ಮಲೆಕುಡಿ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲು ಮನವಿ
Team Udayavani, Oct 2, 2019, 3:43 PM IST
ಮೂಡಿಗೆರೆ: ಅತಿವೃಷ್ಟಿಯಿಂದಾಗಿ ಮನೆ ಹಾಗೂ ಕೃಷಿ ಜಮೀನು ಕಳೆದುಕೊಂಡಿರುವ ಮಧುಗುಂಡಿ ಹಾಗೂ ಅಲೇಕಾನ್ ಹೊರಟ್ಟಿ ಆದಿವಾಸಿ ಬುಡಕಟ್ಟು ಜನಾಂಗದ ಮಲೆಕುಡಿ ಸಮುದಾಯದವರು ಪುನರ್ವಸತಿ ಹಾಗೂ ಪರಿಹಾರ ನೀಡುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ನೂರಾರು ಮಲೆಕುಡಿ ಸಮುದಾಯದ ಕುಟುಂಬಗಳು ಗುಡ್ಡಗಾಡು ಪ್ರದೇಶದಲ್ಲಿ ವಾಸವಾಗಿದ್ದು, ಕೃಷಿ ಮತ್ತು ಕೂಲಿಯಿಂದ ಜೀವನ ನಡೆಸುತ್ತಿದ್ದಾರೆ. ಕಳೆದ ತಿಂಗಳು ಸುರಿದ ಮಳೆ ಗ್ರಾಮಗಳನ್ನು ಹಾನಿಗೊಳಗಾಗಿಸಿದೆ. ಈ ವೇಳೆ ಮಧುಗುಂಡಿಯ ಆದಿವಾಸಿ ಜನಾಂಗದ 12 ಕುಟುಂಬಗಳು ಮನೆ ಹಾಗೂ ಕೃಷಿ ಜಮೀನು ಕಳೆದುಕೊಂಡಿವೆ. ಅಲ್ಲದೇ, ಅಲೇಕಾನ್ ಹೊರಟ್ಟಿಯ ರಸ್ತೆಗಳು ನಿರ್ಣಾಮಗೊಂಡಿವೆ. ಇಲ್ಲಿನ ವಾಸಿಗಳಿಗೆ ದಿಕ್ಕು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡರು.
ಈಗಾಗಲೇ ಫಾರಂ ನಂ. 50, 53 ಮತ್ತು 57 ರಲ್ಲಿ ಭೂ ದಾಖಲಾತಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದು, ಕೆಲವರನ್ನು ಹೊರತುಪಡಿಸಿ ಉಳಿದವರಿಗೆ ಹಕ್ಕುಪತ್ರ ದೊರೆತಿಲ್ಲ ಮತ್ತು ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರಗಳನ್ನು ಪಡೆಯಲಾಗಿದೆ. ಈ ಕಾರಣದಿಂದ ಪುನರ್ವಸತಿ ಸಂದರ್ಭದಲ್ಲಿ ಹಕ್ಕುಪತ್ರ ಇದ್ದವರಿಗೆ ಮಾತ್ರ ಆದ್ಯತೆ ನೀಡುತ್ತಿರುವುದರಿಂದ ದಾಖಲೆ ಇಲ್ಲದವರು ತೊಂದರೆಗೀಡಾಗಿದ್ದಾರೆ. ಎಲ್ಲ ನೆರೆ ಸಂತ್ರಸ್ತರಿಗೂ ಸಮಾನ ಪರಿಹಾರ ನೀಡಬೇಕೆಂದರು. ಬೇರೆ ಜಿಲ್ಲೆಗಳಲ್ಲಿ ಆದಿವಾಸಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ.
ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಲ್ಲಿನ ಮೂಲ ನಿವಾಸಿಗಳೇ ಆಗಿರುವ ತಮ್ಮ ಸಮುದಾಯದ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಯಾವುದೇ ರೀತಿಯ ಸರ್ಕಾರಿ ಸವಲತ್ತು ನೀಡುತ್ತಿಲ್ಲ. ವಲಸಿಗರಿಗೆ ಮಾತ್ರ ಸಮಾಜ ಕಲ್ಯಾಣ ಇಲಾಖೆಯಿಂದ ಪೌಷ್ಟಿಕಾಂಶ ಆಹಾರ ನೀಡುತ್ತಿದ್ದಾರೆ. ಹಾಗಾಗಿ, ಕೂಡಲೇ ಸರ್ಕಾರ ಇತ್ತ ಗಮನ ಹರಿಸಿ ಮಲೆಕುಡಿ ಜನಾಂಗಗಳಿಗೂ ಸರ್ಕಾರಿ ಸವಲತ್ತು ವಿಸ್ತರಿಸಬೇಕೆಂದರು. ಮಲೆಕುಡಿ ಸಂಘದ ಜಿಲ್ಲಾದ್ಯಕ್ಷ ಎಚ್. ಎಸ್.ಗೋಪಾಲ್, ಕಾರ್ಯದರ್ಶಿ ರಂಜಿತ್, ಎಂ.ಸಿ.ಉದೇಶ್, ಕೆ.ಎಸ್.ಜಗಧೀಶ್, ಸುರೇಶ್, ಪ್ರವೀಣ್, ವಿಶೃತ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್