ್ವ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್.ಡಿ.ತಮ್ಮಯ್ಯ
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು