ವೀರಭದ್ರಸ್ವಾಮಿ ದೇಗುಲ ಅಭಿವೃದ್ಧಿಗೆ ಸರ್ಕಾರ ವಿಫಲ
ಬಿದರೆ ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಆರೋಪ
Team Udayavani, Mar 22, 2020, 4:10 PM IST
ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಬಿದರೆ ಗ್ರಾಪಂ ವ್ಯಾಪ್ತಿಯ ಪುರಾಣ ಪ್ರಸಿದ್ಧ ಸಿಂಧೂರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನವನ್ನು ಅಭಿವೃದ್ಧಿಪಡಿಸುವಲ್ಲಿ ಮುಜುರಾಯಿ ಇಲಾಖೆ ವಿಫಲಗೊಂಡಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2012ರಲ್ಲಿ ಪತ್ರಿಕಾ ವರದಿಯನ್ನು ಉಲ್ಲೇಖೀಸಿ ಅಂದಿನ ಅಪರ ಜಿಲ್ಲಾಧಿಕಾರಿಗಳು ಶಿಥಿಲಗೊಳ್ಳುತ್ತಿರುವ ಗುಹಾಂತರ ದೇವಾಲಯದ ಅಭಿವೃದ್ಧಿಗೆ ಅಂದಾಜು ಪಟ್ಟಿ ತಯಾರಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದರು. ಅದರಂತೆ ಅಂದಾಜು ಪಟ್ಟಿಯನ್ನು ತಯಾರಿಸಿ ಮಂಜೂರಾತಿಗಾಗಿ ಸರ್ಕಾರಕ್ಕೆ ಕಳುಹಿಸಿಕೊಡಲಾಗಿತ್ತು ಎಂದರು.
ಅನುದಾನದ ಕೊರತೆ ಇರುವುದರಿಂದ ಮುಂದಿನ ದಿನಗಳಲ್ಲಿ ದುರಸ್ತಿ ಮಾಡಿಸುವುದಾಗಿ ಸರ್ಕಾರದಿಂದ ಜಿಲ್ಲೆಯ ಮುಜುರಾಯಿ ಕಚೇರಿಗೆ ಪತ್ರ ಬಂದಿದೆ. ಆದರೆ, ಇದುವರೆಗೂ ಅಭಿವೃದ್ಧಿ ಕಾಮಗಾರಿ ಮಾಡಿಸಿಲ್ಲ. ಗುಹೆಯ ಒಳಗೆ ವೀರಭದ್ರಸ್ವಾಮಿ ಹಾಗೂ ಬಸವಣ್ಣನ ಮೂರ್ತಿ ಇವೆ. ಪಕ್ಕದಲ್ಲೇ ನಿರಂತರ ನೀರು ಹರಿಯುವ ಬಾವಿ ಇದೆ. ಮುಖ ಮಂಟಪದ ಕಲ್ಲು ಕಂಬಗಳೆಲ್ಲಾ ತುಂಡಾಗಿ ಬಿದ್ದು ಹೋಗಿವೆ. ಸುಮಾರು 800 ವರ್ಷಗಳ ಇತಿಹಾಸವಿದೆ ಎನ್ನಲಾಗಿದೆ. ಶ್ರೀ ಪರದೇಶಪ್ಪನವರ ಮಠದ ಧರ್ಮಾಧಿಕಾರಿಗಳು ಇಲ್ಲಿಗೆ ಬಂದು ತಿಂಗಳಿಗೊಮ್ಮೆ ಪೂಜೆ ನೇರವೇರಿಸುತ್ತಾರೆ ಎಂದರು.
ದೇವಸ್ಥಾನದ ಸಮೀಪದಲ್ಲೇ ಋಷಿಮುನಿಗಳು ವಾಸಿಸುತ್ತಿದ್ದರು ಎನ್ನಲಾದ ಬೃಹದಾಕಾರದ ಬಂಡೆ ಆವರಿಸಿದ ಗುಹೆ ಇದ್ದು, ದ್ವಾರಕ್ಕೆ ಕಾಡುಗಲ್ಲು ಬಳಸಲಾಗಿದೆ. ಈ ಬಗ್ಗೆ ಮನವಿ ಸಲ್ಲಿಸಿದರು ಅಭಿವೃದ್ಧಿಯಾಗದೆ ಇರುವುದು ವಿಷಾದದ ಸಂಗತಿಯಾಗಿದೆ. ಇನ್ನು ಮಂದಾದರೂ ಮುಜುರಾಯಿ ಇಲಾಖೆ ಗಮನ ಹರಿಸಿ ಪುರಾಣ ಪ್ರಸಿದ್ಧ ವೀರಭದ್ರಸ್ವಾಮಿ ದೇವಸ್ಥಾನವನ್ನು ಅಭಿವೃದ್ಧಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ