ಕೋವಿಡ್ ಭೀತಿ; ಮನೆಯಿಂದ ಹೊರಬರಲು ಜನರ ಹಿಂದೇಟು
Team Udayavani, May 23, 2020, 4:15 PM IST
ಆಲ್ದೂರು: ಮೂಡಿಗೆರೆ ವೈದ್ಯರೊಬ್ಬರ ಕೋವಿಡ್ ಪಾಸಿಟಿವ್ ಪ್ರಕರಣದಿಂದ ಆಲ್ದೂರು ಸುತ್ತಮುತ್ತ ಜನ ಬೆಚ್ಚಿಬಿದ್ದಿದ್ದು ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.
ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಿದರೂ ಸಹ ಜನರನ್ನು ಮನೆಯಿಂದ ಹೊರಬರದಂತೆ ತಡೆಯಲು ಸಾಧ್ಯವಾಗಿರಲಿಲ್ಲ. ಜನರನ್ನು ಮನೆಯಲ್ಲೇ ಇರುವಂತೆ ಮಾಡಲು ಎಲ್ಲಾ ರೀತಿಯ ತಂತ್ರಗಳನ್ನು ಸರಕಾರ ಮಾಡಿದರೂ ಜನರು ಸುಖಾ ಸುಮ್ಮನೆ ಮನೆಯಿಂದ ಹೊರಬರುತ್ತಿದ್ದು ಇವರನ್ನು ನಿಯಂತ್ರಿಸುವುದು ಪೊಲೀಸ್ ಇಲಾಖೆಗೆ ದೊಡ್ಡ ತಲೆ ನೋವಾಗಿತ್ತು. ಕೆಲವರಿಗೆ ಲಾಠಿ ರುಚಿ ತೋರಿಸಿದರೆ, ಮತ್ತೆ ಕೆಲವರ ವಾಹನಗಳನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದರೂ ಸಹ ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಚೆಕ್ಪೋಸ್ಟ್ ಗಳನ್ನು ಹಾಕಿ ವಾಹನಗಳ ತಪಾಸಣೆ ಮಾಡಲಾಗುತ್ತಿದ್ದರೂ ಜನರನ್ನು ನಿಯಂತ್ರಿಸಲು ಕಷ್ಟಪಡಬೇಕಿತ್ತು. ಆದರೆ ಮೂಡಿಗೆರೆ ವೈದ್ಯರಿಗೆ ಕೋವಿಡ್ ಪಾಸಿಟಿವ್ ಬಂದ ದಿನದಿಂದ ಜನರು ಸ್ವಯಂ ಬಂದಿಯಾಗಿದ್ದಾರೆ. ಜನರ ಓಡಾಟ ವಿರಳವಾಗುತ್ತಿದ್ದು ವಾಹನಗಳ ಓಡಾಟ ಕಡಿಮೆಯಾಗಿದೆ. ಬೆರಳೆಣಿಕೆಯ ಜನ ಮಾತ್ರ ಪಟ್ಟಣದಲ್ಲಿ ಕಂಡು ಬರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ