ಸಂತೆ ಗಲಾಟೆಯಲ್ಲೇ ಪರೀಕ್ಷೆ
Team Udayavani, Jun 28, 2020, 5:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆಲ್ದೂರು: ಪಟ್ಟಣದ ಸಂತೆ ಮೈದಾನದಲ್ಲಿ ಸಂತೆ ನಡೆಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಶನಿವಾರ ಪಟ್ಟಣದ ಮುಖ್ಯರಸ್ತೆಯ ಬದಿಯಲ್ಲೇ ಸಂತೆ ಬಿರುಸಿನಿಂದ ನಡೆದಿದ್ದು, ಸಂತೆ ಗಲಾಟೆ ಮಧ್ಯೆಯೇ ಎಸ್ಎಸ್ ಎಲ್ಸಿ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣವಾಗಿತ್ತು.
ಆಲ್ದೂರಿನಲ್ಲಿ ಪ್ರತಿ ಶನಿವಾರ ಸಂತೆ ನಡೆಯುತ್ತದೆ. ಆದರೆ ಕೋವಿಡ್ -19 ವೈರಸ್ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದರೂ ಪ್ರತಿ ಶನಿವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದೆ. ಈ ವಾರ ತರಕಾರಿ ಮಾರಾಟ ಮಾಡಲು ಪಟ್ಟಣಕ್ಕೆ ನೂರಾರು ವಾಹನಗಳು ಬಂದ ಹಿನ್ನೆಲೆಯಲ್ಲಿ ಸಂತೆ ನಡೆಯುವ ಆಲ್ದೂರಿನ ಸಂತೆ ಮೈದಾನದ ವಾಸಿಗಳು ವಾಹನಗಳನ್ನು ತಡೆದು ವಾಪಸ್ ಕಳುಹಿಸಿದ್ದಾರೆ. ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದ ಕಾರಣ ಪಟ್ಟಣದಲ್ಲಿ ಜನ ಜಂಗುಳಿ ಹೆಚ್ಚಾಗಿತ್ತು. ಸಂತೆಯ ಗಲಾಟೆ ನಡುವೆಯೇ ಎಸ್ಎಸ್ ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ