ಕೊಟ್ಟಿಗೆಹಾರ: ಅಡ್ಡ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ; ಮೂವರಿಗೆ ಗಾಯ
Team Udayavani, Aug 28, 2022, 12:44 PM IST
ಕೊಟ್ಟಿಗೆಹಾರ: ರಸ್ತೆಯಲ್ಲಿ ಅಡ್ಡ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ಆಟೋವೊಂದು ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ಬಣಕಲ್ ಹೋಬಳಿಯ ದಾಸರಹಳ್ಳಿ ಸಮೀಪ ನಡೆದಿದೆ.
ಕೂಲಿ ಕಾರ್ಮಿಕರಾದ ಪ್ರೇಮ, ಶಾರದ, ಅಪ್ಪಿ ಹಾಗೂ ಆಟೋ ಚಾಲಕ ಶರತ್ ಗಾಯಗೊಂಡಿದ್ದಾರೆ. ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಆಟೋಗೆ ಅಡ್ಡ ಬಂದ ಭಾರೀ ಗಾತ್ರದ ಕಾಡು ಹಂದಿಯೊಂದು ಏಕಾಏಕಿ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಯತ್ನಸಿದ ಆಟೋ ರಸ್ತೆಯಲ್ಲಿ ಎರಡು ಪಲ್ಟಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ