ಮತ್ತೆ ಆಶ್ಲೇಷಾ ಆರ್ಭಟ: ಜನಜೀವನ ಅಸ್ತವ್ಯಸ್ತ
Team Udayavani, Aug 17, 2018, 5:06 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆಶ್ಲೇಷಾ ಮಳೆ ಪುನಃ ಆರ್ಭಟಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗವಾದ ಶೃಂಗೇರಿ, ಮೂಡಿಗೆರೆ, ಕೊಪ್ಪ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ನದಿಯ ನೀರು ಜಮೀನುಗಳಿಗೆ ನುಗ್ಗಿದೆ.
ಪ್ರವಾಸಿಗರಿಗೆ ನಿರ್ಬಂಧ: ಗುಡ್ಡ ಕುಸಿಯುತ್ತಿರುವುದರಿಂದ ಅಪಾಯದ ಮುನ್ಸೂಚನೆ ಅರಿತು ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧಿಂಸಲಾಗಿದೆ.
ಶೃಂಗೇರಿಯ ಗಾಂಧಿ ಮೈದಾನ ನೀರಿನಿಂದ ಆವೃತವಾಗಿದ್ದು, ಗುಡ್ಡೇತೋಟದಲ್ಲಿ 4 ಕಡೆ ರಸ್ತೆ ಬಿರುಕು ಬಿಟ್ಟಿದೆ. ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ 15ನೇ ಬಾರಿಗೆ ತುಂಬಿದೆ. ನಂತರ ಮಳೆ ಕಡಿಮೆಯಾಗಿದ್ದರಿಂದ ಸಂಚಾರಕ್ಕೆ ರೆದುಕೊಂಡಿದೆ.ಶೃಂಗೇರಿ ರಾಷ್ಟ್ರೀಯ ಹೆದ್ದಾರಿ, ತನಿಗೋಡು ರಸ್ತೆಗೂ ನೀರು ನುಗ್ಗಿದೆ.
ಬಾಳೆಹೊನ್ನೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ನದಿ ಅಕ್ಕಪಕ್ಕದ ತೋಟಗಳಿಗೆ ನೀರು ನುಗ್ಗಿದೆ. ಜೀವನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಇಳಿಕೆಯಾಗಿಲ್ಲ, ಮಲೆನಾಡು ಭಾಗದಲ್ಲಿ ಬಿಟ್ಟು,ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿವೆ. ಬುಧವಾರಕ್ಕೆ ಹೋಲಿಸಿದರೆ ಗುರುವಾರ ಮಳೆಯ ಪ್ರಮಾಣದಲ್ಲಿ ಸ್ವಲ್ಪ ಕಡಿಮೆಯಾಗಿದೆ.
ಚಿಕ್ಕಮಗಳೂರು ತಾಲೂಕಿನ ಕೋಟೆವೂರಿನ ಉದ್ದಮ್ಮ, ಹೊಸಳ್ಳಿಪೇಟೆಯ ಸರಸ್ವತಿ ಅವರ ಮನೆಗಳು ಭಾಗಶಃ, ಸವಿತಾ ಅವರಿಗೆ ಸೇರಿದ ಮನೆ ಶೇ.100 ಹಾನಿಯಾಗಿದೆ. ಸೀಗೋಡಿನ ಯಶೋಧ, ನರಸಿಂಹರಾಜಪುರ ಪಟ್ಟಣದ ಮಂಜುಳಾ ಅವರ ಮನೆಗಳಿಗೂ ಹಾನಿಯಾಗಿದೆ.
ಶೃಂಗೇರಿ: ಒಂದೇ ವಾರದಲ್ಲಿ ಮೂರನೇ ಬಾರಿ ಪ್ರವಾಹ ಶೃಂಗೇರಿ: ಆಶ್ಲೇಷಾ ಮಳೆಯಬ್ಬರ ಮುಂದುವರಿದಿದ್ದು,
ಒಂದೇ ವಾರದಲ್ಲಿ ಮೂರನೇ ಬಾರಿಗೆ ತುಂಗೆಯಲ್ಲಿ ಪ್ರವಾಹ ಉಂಟಾಗಿದೆ. ಗುರುವಾರ ದಿನವಿಡೀ ಮಳೆ ಸುರಿದಿದ್ದು, ನದಿ ನೀರಿನ ಮಟ್ಟ ಏರಿಕೆಯಾಗತೊಡಗಿದೆ. ಶಾಲೆ, ಕಾಲೇಜುಗಳಿಗೆ ಶುಕ್ರವಾರವೂ ರಜೆ ನೀಡಲಾಗಿದೆ. ಪ್ರವಾಹದ ನೀರು ಪಟ್ಟಣದ ಬೈಪಾಸ್ ರಸ್ತೆ ಹಾಗೂ ಕೆವಿಆರ್ ರಸ್ತೆಗೆ ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ. ಕಾವಡಿ ಸಮೀಪದ ಕಾರ್ಮಿಕರ ಶೆಡ್ಗಳಿಗೆ ನೀರು ನುಗ್ಗಿದೆ. ತೋಟ,ಗದ್ದೆಗಳಿಗೆ ನೀರು ನುಗ್ಗುತ್ತಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದೆ. ಮರ್ಕಲ್ ಗ್ರಾಪಂನ ಕೋಗೋಡು ಗ್ರಾಮದ
ವಡಗೆರೆಮನೆಯ ಲಕ್ಷಿ ನಾರಾಯಣ ಅವರ ಮನೆಗೆ ದರೆ ಕುಸಿದು ಮನೆ ಸಂಪೂರ್ಣ ಜಖಂಗೊಂಡಿದೆ. ಯಡದಾಳು
ಗ್ರಾಮದ ಕೊಠಾರಿಕೊಪ್ಪ ಹಿರಿಯಣ್ಣಯ್ಯರವರ ಮನೆ, ಕಾವಡಿ ಗ್ರಾಮದ ಹೆಗ್ಗದ್ದೆ ಗೋಪಾಲಕೃಷ್ಣಭಟ್ ಮನೆ, ಬೇಗಾನೆ ಹಕೀಂ ಸಾಹೇಬರ ಮನೆಗೆ ಧರೆ ಕುಸಿದು ಹಾನಿಯಾಗಿದೆ.
ಕೋಗೋಡು ಗ್ರಾಮದ ಹೊನ್ನೆಕುಡಿಗೆ ರಸ್ತೆಯಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಹೊನ್ನವಳ್ಳಿ ಗ್ರಾಮದ ಹೊಂಬಾಗಿ ದೇವಸ್ಥಾನ, ಹೊನ್ನವಳ್ಳಿ ದೇವಸ್ಥಾನ ಬಳಿ ಅಕೇಶಿಯಾ ಮರ ರಸ್ತೆಗೆ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು. ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಅಡ್ಡಗದ್ದೆ ಗ್ರಾಮದ ನೇರಳಕೊಡಿಗೆ ವೃತ್ತದ ಬಳಿ ಪ್ರಸಕ್ತ ವರ್ಷ ಅಭಿವೃದ್ಧಿಪಡಿಸಲಾಗಿದ್ದ ರಸ್ತೆ ಕುಸಿದು, ಶೃಂಗೇರಿ-ಆಗುಂಬೆ
ರಸ್ತೆ ಬಿರುಕು ಬಿಟ್ಟಿದೆ. ರಾಷ್ಟ್ರೀಯ ಹೆದ್ದಾರಿ 169ರ ಆನೆಗುಂದ, ಉಳುವೆ, ಕಾವಡಿ, ತನಿಕೋಡು ಬಳಿ ರಸ್ತೆ ಭೂಕುಸಿತ ಉಂಟಾಗಿದೆ. ಮೆಣಸೆ ಗ್ರಾಪಂನ ಮಸಿಗೆ ಗ್ರಾಮದಲ್ಲಿ ತೆಂಗಿನ ಮರ ಗಾಳಿಯ ಹೊಡೆತಕ್ಕೆ ಉರುಳಿ ಬಿದ್ದಿದೆ.
ವಿದ್ಯುತ್ ಸಂಪರ್ಕ ಕಡಿತ: ಸತತ ಗಾಳಿಯಿದ ವಿದ್ಯುತ್ ಕಂಬ ನೆಲಕ್ಕುರುಳುತ್ತಿದ್ದು, ವಿದ್ಯುತ್ ಸಂಪರ್ಕ ಸಾಧ್ಯವಾಗುತ್ತಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ