ಅರ್ಜಿ ಸಲ್ಲಿಸಲು ಆಟೋ-ಟ್ಯಾಕ್ಸಿ ಚಾಲಕರ ಪರದಾಟ


Team Udayavani, May 26, 2020, 10:44 AM IST

ಅರ್ಜಿ ಸಲ್ಲಿಸಲು ಆಟೋ-ಟ್ಯಾಕ್ಸಿ ಚಾಲಕರ ಪರದಾಟ

ಬೀರೂರು: ಆಟೋ ಮತ್ತು ಚಾಲಕರು.

ಬೀರೂರು: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸತತ ಎರಡು ತಿಂಗಳಿನಿಂದ ದುಡಿಮೆ ಇಲ್ಲದೆ ಕಂಗೆಟ್ಟು ಕುಳಿತಿದ್ದ ವೃತ್ತಿ ಆಧಾರಿತ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ನೆರವು ನೀಡಲೆಂದು ಸರ್ಕಾರ ಮುಂದಾಗಿದ್ದನ್ನು ತಿಳಿದು ಆಟೋ, ಟ್ಯಾಕ್ಸಿ ಚಾಲಕರ ಮುಖದಲ್ಲಿ ಮಂದಾಹಾಸ ಮೂಡಿತ್ತು. ಆದರೆ, ಸೇವಾಸಿಂಧು ಆ್ಯಪ್‌ನಲ್ಲಿ ಅಗತ್ಯ ದಾಖಲೆಗಳನ್ನು ದಾಖಲಿಸಿ ಅರ್ಜಿ ಸಲ್ಲಿಸಬೇಕು ಎಂಬ ನಿಯಮ ನಗೆ ಬಾಡಿಸಿದೆ.

ರಾಜ್ಯ ಸರ್ಕಾರ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರ ರೂ.ನೀಡಲು ಹಣ ಮೀಸಲಿಟ್ಟಿದ್ದು, ವೃತ್ತಿಪರ ಚಾಲಕರ ಕುಟುಂಬಗಳು ಕಷ್ಟ ಕಾಲದಲ್ಲಿ ನೆರವು ದೊರೆತಂತೆ ಸಂಭ್ರಮಿಸಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು 10-12 ದಿನಗಳು ಕಳೆದರೂ ಅರ್ಜಿ ಸಲ್ಲಿಸಲು ಅಪ್ಲಿಕೇಷನ್‌ ಲಿಂಕ್‌ ತೆರೆದಿರಲಿಲ್ಲ. ಶುಕ್ರವಾರ ಸಂಜೆಯಿಂದ ಸರ್ವರ್‌ ಕಾರ್ಯಾರಂಭ ಮಾಡಿದ್ದರೂ ಅರ್ಜಿ ಸಲ್ಲಿಸುವವಲ್ಲಿ ತೀರ ವಿಳಂಬವಾಗುತ್ತಿದೆ ಅಥವಾ ಅರ್ಜಿಗಳು ಪೂರ್ಣವಾಗುತ್ತಿಲ್ಲ ಎನ್ನುವುದು ಆಟೋ ಮತ್ತು ಟ್ಯಾಕ್ಸಿ ಚಾಲಕರ ದೂರು.

ಸರ್ಕಾರ ಪರಿಹಾರ ನೀಡುವುದಾಗಿ ಘೋಷಿಸಿ ಸುಮಾರು 15-20 ದಿನಗಳು ಕಳೆದ ಬಳಿಕ ಸೇವಾಸಿಂಧು ವೆಬ್‌ಸೈಟ್‌ ಮೂಲಕ ಲಿಂಕ್‌ ಗೆ ಸೂಚಿಸಿದೆ. ಈ ಲಿಂಕ್‌ ಮೂಲಕ ದಿನವೆಲ್ಲ ಪ್ರಯತ್ನಿಸಿದರೂ ಒಬ್ಬರ ಅರ್ಜಿಯನ್ನೂ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಚಾಲಕನ ಹೆಸರು, ವಿಳಾಸ, ಆಧಾರ್‌ ಸಂಖ್ಯೆ ಭರ್ತಿ ಆದ ಬಳಿಕ ಆಧಾರ್‌ ನೋಂದಾಯಿತ ಮೊಬೈಲ್‌ ಗೆ ಒಟಿಪಿ ಬರುತ್ತಿದೆ. ಅದನ್ನು ಭರ್ತಿ ಮಾಡಿದ ಬಳಿಕ ಚಾಲಕನ ಪರವಾನಗಿ ವಿವರ ಭರ್ತಿ ಮಾಡಿದಾಗ ಅನುಜ್ಞಾ ಪತ್ರದ ವಿವರಗಳು ಸ್ವಯಂ ದಾಖಲಾಗುತ್ತವೆ. ಬಳಿಕ ವಾಹನದ ಮಾಹಿತಿ ಹಾಗೂ ಅದರ ನೋಂದಾಯಿತ ಪತ್ರದ ಮಾಹಿತಿ ಭರ್ತಿ ಮಾಡಬೇಕು. ಆದರೆ ಈ ಪ್ರಕ್ರಿಯೆ ಬಳಿಕ ಅರ್ಜಿ ಪೂರ್ಣಗೊಳಿಸುವಿಕೆ ಸ್ಥಗಿತವಾಗುತ್ತಿದೆ. ಹಾಗಾಗಿ, ಮುಂದಿನ ವಿವರಗಳನ್ನು ಭರ್ತಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ವೃತ್ತಿಪರ ಚಾಲಕರ ದೂರಾಗಿದೆ.

ನಾವು ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಅರ್ಜಿ ಸಲ್ಲಿಸಲು ಮುಂದಾದರೆ ಸರ್ವರ್‌ ಸಮಸ್ಯೆ ಕಂಡು ಬರುತ್ತಿದೆ. ಸರ್ಕಾರ ಪರಿಹಾರ ಎನ್ನುವ ತುಪ್ಪವನ್ನು ನಮ್ಮಂತಹವರ ಮೂಗಿಗೆ ಸವರಿ ಬರಿ ವಾಸನೆಯಲ್ಲಿಯೇ ತೃಪ್ತಿ ಪಡುವಂತೆ ಮಾಡುತ್ತಿದೆ. ಚಾಲನಾ ವೃತ್ತಿ ಅವಲಂಬಿಸಿರುವ ಹಲವರ ಬಳಿ ಸ್ವಂತ ವಾಹನವಿಲ್ಲ. ಇನ್ನೂ ಕೆಲವರು ಪರವಾನಗಿ ಬ್ಯಾಡ್ಜ್ ಮಾಡಿಸಿಲ್ಲ. ಸಂಕಷ್ಟದಲ್ಲಿರುವ ಚಾಲಕ ಮತ್ತು ಆತನ ಕುಟುಂಬ ಕೈ ಜಾರಿದ ಬುತ್ತಿ ಎಂದು ಭಾವಿಸುವಂತಾಗಿದೆ. ಸಾರಿಗೆ ಸಚಿವರು ಆಧಾರ್‌ ಸಂಖ್ಯೆ, ಬ್ಯಾಂಕ್‌ ಮಾಹಿತಿ ಮತ್ತು ಚಾಲನಾ ಪರವಾನಗಿ ಮುಖಾಂತರ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರೂ ಸೇವಾಸಿಂಧು ಅಪ್ಲಿಕೇಷನ್‌ ವಾಹನದ ಮಾಲೀಕತ್ವ, ಆರ್‌ಸಿ ಸಂಖ್ಯೆ, ಬ್ಯಾಡ್ಜ್ ಮತ್ತಿತರ ವಿವರಗಳನ್ನು ಕೇಳುತ್ತಿದೆ. ಸಂಕಟಮಯ ಸನ್ನಿವೇಶದಲ್ಲಿ ಸರಳವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಸಿ ಶೀಘ್ರ ಪರಿಹಾರ ದೊರಕಿಸಿಕೊಡಲಿ ಎನ್ನುವುದು ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮಾಲತೇಶ್‌
ಅವರ ಒತ್ತಾಯ.

ಒಟ್ಟಿನಲ್ಲಿ ಚಾಲಕ ವೃತ್ತಿ ಅವಲಂಬಿಸಿರುವವರಿಗೆ ಎಂದೇ ಘೋಷಿಸಲಾದ ಯೋಜನೆಯಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸುಲಭವಾಗಿಸಿ ಗೊಂದಲಗಳಿಗೆ ಆಸ್ಪದ ನೀಡದೆ ಅರ್ಹರಿಗೆ ಪರಿಹಾರ ದೊರಕುವಂತಾಗಲಿ ಎನ್ನುವುದು ಚಾಲಕರ ಆಶಯ.

ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಸರ್ಕಾರ ಸೂಚಿಸಿದೆ. ಇದು ರಾಜ್ಯಾದ್ಯಂತ ನಡೆದಿರುವ ಪ್ರಕ್ರಿಯೆ. ಸರ್ವರ್‌ ಸಮಸ್ಯೆ ಕೂಡಾ ಸಾಮಾನ್ಯವೇ ಆಗಿದೆ. ಚಾಲಕ
ವರ್ಗದವರು ಆತಂಕ ಪಡದೆ ತಾಳ್ಮೆಯಿಂದ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಂಡಿರಬೇಕು ಮತ್ತು ಸಮಸ್ಯೆ ಬಗೆಹರಿದ ತಕ್ಷಣ ವೇಗವಾಗಿ ಅರ್ಜಿ ಸ್ವೀಕೃತಿ ನಡೆಯಲಿದೆ.
ಮುರುಗೇಂದ್ರ ಶಿರೋಳ್ಕರ್‌, ಸಾರಿಗೆ ಅಧಿಕಾರಿ, ಚಿಕ್ಕಮಗಳೂರು

ಗಿರೀಶ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.