ತವರಿಗೆ ಪ್ರಯಾಣ ಬೆಳೆಸಿದ ಕಾರ್ಮಿಕರು!
ಕುಂದಾಪುರ-ಹಾನಗಲ್ಲಗೆ ತೆರಳಲು 5 ಬಸ್ಗಳ ವ್ಯವಸ್ಥೆ ಗ್ರಾಪಂ ವತಿಯಿಂದ ಮಾಸ್ಕ್-ಸ್ಯಾನಿಟೈಸರ್ ವಿತರಣೆ
Team Udayavani, May 1, 2020, 1:18 PM IST
ಬಾಳೆಹೊನ್ನೂರ: ನಿರಾಶ್ರಿತ ಕೂಲಿ ಕಾರ್ಮಿಕರನ್ನು ಅವರ ಊರುಗಳಿಗೆ ಸರಕಾರಿ ಬಸ್ನಲ್ಲಿ ಕಳುಹಿಸಿಕೊಡಲಾಯಿತು
ಬಾಳೆಹೊನ್ನೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಹೋಗಲಾರದೆ ಸಮಸ್ಯೆಯಲ್ಲಿದ್ದ ಕೂಲಿ ಕಾರ್ಮಿಕರನ್ನು ಸರ್ಕಾರಿ ಬಸ್ನಲ್ಲಿ ಕಳುಹಿಸಿಕೊಡಲಾಗುತ್ತಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಕಲಾರಂಗ ಕ್ರೀಡಾಂಗಣದಲ್ಲಿ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಮಾತನಾಡಿ, ಒಂದು ಬಸ್ನಲ್ಲಿ 25 ಪ್ರಯಾಣಿಕರು ಪ್ರಯಾಣಿಸಬಹುದಾಗಿದ್ದು, ಕುಂದಾಪುರ ಹಾಗೂ ಹಾನಗಲ್ಲಗೆ 5 ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದರು. ನೋಂದಣಿ ಮಾಡಿಕೊಂಡ ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಸಹಾಯ ಧನ ನೀಡಬಹುದಾಗಿದೆ. ಖಾಂಡ್ಯ ಹೋಬಳಿಯಿಂದ ಮೂರು ಬಸ್ಗಳಲ್ಲಿ ಕಾರ್ಮಿಕರನ್ನು ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ತೋಟದ ಮಾಲೀಕರು ಸಹ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲರೂ ಸುರಕ್ಷಿತರಾಗಿ ತಮ್ಮ ಸ್ವಂತ ಊರಿಗೆ ತಲುಪಲಿ ಎಂದು ಹಾರೈಸಿದರು.
ತೋಟದ ಮಾಲೀಕರು ಕೂಲಿ ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಭರಿಸಿದ್ದಾರೆ. ಅಲ್ಲದೆ ಗ್ರಾಪಂ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿದ್ದರು. ತಾ.ಪಂ ಸದಸ್ಯ ಪ್ರವೀಣ, ಹೂವಮ್ಮ, ಮಹಮ್ಮದ್ ಹನೀಫ್, ಮಹಮ್ಮದ್ ಜುಹೇಬ್, ರವಿಚಂದ್ರ, ಬಿ.ಕೆ. ಮಧುಸೂದನ್, ಎಂ.ಎಸ್.ಜಯಪ್ರಕಾಶ್, ಕೆ.ಎಸ್. ಸೋಮಶೇಖರ್, ಭಗವಾನ್, ಕೆ.ಕೆ.ವೆಂಕಟೇಶ್,
ಉಮೇಶ್ ಕಲ್ಮಕ್ಕಿ, ಉಪತಹಶೀಲ್ದಾರ್ ನಾಗೇಂದ್ರ, ಪೊಲೀಸ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ