ವ್ಯಾಪಾರ- ವಹಿವಾಟು ನಡೆಸಲು ತೀರ್ಮಾನ
Team Udayavani, Apr 27, 2020, 4:03 PM IST
ಆಲ್ದೂರು: ಪಟ್ಟಣದಲ್ಲಿ ಅಂಗಡಿಗಳ ಬಾಗಿಲು ತೆರೆದು ವ್ಯಾಪಾರ ವಹಿವಾಟು ನಡೆಸಲು ಆಲ್ದೂರು ಠಾಣೆಯಲ್ಲಿ ಪಿಎಸ್ಐ ಸುನಿತಾ ವರ್ತಕರ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಿದರು.
ಆಲ್ದೂರು: ಪಟ್ಟಣದಲ್ಲಿ ಅಂಗಡಿಗಳ ಬಾಗಿಲು ತೆರೆದು ವ್ಯಾಪಾರ ವಹಿವಾಟು ನಡೆಸಲು ಆಲ್ದೂರು ಠಾಣೆಯಲ್ಲಿ ಪಿಎಸ್ಐ ಸುನಿತಾ ಅವರ ನೇತೃತ್ವದಲ್ಲಿ ಶನಿವಾರ ಸಂಜೆ ವರ್ತಕರ ಸಂಘ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿ- ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಕೊರೊನಾ ಸೋಂಕಿನಿಂದ ಮುಕ್ತವಾಗಿರುವ ಹಸಿರು ಪಟ್ಟಿಯಲ್ಲಿರುವ ಜಿಲ್ಲೆಗಳಿಗೆ ಲಾಕ್ ಡೌನ್ನಿಂದ ವಿನಾಯಿತಿ ನೀಡಿದ್ದು ಶನಿವಾರ ಬೆಳಗ್ಗೆಯಿಂದಲೇ ಪಟ್ಟಣದಲ್ಲಿ ಬಹುತೇಕ ಅಂಗಡಿಗಳು ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದು ಜನದಟ್ಟಣೆ ಹೆಚ್ಚಾಗಿತ್ತು.
ಪೊಲೀಸರು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಅಂಗಡಿಗಳ ಬಾಗಿಲು ಮುಚ್ಚಿಸಿದ್ದರು. ಪಟ್ಟಣದಲ್ಲಿ ಅಂಗಡಿಗಳನ್ನು ತೆರೆದು ವ್ಯಾಪಾರ ವ್ಯವಹಾರ ಮಾಡಲು ಸಮಯ ನಿಗದಿಗೊಳಿಸುವ ನಿಟ್ಟಿನಲ್ಲಿ ಠಾಣಾಧಿಕಾರಿ ಸುನಿತಾ ಅವರು ಶನಿವಾರ ಸಂಜೆ ವರ್ತಕರ ಸಂಘದವರ ಜೊತೆ ಸಭೆ ನಡೆಸಿ ಹಲವು ವಿಚಾರಗಳನ್ನು ಚರ್ಚಿಸಿ ಕೆಲವು ನಿರ್ಣಯ ಕೈಗೊಂಡರು. ಅಂತಿಮವಾಗಿ ಎಲ್ಲರ ಸಹಮತದೊಂದಿಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ತೀರ್ಮಾನಿಸಲಾಯಿತು.
ಆಲ್ದೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೋಮೇಗೌಡ ,ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಮೂರ್ತಿ, ಕಾರ್ಯದರ್ಶಿ ರಾಜೇಶ್, ಸದಸ್ಯರಾದ ರವಿಕುಮಾರ್, ರಾಜೀವ್, ನಾಗೇಂದ್ರ, ಜಯಪ್ರಕಾಶ್, ಕೃಷ್ಣ, ರಾಜು, ಚಂದ್ರು, ವಿಜಯ್ , ಶಫಿಕ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ