ಅಕ್ಷರನಗರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ನಿರ್ಧಾರ


Team Udayavani, Jun 7, 2020, 1:04 PM IST

07-June-10

ಬಾಳೆಹೊನ್ನೂರು: ಅಕ್ಷರನಗರದಲ್ಲಿನ ಹಿಂದೂ ರುದ್ರಭೂಮಿಯಲ್ಲಿ ನಾಮಫಲಕ ಅಳವಡಿಸಲಾಯಿತು.

ಬಾಳೆಹೊನ್ನೂರು: ಬಿ. ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರನಗರದಲ್ಲಿ ಸುಮಾರು ಎರಡು ಎಕರೆ ಪ್ರದೇಶವನ್ನು ಹಿಂದೂ ರುದ್ರಭೂಮಿಗಾಗಿಮಿಸಲಿರಿಸಿಕೊಂಡು ಬಂದಿದ್ದು, ಗಿಡಗಂಟಿಗಳು ಬೆಳೆದುಕೊಂಡ ಹಿನ್ನೆಲೆಯಲ್ಲಿ ಅ ಪ್ರದೇಶವನ್ನು ಅಬಿವೃದ್ಧಿಪಡಿಸಲಾಗುವುದೆಂದು ಅಕ್ಷರನಗರ ಹಿಂದೂ ರುದ್ರಭೂಮಿ ಸಮಿತಿ ಅಧ್ಯಕ್ಷ ಎಂ.ಎಸ್‌. ಜಯಪ್ರಕಾಶ್‌ ತಿಳಿಸಿದ್ದಾರೆ.

ಅವರು ಶುಕ್ರವಾರ ಅಕ್ಷರನಗರದ ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಹಿಂದೂ ರುದ್ರಭೂಮಿ ಸಮಿತಿಯ ತುರ್ತು ಸಭೆಯಲ್ಲಿ ಮಾತನಾಡಿದರು. ಅಕ್ಷರನಗರ, ಇಳಾಲ್‌ಗ‌ದ್ದೆ, ಮೆಣಸುಕುಡಿಗೆ, ರೇಣುಕನಗರ, ಮಸೀದಿಕೆರೆ, ಮಾಗೋಡು, ವೀರಭದ್ರೇಶ್ವರ ನಗರ ಸೇರಿದಂತೆ ಸುತ್ತಮುತ್ತಲಲ್ಲಿ ಸಾವಿರಾರು ಮನೆಗಳಿದ್ದು ಏನಾದರೂ ಆಕಸ್ಮಿಕವಾಗಿ ಸಾವು ಸಂಭವಿಸಿದಲ್ಲಿ ಹಿಂದೂ ರುದ್ರಭೂಮಿಯ ಅವಶ್ಯಕತೆಯಿರುವ ಹಿನ್ನಲೆಯಲ್ಲಿ, ಹಲವಾರು ವರ್ಷಗಳ ಹಿಂದೆಯೇ ಎರಡು ಎಕರೆಯಷ್ಟು ಜಾಗವನ್ನು ಮೀಸಲಿಡಲಾಗಿತ್ತು,

ಕಾರಣಾಂತರದಿಂದ ಈ ಪ್ರದೇಶಕ್ಕೆ ಬೇಲಿ ನಿರ್ಮಿಸಿರಲಿಲ್ಲ, ಇದನ್ನೇ ಉದ್ದೇಶವಾಗಿಟ್ಟುಕೊಂಡು ಕೆಲವರು ಈ ಪ್ರದೇಶದಲ್ಲಿ ಕಸವನ್ನು ಎಸೆದು ಪರಿಸರ ಹಾಳು ಮಾಡುವುದಲ್ಲದೆ ಅಕ್ರಮವಾಗಿ ಶೆಡ್‌ ನಿರ್ಮಿಸಿಕೊಂಡು ರುದ್ರಭೂಮಿ ಜಾಗ ಅತಿಕ್ರಮಣ ಮಾಡಲು ಪ್ರಯತ್ನವೂ ನೆಡೆದಿದ್ದ ಹಿನ್ನಲೆಯಲ್ಲಿ ಅಕ್ರಮ ಶೆಡ್‌ಗಳನ್ನು ತೆರವು ಮಾಡಿಸಲಾಯಿತು ಎಂದರು. ಇನ್ನು ಮುಂದೆ ರುದ್ರಭೂಮಿ ಪ್ರದೇಶವನ್ನು ಅತಿಕ್ರಮಣ ಮಾಡದಂತೆ ಹಾಗೂ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಎಸೆಯಬಾರೆದೆಂದು ಕ್ರಮ ಕೈಗೊಂಡು ಹಿಂದೂ ರುದ್ರಭೂಮಿಗೆ ಸೂಚನಾ ಪಲಕವನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಮಿತಿಯ ಖಜಾಂಚಿ ಎಂ.ಜೆ. ಮಹೇಶಾಚಾರ್‌, ಕಾರ್ಯದರ್ಶಿ ಸುನಿಲ್‌ ರಾಜ್‌ ಭಂಡಾರಿ, ಹಿರಿಯಣ್ಣ ಭಂಡಾರಿ, ಬಿ.ಸಿ. ಸಂತೋಷ್‌ ಕುಮಾರ್‌, ಅಶೋಕ, ಮಾಗೋಡು ರವಿಗೌಡ, ರಾಮಣ್ಣ ಪೂಜಾರಿ, ಶರಣು, ನಾಗೇಂದ್ರ, ಮುರುಗೇಶ್‌, ಗುತ್ತಿಗೆದಾರ ನಾಗರಾಜ್‌, ಎಲ್‌.ಪಿ. ಜಗದೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.