ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ: ಆರೋಪಿ ಪರಾರಿ
Team Udayavani, Oct 23, 2020, 1:16 PM IST
ಚಿಕ್ಕಮಗಳೂರು: ಅರಣ್ಯ ವ್ಯಾಪ್ತಿಯಲ್ಲಿರುವ ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೇ ಗ್ರಾಮದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ವೈರಲ್ ಆದ ಕಾರಣ ಪ್ರಕರಣ ಬೆಳಕಿಗೆ ಬಂದಿದೆ.
ಪ್ರವೀಣ್ ಎಂಬವರ ಗುಡಿಸಲು ಅರಣ್ಯ ಪ್ರದೇಶದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗುಡಿಸಲು ತೆರವು ಮಾಡಲು ತೆರಳಿದ್ದರು. ಆದರೆ ಈ ವೇಳೆ ಕುಟುಂಬ ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಗುಡಿಸಲು ಅರಣ್ಯ ವ್ಯಾಪ್ತಿಯಲ್ಲಿದೆ ಎಂದು ಅಧಿಕಾರಿಗಳ ವಾದ ಮಾಡಿದರೆ, ಈ ಜಾಗ ನಮ್ಮದು ಎಂದು ಮನೆಯವರ ವಾದ ಮಾಡಿದ್ದಾರೆ.
ಈ ವೇಳೆ ಅರಣ್ಯ ಸಿಬ್ಬಂದಿ ಚಂದನ್ ಗೌಡ ಮೇಲೆ ದೊಣ್ಣೆಯಿಂದ ಪ್ರವೀಣ್ ಎಂಬಾತ ಹಲ್ಲೆ ಮಾಡಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಆರೋಪಿ ಪ್ರವೀಣ್ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ರೋಗ: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ
ಮಲೆನಾಡಿನಲ್ಲಿ ಅರಣ್ಯ ಇಲಾಖೆ ಮತ್ತು ಜನರ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ