ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹ
ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ
Team Udayavani, May 26, 2022, 5:39 PM IST
ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ ಅಪಮಾನ ಮಾಡಿರುವ ಪಠ್ಯ-ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ಮೈದಾನದ ಗಾಂಧಿ ಪ್ರತಿಮೆ ಮುಂಭಾಗ ಸಮಾವೇಶಗೊಂಡ ಮುಖಂಡರು ಮತ್ತು ಕಾರ್ಯಕರ್ತರು ರೋಹಿತ್ ಚಕ್ರತೀರ್ಥ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಮಾನದಂಡವಿದೆ. ರೋಹಿತ್ ಚಕ್ರತೀರ್ಥ ಅವರಿಗೆ ಯಾವ ಮಾನದಂಡ ಆಧಾರದ ಮೇಲೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಪ್ರಶ್ನಿಸಿದರು.
ರೋಹಿತ್ ಚಕ್ರತೀರ್ಥ ಶಿಕ್ಷಣ ಕ್ಷೇತ್ರದಲ್ಲಿ ಯಾವ ಅನುಭವ ಹೊಂದಿದ್ದಾರೆ. ಯಾವ ಅನ್ವೇ ಷಣೆ ಮಾಡಿದ್ದಾರೆ. ಇವರು ಬರೆದಿರುವ ಪುಸ್ತಕ ವಿಶ್ವವಿದ್ಯಾಲಯದಲ್ಲಿ ಪಠ್ಯವಾಗಿದೆ. ಯಾವ ಸಾಧನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಠ್ಯಪುಸ್ತಕ ಪರಿಷ್ಕರಣೆ ಇಂದು ನಿನ್ನೆಯದಲ್ಲ. ಪಠ್ಯದಲ್ಲಿ ಮಕ್ಕಳ ಭವಿಷ್ಯ ಅಡಗಿದ್ದು, ತರ್ಕ ಬದ್ಧ ಸಮಿತಿ ಇದರಬೇಕು. ಅನಾನುಭವಿ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಅಧ್ಯಕ್ಷರನ್ನಾಗಿ ಮಾಡಿರುವುದು ಎಷ್ಟು ಸರಿ ಎಂದರು.
ಕುವೆಂಪು ರಚಿತ ನಾಡಗೀತೆಗೆ ಈ ನಾಡಿನ ಜನರು ಗೌರವ ಪೂರ್ವಕವಾಗಿ ಕಾಣುತ್ತಾರೆ. ರಾಷ್ಟ್ರಗೀತೆಗೆ ನೀಡುವಷ್ಟು ಗೌರವವನ್ನು ನಾಡಗೀತೆಗೂ ನೀಡಲಾಗುತ್ತಿದೆ. ಅಂತಹ ನಾಡ ಗೀತೆಗೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದು, ಆತನ ವಿರುದ್ಧ ದ್ರೇಶದ್ರೋಹ ಪ್ರಕರಣ ದಾಖಲಿಸಿ ಬಂ ಧಿಸಬೇಕು. ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ನಾರಾಯಣ ಗುರುಗಳು ಶ್ರೇಷ್ಠ ದಾರ್ಶನಿಕರಾಗಿದ್ದು, ಸಮಾಜ ಸುಧಾರಕರಾಗಿದ್ದಾರೆ. ಅವರ ತತ್ವ ಸಿದ್ಧಾಂತ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಆದರೆ, ನಾರಾಯಣ ಗುರುಗಳ ತತ್ವ ಸಿದ್ಧಾಂತ ಪಠ್ಯದಿಂದ ಕೈಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದರು.
ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಪ್ರಾರಂಭಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ಮತ್ತೂಂದು ಕಡೆ ಅವರ ತತ್ವ ಸಿದ್ಧಾಂತಗಳನ್ನು ಪಠ್ಯದಿಂದ ಹೊರಗಿಡಲಾಗುತ್ತಿದೆ. ಅವರ ತತ್ವ ಸಿದ್ಧಾಂತಗಳನ್ನು ಪಠ್ಯದಿಂದ ಹೊರಗಿಟ್ಟು ಅವರ ಹೆಸರಿನಲ್ಲಿ ಶಾಲೆಗಳನ್ನು ತೆರೆಯುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ನಂತರ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಗೋಪಿ, ಮುಖಂಡರಾದ ಹೊಲದಗದ್ದೆ ಗಿರೀಶ್, ಬಿ.ಎಂ.ತಿಮ್ಮಶೆಟ್ಟಿ, ಸಿ.ಕೆ. ಮೂರ್ತಿ, ದೇವಿ ಪ್ರಸಾದ್ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ