ಬಣಕಲ್: 800 ಕಿ.ಮೀ. ಕ್ರಮಿಸಿ ಶಬರಿಮಲೆಗೆ ಪಾದಯಾತ್ರೆ ಮಾಡಲು ಭಕ್ತನ ಪಣ
ಬಣಕಲ್ ನಿಂದ ಶಬರಿಮಲೆಗೆ ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರ ಪಾದಯಾತ್ರೆ
Team Udayavani, Nov 27, 2022, 8:49 AM IST
ಬಣಕಲ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು.
ಸುಮಾರು 800ಕಿ.ಮೀ. ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 33ನೇ ವರ್ಷಕ್ಕೆ ನಡೆದು ಬರುವುದಾಗಿ ಹರಕೆ ಹೊತ್ತು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಭಕ್ತನಾಗಿ ಗುರು ಸ್ವಾಮಿಯಾಗಿ ಗೋಪಾಲಕೃಷ್ಣ ಅವರು ಒಬ್ಬಂಟಿಗನಾಗಿ ಪಾದಯಾತ್ರೆ ಬೆಳೆಸಿದ್ದಾರೆ. ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಬೆಳೆಸುವ ಇವರು ಮುಂಡಾಜೆ, ಧರ್ಮಸ್ಥಳ, ಸುಬ್ರಹ್ಮಣ್ಯ ಮಾರ್ಗವಾಗಿ ಶ್ರೀಕ್ಷೇತ್ರಕ್ಕೆ ತೆರಳಲಿದ್ದಾರೆ.
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತ ಗೋಪಾಲಕೃಷ್ಣ ನಾಯರ್ ವೃತ್ತಿಯಲ್ಲಿ ವೆಲ್ಡರ್ ಆಗಿದ್ದು, ಜೀವನದಲ್ಲಿ ಸ್ವಾಮಿಯ ಕೃಫೆಯಿಂದ ಕುಟುಂಬಕ್ಕೆ ಒಳಿತಾಗಿದೆ. 32 ವರ್ಷ ಶಬರಿಮಲೆ ಮೆಟ್ಟಿಲೇರಿದ್ದೇನೆ. ಈ ವರ್ಷ ಸ್ವಲ್ಪ ಕಠಿಣ ನಿರ್ಧಾರ ತೆಗೆದುಕೊಂಡು ದಿನ 35 ಕಿ.ಮೀ ಕ್ರಮಿಸುತ್ತೇನೆ. ನಂತರ ಸಿಗುವ ದೇವಸ್ಥಾನಗಳಲ್ಲಿ ತಂಗುತ್ತೇನೆ. ಸುಮಾರು 22 ದಿನಗಳ ಕಾಲ ಈ ಪಾದಯಾತ್ರೆ ಆಗಲಿದೆ. ಡಿಸೆಂಬರ್ ತಿಂಗಳ ಕೊನೆಯ ವಾರದೊಳಗೆ ತಲುಪಬಹುದೆಂಬ ನಿರೀಕ್ಷೆಯಲ್ಲಿದ್ದೇನೆ. ತಲೆಯಲ್ಲಿ ಇರ್ಮುಡಿ ಹೊತ್ತು ತನ್ನ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಗೋಪಾಲಕೃಷ್ಣ ತಿಳಿಸಿದರು.
ಪಾದಯಾತ್ರಿಕ ಗೋಪಾಲಕೃಷ್ಣ ಅವರಿಗೆ ಬಿ.ವಿ. ಸುರೇಶ್, ರವಿ ಪೂಜಾರಿ, ಸಂತೋಷ್, ಪ್ರಕಾಶ್, ಸಂದೀಪ್, ಜಗದೀಶ್, ರತನ್, ಗಣೇಶ್, ಕಾರ್ತಿಕ್, ಕಿರಣ್ ಮತ್ತಿತರರು ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ