ವಿಷಯವಿಲ್ಲದ್ದಕ್ಕೆ “ಅನ್ನಭಾಗ್ಯ’ ಟೀಕೆ: ಖಾದರ್
Team Udayavani, Dec 30, 2017, 7:20 AM IST
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ವಿಚಾರ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯವರು ಈಗ ಅನ್ನಭಾಗ್ಯ ವನ್ನು ನಮ್ಮ ಭಾಗ್ಯ ಎನ್ನುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಟೀಕಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ಕಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿರುವುದು ನಿಜ. ಆಹಾರ ಭದ್ರತೆ ಕಾಯಿದೆ ಯನ್ನು ಯುಪಿಎ ಸರ್ಕಾರ ಜಾರಿಗೆ ತಂದ ನಂತರ ಕೇಂದ್ರದಿಂದ ಸಬ್ಸಿಡಿ ಕೊಡಲಾಗುತ್ತಿದೆ. ಸಬ್ಸಿಡಿಯನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಕೊಡುತ್ತಿಲ್ಲ. ಅದನ್ನು ಎಲ್ಲ ರಾಜ್ಯಗಳಿಗೂ ಕೊಡುತ್ತಿದೆ. ಎಲ್ಲ ರಾಜ್ಯಗಳಿಗೂ ಸಬ್ಸಿಡಿ ಕೊಟ್ಟರೂ ಸಹ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿರುವುದು ಕರ್ನಾಟಕದಲ್ಲಿ ಮಾತ್ರ.
ಬಿಜೆಪಿ ಆಡಳಿತ ನಡೆಸುತ್ತಿರುವ ಯಾವುದೇ ರಾಜ್ಯದಲ್ಲಿಯೂ ಈ ಯೋಜನೆ ಜಾರಿಯಲ್ಲಿಲ್ಲ. ಬಿಜೆಪಿಯವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ಅಸ್ತ್ರವೂ ಇಲ್ಲ. ಅದಕ್ಕಾಗಿ ಚುನಾವಣೆ ಸಮೀಪಿಸಿದ ಕೂಡಲೆ ಅನ್ನಭಾಗ್ಯ ಯೋಜನೆಯನ್ನು ನಮ್ಮಭಾಗ್ಯ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್