ಮಾಸ್ಕ್ ಧರಿಸಿ ಪಾಠ ಆಲಿಸಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಿಗೆ ಮಾಸ್ಕ್-ಹ್ಯಾಂಡ್‌ವಾಶ್‌ ಬಳಸುವಂತೆ ಸಂದೀಪಿನಿ ಶಾಲಾ ಆಡಳಿತ ಮಂಡಳಿ ಸೂಚನೆ

Team Udayavani, Mar 8, 2020, 3:23 PM IST

8-March-19

ಅಜ್ಜಂಪುರ: ಅಜ್ಜಂಪುರ ಸಮೀಪ ಗೆಜ್ಜೆಗೊಂಡನಹಳ್ಳಿಯ ಸಂದೀಪಿನಿ ಶಾಲಾ ಆಡಳಿತ ಮಂಡಳಿ ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಹ್ಯಾಂಡ್‌ ವಾಶ್‌ ಬಳಸುವಂತೆ ಸೂಚಿಸಿದೆ.

ಕೋವಿಡ್  – 1 9 ಸೋಂಕು ಭೀತಿ ಸೃಷ್ಟಿಸಿದೆ. ಸೋಂಕುಕಾರಕ ಕೊರೊನಾ ವೈರಸ್‌ ದೇಹ ಪ್ರವೇಶಿಸುವುದನ್ನು ತಡೆಯುವ ಸಾಧನದಲ್ಲಿ ಒಂದಾದ ಮಾಸ್ಕ್ ಅನ್ನು ಶಾಲಾ ಸಮಯದಲ್ಲಿ ಧರಿಸಬೇಕು ಮತ್ತು ಹ್ಯಾಂಡ್‌ ವಾಶ್‌ ಬಳಸುವಂತೆ ಎಲ್ಲಾ ವಿದ್ಯಾರ್ಥಿಗಳಿಗೂ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ.

ಕೋವಿಡ್‌-19 ತಲ್ಲಣ ಉಂಟು ಮಾಡಿದೆ. ಹಬ್ಬುತ್ತಿರುವ ಸೋಂಕು ತಗುಲಿದಾಗ ಚಿಕಿತ್ಸೆ ಪಡೆಯುವುದಕ್ಕಿಂತ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಈ ಹಿನ್ನೆಲೆಯಲ್ಲಿ ಅಜ್ಜಂಪುರ, ಬೆಟ್ಟದಾವರೆಕೆರೆ, ಹೊಳಲ್ಕೆರೆ, ಹೊಸದುರ್ಗ, ತಾಳೀಕಟ್ಟೆ ಮತ್ತು ಬೆಂಗಳೂರಿನಲ್ಲಿರುವ ಸಂದೀಪಿನಿ ಶಾಲಾ ಮಕ್ಕಳಿಗೆ ಮಾಸ್ಕ್ ಮತ್ತು ಹ್ಯಾಂಡ್‌ ವಾಶ್‌ ಬಳಸಲು ನಿರ್ದೇಶನ ನೀಡಲಾಗಿದೆ ಎಂದು ಸಂದೀಪಿನಿ ಸಮೂಹ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಲೋಕೇಶ್ವರಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ, ಕೋವಿಡ್‌-19 ಮತ್ತು ರೋಗ ಲಕ್ಷಣದ ಬಗ್ಗೆ ಅರಿವು ಮೂಡಿಸಲಾಗಿದೆ. ಸೋಂಕುಕಾರಕ ಕೊರೊನಾ ವೈರಸ್‌ ಹರಡುವಿಕೆ ಬಗ್ಗೆಯೂ ಹೇಳಲಾಗಿದೆ. ದೇಹದ ಶುಚಿತ್ವ ಕಾಪಾಡಿಕೊಳ್ಳಲು ಸೂಚಿಸಲಾಗಿದೆ. ಆರೋಗ್ಯದಲ್ಲಿ ವ್ಯತ್ಯಯ ಆದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಲು ತಿಳಿಸಲಾಗಿದೆ ಎಂದು ದೈಹಿಕ ಶಿಕ್ಷಕ ರಾಜು ತಿಳಿಸಿದರು.

ಮಾಸ್ಕ್ ಮತ್ತು ಹ್ಯಾಂಡ್‌ವಾಶ್‌ ಬಳಕೆ ಕೊರೊನಾ ಮಾತ್ರವಲ್ಲದೇ ಸಾಮಾನ್ಯ ಶೀತ, ಸೀನು, ಕೆಮ್ಮು, ಜ್ವರದಂತಹ ಕಾಯಿಲೆಗಳಿಗೆ ಕಾರಣ ಆಗುವ ವೈರಸ್‌ ಒಬ್ಬರಿಂದ ಮತ್ತೂಬ್ಬರಿಗೆ ಹರಡುವುದನ್ನು ತಡೆಯುತ್ತದೆ. ಶಾಲೆ, ಮಕ್ಕಳ ಆರೋಗ್ಯ ರಕ್ಷಣೆಗಾಗಿ ಉತ್ತಮ ನಿರ್ಧಾರ ತಳೆದಿದೆ ಎಂದು ಪೋಷಕ ನಟರಾಜ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ವಾಹನ, ಪ್ರಾರ್ಥನಾ ಸಮಯ, ಆಟೋಟಗಳಲ್ಲಿ ವಿದ್ಯಾರ್ಥಿಗಳು ಗುಂಪಾಗಿ ಇರುತ್ತಾರೆ. ಈಗಂತೂ ಭಯಾನಕ ಕೋವಿಡ್‌-19 ಭಯ ಮೂಡಿಸಿದೆ. ಸೋಂಕುಕಾರಕ ಕೊರೊನಾ ವೈರಸ್‌ ದೇಹ ಪ್ರವೇಶ ತಡೆಯಲು ಯುನಿಸೆಫ್‌ ಕ್ರಮಗಳನ್ನು ಸೂಚಿಸಿದೆ. ಅದರ ಅನ್ವಯ ಕೆಲವನ್ನು ಪಾಲಿಸಲು ಕ್ರಮವಹಿಸಲಾಗಿದೆ ಎಂದು ಶಾಲಾ ಪ್ರಾಂಶುಪಾಲೆ ಜ್ಯೋತಿ ಹೇಳಿದ್ದಾರೆ.

ಯುನಿಸೆಫ್‌ ಪ್ರಕಟಣೆಯಲ್ಲಿ ಕೊರೊನಾ ವೈರಸ್‌ ಗಾತ್ರದಲ್ಲಿ 400-500 ಮೈಕ್ರೋ ಸೂಕ್ಷ ¾ ದಪ್ಪವಾಗಿದ್ದು, ಮಾಸ್ಕ್ ಇದರ ಪ್ರವೇಶ ತಡೆಯುತ್ತದೆ. 26-27 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಕೂಡಾ ವೈರಸ್‌ ಅನ್ನು ಕೊಲ್ಲುತ್ತದೆ. ಬಿಸಿ ನೀರು ಕುಡಿಯುವುದು, ಬಿಸಿಲಿಗೆ ದೇಹ ಒಡ್ಡುವುದು ಉತ್ತಮ. ಬಿಸಿ ನೀರು ಮತ್ತು ಉಪ್ಪಿನಿಂದ ಗಾರ್ಗಿಲ್‌ ಮಾಡುವುದು ಲಂಗ್ಸ್‌ಗೆ ವೈರಸ್‌ ಪ್ರವೇಶಿಸುವುದನ್ನು ತಡೆಯುತ್ತದೆ. ಇವು ಕೊರೊನಾ ವೈರಸ್‌ ಪ್ರವೇಶ ತಡೆಯುವ ಪರಿಣಾಮಕಾರಿ ಕ್ರಮಗಳಾಗಿದ್ದು, ಅನುಸರಿಸುವಂತೆ ಯುನೆಸೆಫ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.