ಬಿಜೆಪಿಯಿಂದ ಜನರ ದಿಕ್ಕು ತಪ್ಪಿಸುವ ಯತ್ನ
Team Udayavani, Jan 5, 2021, 2:39 PM IST
ಚಿಕ್ಕಮಗಳೂರು: ಗ್ರಾಪಂಗಳಲ್ಲಿ ಬಿಜೆಪಿ ನೇರವಾಗಿ ಅಧಿಕಾರ ಹಿಡಿಯಲು ಸಾಧ್ಯವಾಗದೆ ವಾಮಮಾರ್ಗ ಅನುಸರಿಸುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸಮಾಡುತ್ತಿದೆ. ಬೇರೆ ಪಕ್ಷಗಳ ಬೆಂಬಲದಿಂದ ಗೆದ್ದಅಭ್ಯರ್ಥಿಗಳಿಗೆ ಆಸೆ ಆಮಿಷ ಒಡ್ಡುವ ಮೂಲಕಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ| ಕೆ.ಪಿ. ಅಂಶುಮಂತ್ ಆರೋಪಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಗ್ರಾಪಂ ಚುನಾವಣೆಯಲ್ಲಿಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಬಿಜೆಪಿಯವರುನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆಂದು ಹೇಳುತ್ತಾಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.ಶೃಂಗೇರಿ ತಾಲೂಕಿನಲ್ಲಿ 172, ಮೂಡಿಗೆರೆ
ತಾಲೂಕಿನಲ್ಲಿ 188, ಚಿಕ್ಕಮಗಳೂರು ತಾಲೂಕಿನಲ್ಲಿ 85, ಕಡೂರು ತಾಲೂಕಿನಲ್ಲಿ 270, ತರೀಕೆರೆ ತಾಲೂಕಿನಲ್ಲಿ260 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಂದು ತಿಳಿಸಿದರು.
ಬಿಜೆಪಿಯವರು ಗ್ರಾಪಂ ಚುನಾವಣೆಯಲ್ಲಿ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.ರಾಜ್ಯ ಸರ್ಕಾರ ಜನಪರ ಕೆಲಸಗಳನ್ನು ಮಾಡಿದ್ದೇಆಗಿದಲ್ಲಿ ಚುನಾವಣೆಯಲ್ಲಿ ಆಡಳಿತ ಯಂತ್ರವನ್ನುದುರ್ಬಳಕೆ ಮಾಡಿಕೊಳ್ಳುವ ಅವಶ್ಯಕತೆ ಇರುತ್ತಿರಲಿಲ್ಲ,ಜನರ ಆಕ್ರೋಶಕ್ಕೂ ಗುರಿಯಾಗುತ್ತಿರಲಿಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜ.6ರಂದು ಮೈಸೂರು ವಿಭಾಗೀಯಮಟ್ಟದ ಮುಖಂಡರ ಸಭೆ ಆಯೋಜಿಸಲಾಗಿದೆ.ಈ ಸಭೆಯಲ್ಲಿ ಜಿಲ್ಲೆಯ 75 ಆಯ್ದ ಮುಖಂಡರನ್ನುಆಯ್ಕೆ ಮಾಡಲಾಗಿದ್ದು, ಸಭೆಯಲ್ಲಿ ಪಕ್ಷಸಂಘಟನೆ ಮತ್ತು ಬಿಜೆಪಿ ಸರ್ಕಾರದ ವೈಫಲ್ಯಗಳವಿರುದ್ಧದ ಹೋರಾಟದ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಿವಾನಂದಸ್ವಾಮಿ, ಮಂಜೇಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್ ಮೊಸೆಸ್, ಕಾರ್ತಿಕ್ ಜಿ. ಚೆಟ್ಟಿಯಾರ್, ಮಹಮದ್ ಮುದಾಫೀರ್ ಇದ್ದರು.
ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಕಾಂಗ್ರೆಸ್ ಹೆಚ್ಚಿನಸ್ಥಾನ ಗೆಲ್ಲಲಿದೆ. –ಡಾ| ಕೆ.ಪಿ.ಅಂಶುಮಂತ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ