ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ
Team Udayavani, Dec 29, 2020, 6:39 PM IST
ಶೃಂಗೇರಿ: ಕ್ಷೇತ್ರದ ಅಭಿವೃದ್ಧಿಗೆ ನನಗೆ ದೊರಕಿರುವ ಅವಕಾಶದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿ,ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೇನೆ ಎಂದುಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ಹೇಳಿದರು.
ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಯಾಗಿ ನೇಮಕಗೊಂಡಡಿ.ಎನ್. ಜೀವರಾಜ್ ಅವರನ್ನು ಶೃಂಗೇರಿಬಿಜೆಪಿ ಕಾರ್ಯಕರ್ತರು ಅವರ ಸ್ವಗೃಹದಲ್ಲಿಅಭಿನಂದಿಸಿದ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುತ್ತದೆ. ಕಸ್ತೂರಿ ರಂಗನ್ ವರದಿ ಮಲೆನಾಡಿಗೆ ತೂಗುಕತ್ತಿಯಾಗಿದ್ದು, ಇದು ಕಾಂಗ್ರೆಸ್ ಸರಕಾರದಪಾಪದ ಕೂಸಾಗಿದೆ. ಜನಸಾಮಾನ್ಯರಿಗೆಇದರಿಂದ ಉಂಟಾಗುವ ತೊಂದರೆ
ಬಗ್ಗೆ ಅರಿವಿದ್ದು, ಮುಖ್ಯಮಂತ್ರಿಗಳ ಬಳಿಸಂಸದರೊಂದಿಗೆ ಸೇರಿ ಈ ಬಗ್ಗೆ ಚರ್ಚಿಸಲಾಗಿದೆ.ಅತಿವೃಷ್ಠಿಯಿಂದ ಗ್ರಾಮೀಣ ಭಾಗದ ರಸ್ತೆಹಾಳಾಗಿದ್ದು, ಇವುಗಳನ್ನು ಆದ್ಯತೆ ಮೇಲೆಮರು ಡಾಂಬರೀಕರಣ ಗೊಳಿಸಲಾಗುತ್ತದೆ.ಅತಿವೃಷ್ಠಿ ಪರಿಹಾರದ ರೂಪದಲ್ಲಿ ರೈತರಿಗೆ ಈಗಾಗಲೇ ಅವರ ಖಾತೆಗೆ ನೇರವಾಗಿ ಜಮಾಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತು ಸಹ ರೈತರಖಾತೆಗೆ ಜಮಾ ಆಗಿದೆ ಎಂದರು.
ಜಿಪಂ ಸದಸ್ಯ ಬಿ. ಶಿವಶಂಕರ್ ಮಾತನಾಡಿ, ಕ್ಷೇತ್ರದ ಸಮಸ್ಯೆ ಬಗ್ಗೆ ಕಾಳಜಿ ಹೊಂದಿರುವಡಿ.ಎನ್. ಜೀವರಾಜ್ಗೆ ಉನ್ನತ ಹುದ್ದೆದೊರಕಿರುವುದು ಕ್ಷೇತ್ರದ ಜನರಿಗೆ ಸಂದಗೌರವವಾಗಿದೆ. ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸುವ ವಿಶ್ವಾಸವಿದೆ ಎಂದರು.
ಡಿ.ಎನ್. ಜೀವರಾಜ್ ಅವರನ್ನು ಇದೇಸಂದರ್ಭದಲ್ಲಿ ಅಭಿನಂದಿಸಲಾಯಿತು. ಬಿಜೆಪಿಮುಖಂಡರಾದ ತಲಗಾರು ಉಮೇಶ್,ಮಾವಿನಕಾಡು ರಂಗನಾಥ್, ರಾಮಕೃಷ್ಣ ರಾವ್,ವೇಣುಗೋಪಾಲ್, ಎಂ.ಎಲ್. ಪ್ರಕಾಶ್, ಅರುಣ್, ನೂತನಕುಮಾರ್, ಹರೀಶ್ ಶೆಟ್ಟಿ, ರಾಧಿಕಾ, ಶ್ರೀವಿದ್ಯಾ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ