ಶಾಸಕ ಕುಮಾರಸ್ವಾಮಿ ಮೇಲೆ ಹಲ್ಲೆ ಪ್ರಕರಣ: ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರ ಬಂಧನ?
Team Udayavani, Nov 21, 2022, 12:08 PM IST
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಸಂಬಂಧ ಪೊಲೀಸರು ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರನ್ನು ಬಂಧಿಸಿದ್ದಾರೆ.
ಸೋಮವಾರ ಮುಂಜಾನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮಕ್ಕೆ ಹೋದ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಏನಿದು ಘಟನೆ?
ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ಹುಲ್ಲು ಕತ್ತರಿಸಲು ಹೋದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗ್ರಾಮದ ಶೋಭಾ ಸಾವನ್ನಪ್ಪಿದ್ದರು. ಕಾಡಾನೆ ಹಿಡಿಯಬೇಕು ಎಂದು ಆಗ್ರಹಿಸಿ ನಿನ್ನೆ ಇಡೀ ದಿನ ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.
ಸ್ಥಳೀಯ ಶಾಸಕ ಕುಮಾರಸ್ವಾಮಿ ಅವರು ಗ್ರಾಮಕ್ಕೆ ಸಂಜೆ 6 ಗಂಟೆ ವೇಳೆಗೆ ಭೇಟಿ ನೀಡಿದ್ದರು. ಬೆಳಗ್ಗೆ 7.30ಕ್ಕೆ ಘಟನೆಯಾದರೂ ಶಾಸಕರು ತಡವಾಗಿ ಹೋಗಿದ್ದಕ್ಕೆ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಮಾತಿನ ಚಕಮಕಿ ನಡೆದು ಪ್ರತಿಭಟನಕಾರರ ಮೇಲೆ ಲಾಠಿಚಾರ್ಜ್ ಕೂಡಾ ನಡೆಸಲಾಗಿತ್ತು. ಗಲಭೆಯ ನಡುವಿನಿಂದ ಪೊಲೀಸರು ಶಾಸಕ ಕುಮಾರಸ್ವಾಮಿಯನ್ನು ಸುರಕ್ಷಿತವಾಗಿ ಕರೆ ತಂದಿದ್ದರು. ಆದರೆ ಆ ಬಳಿಕ ಹರಿದ ಬಟ್ಟೆಯನ್ನು ತೋರಿಸಿ ಜನರು ಹಲ್ಲೆ ಮಾಡಿದ್ದರು ಎಂದು ಶಾಸಕರು ಆರೋಪಿಸಿದ್ದರು.
ಸದ್ಯ ಪೊಲೀಸರು ಗ್ರಾಮದ ಹಲವರನ್ನು ಬಂಧಿಸಿದ್ದಾರೆ. ಅತ್ತ ಆನೆ ದಾಳಿಗೆ ಬಲಿಯಾದ ಶೋಭಾ ಅಂತ್ಯಸಂಸ್ಕಾರ ಇನ್ನೂ ನೆರವೇರಿಲ್ಲ. ಲಾಠಿಚಾರ್ಜ್, ಬಂಧನ ವಿರೋಧಿಸಿ ಇಂದು ಮತ್ತೆ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ