ಅಮೃತ್‌ ಕುಡಿವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ


Team Udayavani, Nov 2, 2021, 1:08 PM IST

ಅಮೃತ್‌ ಕುಡಿವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರದಲ್ಲಿ ಕೈಗೊಂಡಿರುವ ಒಳಚರಂಡಿ, ಅಮೃತ್‌ ಕುಡಿಯುವ ನೀರು ಯೋಜನೆ ಕಾಮಗಾರಿ ಹಂತಮತ್ತು ಗುಣಮಟ್ಟ ಕುರಿತು ಶಾಸಕ ಸಿ.ಟಿ. ರವಿ ಅಧಿಕಾರಿಗಳಜೊತೆ ನಗರ ಪ್ರದಕ್ಷಿಣೆ ಹಾಕಿ ವಾರ್ಡ್‌ಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಸೋಮವಾರ ನಗರದ ಬೇಲೂರು ರಸ್ತೆ, ಬೈಪಾಸ್‌, ಎಐಟಿ ವೃತ್ತ, ಹೌಸಿಂಗ್‌ ಬೋರ್ಡ್‌, ದಂಟರಮಕ್ಕಿ ಕೆರೆ ಏರಿ, ಶರೀಫ್‌ಗಲ್ಲಿ, ಮಾರ್ಕೆಟ್‌ ರಸ್ತೆ, ಟಿಪ್ಪುನಗರ, ಪಾಯಸ್‌ ಕಾಂಪೌಂಡ್‌, ತೊಗರಿಹಂಕಲ್‌ ವೃತ್ತ, ಹುಣಸೆ ಮರದ ಬೀದಿ, ಅಂಡೆ ಛತ್ರ, ಗುಂಡಪ್ಪ ಬೀದಿ, ರತ್ನಗಿರಿ ರಸ್ತೆ, ರಾಮನಹಳ್ಳಿ ಮತ್ತಿತರಕಡೆಗಳಲ್ಲಿ ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿ ಕಾರದ ಅಧಿಕಾರಿಗಳೊಂದಿಗೆ ಕಾಮಗಾರಿಗಳನ್ನು ವೀಕ್ಷಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಗರದಲ್ಲಿ ಕೈಗೊಂಡಿರುವ ಯುಜಿಡಿ ಹಾಗೂ ಅಮೃತ್‌ ಕಾಮಗಾರಿಗಳು ಕೆಲವು ಕಡೆಗಳಲ್ಲಿ ತಾಂತ್ರಿಕ, ಮತ್ತಿತರ ಕಾರಣದಿಂದಾಗಿ ವಿಳಂಬವಾಗಿದ್ದು, ಕಾಮಗಾರಿ ಗುಣಮಟ್ಟದ ಲೋಪದೋಷಗಳು, ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಸಮಾಲೋ ಚನೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದರು.

ನಗರದಲ್ಲಿನ 92 ರಸ್ತೆಗಳಿಗೆ ಸುಮಾರು 28 ಕೋಟಿ ಅನುದಾನದಲ್ಲಿ ಡಾಂಬರೀಕರಣ ನಡೆಯಲಿದೆ. ಇದಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದು ಟೆಂಡರ್‌ ಪ್ರಕ್ರಿಯೆ ಬಾಕಿಇದೆ. ಅಮೃತ್‌ ಹಾಗೂ ಯುಜಿಡಿ ಕಾಮಗಾರಿಗಳುಪೂರ್ಣಗೊಂಡಲ್ಲಿ ಮುಂದಿನ ಫೆಬ್ರವರಿಯಿಂದ ರಸ್ತೆಗಳ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಡಿಸೆಂಬರ್‌ ಅಥವಾ ಜನವರಿ ಅಂತ್ಯದೊಳಗೆ ಬಾಕಿ ಇರುವ ಯುಜಿಡಿ, ಅಮೃತ್‌ ಯೋಜನೆಯ ಕಾಮಗಾರಿಗಳುಪೂರ್ಣಗೊಳ್ಳಬೇಕು. ಗುತ್ತಿಗೆದಾರನ ವಿಳಂಬ ನೀತಿಯಿಂದಾಗಿಕಾಮಗಾರಿ ಪೂರ್ಣಗೊಂಡಿಲ್ಲ ಈ ಬಗ್ಗೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ ಇಲಾಖೆಯಿಂದಲೇ ಕಾಮಗಾರಿ ನಡೆಯುತ್ತಿದೆ ಎಂದರು.

ಬಸವನಹಳ್ಳಿ ಕೆರೆ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಮನವಿಮಾಡಲಾಗುವುದು. ಜೊತೆಗೆ ನಗರದಲ್ಲಿ ಬೀದಿದೀಪಗಳಅವ್ಯವಸ್ಥೆ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಕ್ರಮವಹಿಸಲಾಗಿದೆ. ನಗರದ ಎಲ್ಲಾ ವಾರ್ಡ್‌ಗಳಿಗೂ ಎಲ್‌ಇಡಿ ಬೀದಿ ದೀಪ ಅಳವಡಿಕೆಗೆ ನಗರಸಭೆ ಮುಂದಾಗಿದ್ದು ಟೆಂಡರ್‌ ಕರೆಯಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌, ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್‌, ತಹಶೀಲ್ದಾರ್‌ ಡಾ| ಕೆ.ಜೆ. ಕಾಂತರಾಜ್‌, ಬಿಜೆಪಿಮುಖಂಡ ಎಚ್‌.ಡಿ. ತಮ್ಮಯ್ಯ, ದೀಪಕ್‌ ದೊಡ್ಡಯ್ಯ, ಪುಷ್ಪರಾಜ್‌, ದೇವರಾಜ್‌ ಶೆಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.