ಕರಿಬಸವೇಶ್ವರ ಸ್ವಾಮಿ ರಥೋತ್ಸವಕ್ಕೆ ಅನುವನಹಳ್ಳಿ ಸಜ್ಜು


Team Udayavani, Feb 17, 2020, 1:01 PM IST

17-February-10

ಅಜ್ಜಂಪುರ: ತಾಲೂಕಿನ ಅನುವನಹಳ್ಳಿ ಗ್ರಾಮದ ಗುರು ಕರಿಬಸವೇಶ್ವರ ಸ್ವಾಮಿ ದೇವಾಲಯ, ಗುರು ಕರಿಬಸವೇಶ್ವರ ಸ್ವಾಮಿಯ “ಮುಳ್ಳುಗದ್ದುಗೆ ಪವಾಡ’ ಮತ್ತು 2ನೇ ವರ್ಷದ ರಥೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.

ಫೆ.19ರಂದು ಸಂಜೆ ಧಾರ್ಮಿಕ ಭಾವೈಕ್ಯತಾ ಸಮಾರಂಭ ಜರುಗಲಿದ್ದು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆಯ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಬಿಳಕಿಯ ರಾಚಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಣ್ಣೆ ಮಠದ ಅಭಿನವ ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ, ಬೀರೂರಿನ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.

ಬಳಿಕ ಶ್ರೀಸ್ವಾಮಿಗೆ ರುದ್ರಾಭಿಷೇಕ ನಡೆಯಲಿದೆ. ರಾತ್ರಿ 9.30ಕ್ಕೆ ಮುಳ್ಳುಗದ್ದಿಗೆ ಪವಾಡ ಜರುಗಲಿದೆ. 20ಕ್ಕೆ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ. ಶ್ರೀಸ್ವಾಮಿಗೆ ಮಹಾಮಸ್ತಾಕಾಭಿಷೇಕ, ರಥೋತ್ಸವದ ಕಳಸಾರೋಹಣ, ರಥೋತ್ಸವ, ರಾತ್ರಿ ಶ್ರೀಸ್ವಾಮಿಗೆ ಹೂವಿನ ಅಲಂಕಾರ, ಭಜನಾ ಕಾರ್ಯಕ್ರಮ ಜರುಗಲಿದೆ.

ಗುರು ಕರಿಬಸವೇಶ್ವರ ಸ್ವಾಮಿ ಅವಗಾಹನೆ ಆಗುತ್ತಿತ್ತು. ಈ ವೇಳೆ ಬೇಡಿದ ಭಕ್ತರ ಇಷ್ಟಾರ್ಥಗಳು ಸಿದ್ಧಿಯಾದವು. ಹೀಗೆ ಅನುಗ್ರಹ ಪಡೆದ ಟಿ.ಟಿ. ಗೋವಿಂದಪ್ಪ, ಮರವಂಜಿ ಈಶ್ವರಪ್ಪ ದೇವಾಲಯ ನಿರ್ಮಾಣಕ್ಕೆ ನಿವೇಶನ ಒದಗಿಸಿದರು. ಕಡೂರಿನ ಕಾಂತಿಲಾಲ್‌,
ಕಟ್ಟಡಕ್ಕೆ ಅಗತ್ಯ ಕಬ್ಬಿಣ ನೀಡಿದರು. ದೇವರ ಕಾರುಣ್ಯ ಲಭಿಸಿದೆ ಎನ್ನುವ ಅನೇಕರು ಸಹಕಾರ ನೀಡಿದರು. ಹೀಗೆ 27 ವರ್ಷಗಳ ಹಿಂದೆ ಗುರು ಕರಿಬಸವೇಶ್ವರ ದೇವಾಲಯ ನಿರ್ಮಿಸಿದರು ಎಂದು ಅರ್ಚಕ ಪುಟ್ಟಸ್ವಾಮಿ ತಿಳಿಸುತ್ತಾರೆ.

ದೇವರಿಗೆ ನಡೆದುಕೊಂಡ ಮೇಲೆ ವ್ಯವಹಾರಿಕವಾಗಿ ಲಾಭ ಆಯಿತು ಎಂಬ ಕಾರಣಕ್ಕೆ ಬಂಗನಕಟ್ಟೆಯ ದಿಲೀಪ್‌, ದೇವಾಲಯಕ್ಕೆ ಶ್ರೀಸ್ವಾಮಿಯ ಬೆಳ್ಳಿ ಮೂರ್ತಿಯನ್ನೂ ನೀಡಿದ್ದಾರೆ. ನಮ್ಮ ಕಷ್ಟ-ಕಾರ್ಪಣ್ಯಗಳನ್ನು ದೂರ ಮಾಡಿ, ನೆಮ್ಮದಿಯುತ ಜೀವನಕ್ಕೆ ಕರಿಸಬವೇಶ್ವರ ಸ್ವಾಮಿ ಅನುಗ್ರಹಿಸಿದ್ದಾನೆ ಎಂಬ ಹಿನ್ನೆಲೆಯಲ್ಲಿ ದಾಬಸ್‌ ಪೇಟೆಯ ಜ್ಯೋತಿ ಮಲ್ಲಿಕಾರ್ಜುನ್‌ “ತಾಮ್ರದ ಮೂರ್ತಿ’ಯನ್ನು ದೇವಾಲಯಕ್ಕೆ ಕೊಟ್ಟಿದ್ದಾರೆ. ಮೂಲ ವಿಗ್ರಹದ ಜತೆಗೆ ಇವುಗಳಿಗೂ ನಿತ್ಯ ಪೂಜಾ ಕೈಂಕರ್ಯಗಳು ಸಲ್ಲುತ್ತಿವೆ. ಗಾಳಿ ಸಂಬಂಧಿತ ದೆವ್ವ-ಪೀಡೆ, ಸೋಕು, ಮಾಠ-ಮಂತ್ರಗಳಿಂದ ತೊಂದರೆಗೆ ಒಳಗಾದವರು ಬರುತ್ತಾರೆ. ನಿವಾರಣೆಗೆ ಮೊರೆ ಇಡುತ್ತಾರೆ. ಸಮಸ್ಯೆ ಪರಿಹಾರ ಆಗುವ ತನಕ ಕಟ್ಟಲೆ ಇರುವುದೂ ಉಂಟು. ಅನೇಕರು ಇಲ್ಲಿ ಒಳಿತು ಕಂಡಿದ್ದಾರೆ ಎಂದು ಇಲ್ಲಿ ದಾಸೋಹ ಕೊಠಡಿ ಕಟ್ಟಿಸಿರುವ ಚಿಕ್ಕನಲ್ಲೂರು ಸಿದ್ರಾಮಣ್ಣ ವಿವರಿಸುತ್ತಾರೆ.

ಗುರು ಕರಿಬಸವೇಶ್ವರರು ಯೋಗಿಗಳು, ಪವಾಡ ಪುರುಷರು. ಅವರ ಅನುಗ್ರಹದಿಂದ ಇಷ್ಟಾರ್ಥಗಳು ಸಿದ್ಧಿಸುತ್ತವೆ. ಬೇಡಿಕೆಗಳು ಈಡೇರುತ್ತವೆ. ಹೆಚ್ಚಿನ ಭಕ್ತರು, ಜಾತ್ರಾ ಮಹೋತ್ಸವಕ್ಕೆ ಬಂದು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸುವಂತೆ ದೇವಾಲಯ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.