ನನ್ನ ಮೇಲೆ ಬಹಳ ದೊಡ್ಡ ಹೊಣೆಗಾರಿಕೆ ಹೊರಿಸಿದ್ದಾರೆ: ಗೃಹ ಸಚಿವ ಅರಗ ಜ್ಞಾನೆಂದ್ರ
Team Udayavani, Aug 7, 2021, 2:51 PM IST
ಚಿಕ್ಕಮಗಳೂರು: ನನ್ನ ಮೇಲೆ ಬಹಳ ದೊಡ್ಡ ಹೊಣೆಗಾರಿಕೆ ಹೊರಿಸಿದ್ದಾರೆ. ಗೃಹ ಖಾತೆ ಸಿಕ್ಕಿರುವುದು ನನಗೂ ಖುಷಿಯಾಗಿದೆ. ಬಹಳ ದೊಡ್ಡ ಖಾತೆ ಕೊಟ್ಟಿದ್ದಾರೆ, ಬಹಳ ಸಂತೋಷವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ ಹೇಳಿದರು.
ಚಿಕ್ಕಮಗಳೂರಿನ ಎನ್.ಆರ್.ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಬಹಳ ಸೂಕ್ಷ್ಮ ಇಲಾಖೆ. ಅದನ್ನು ನಾನು ನಿರ್ವಹಿಸಬಹುದೆಂದು ನನ್ನನ್ನು ಆಯ್ಕೆ ಮಾಡಿದ್ದಾರೆ. ಇದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿಗೆ ಧನ್ಯವಾದಗಳು ಹೇಳುತ್ತೇನೆ ಎಂದರು.
ಯಾವ ಖಾತೆಯೂ ದೊಡ್ಡದಲ್ಲ, ಯವ ಖಾತೆಯೂ ಸಣ್ಣದಲ್ಲ. ನಿಭಾಯಿಸುವ ವ್ಯಕ್ತಿಯ ಮೇಲೆ ನಿರ್ಧಾರವಾಗುತ್ತದೆ. ನನಗೆ ಯಾವ ನಿರೀಕ್ಷೆಯೂ ಇರಲಿಲ್ಲ. ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದಿದ್ದೆ ಎಂದರು.
ಇದನ್ನೂ ಓದಿ:‘ಜನತಾ ಪರಿವಾರ ಸರ್ಕಾರ’ದ ಛಾಯೆ ಕಳೆಯಲು ಸಂಘ ಹಿನ್ನೆಲೆಯವರಿಗೆ ಬಂಪರ್: ಏನಿದು ಲೆಕ್ಕಾಚಾರ?
ರಾಜ್ಯದ ಜನರ ರಕ್ಷಣೆ, ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಹಕಾರದಿಂದ ಖಾತೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ. ಈ ರಾಜ್ಯ ಶಾಂತಿ ಸುವ್ಯವಸ್ಥೆಯಿಂದ ಇರುವ ಹಾಗೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಸಂಘ ಕೊಟ್ಟ ಶಿಸ್ತು, ಸಂಯಮ ಖಾತೆ ನಿಭಾಯಿಸಲು ಸಹಕಾರಿಯಾಗುತ್ತದೆ. ಗೃಹ ಖಾತೆಯನ್ನು ರಾಜ್ಯದ ಜನರ ಪರವಾಗಿ ಇರುವಂತೆ ಮಾಡುತ್ತೇನೆ ಎಂದು ಎನ್.ಆರ್.ಪುರದಲ್ಲಿಅರಗ ಜ್ಞಾನೆಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ