ಬಣಕಲ್: 800 ಕಿ.ಮೀ. ಕ್ರಮಿಸಿ ಶಬರಿಮಲೆಗೆ ಪಾದಯಾತ್ರೆ ಮಾಡಲು ಭಕ್ತನ ಪಣ
ಬಣಕಲ್ ನಿಂದ ಶಬರಿಮಲೆಗೆ ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರ ಪಾದಯಾತ್ರೆ
Team Udayavani, Nov 27, 2022, 8:49 AM IST
ಬಣಕಲ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು.
ಸುಮಾರು 800ಕಿ.ಮೀ. ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 33ನೇ ವರ್ಷಕ್ಕೆ ನಡೆದು ಬರುವುದಾಗಿ ಹರಕೆ ಹೊತ್ತು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಭಕ್ತನಾಗಿ ಗುರು ಸ್ವಾಮಿಯಾಗಿ ಗೋಪಾಲಕೃಷ್ಣ ಅವರು ಒಬ್ಬಂಟಿಗನಾಗಿ ಪಾದಯಾತ್ರೆ ಬೆಳೆಸಿದ್ದಾರೆ. ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಬೆಳೆಸುವ ಇವರು ಮುಂಡಾಜೆ, ಧರ್ಮಸ್ಥಳ, ಸುಬ್ರಹ್ಮಣ್ಯ ಮಾರ್ಗವಾಗಿ ಶ್ರೀಕ್ಷೇತ್ರಕ್ಕೆ ತೆರಳಲಿದ್ದಾರೆ.
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತ ಗೋಪಾಲಕೃಷ್ಣ ನಾಯರ್ ವೃತ್ತಿಯಲ್ಲಿ ವೆಲ್ಡರ್ ಆಗಿದ್ದು, ಜೀವನದಲ್ಲಿ ಸ್ವಾಮಿಯ ಕೃಫೆಯಿಂದ ಕುಟುಂಬಕ್ಕೆ ಒಳಿತಾಗಿದೆ. 32 ವರ್ಷ ಶಬರಿಮಲೆ ಮೆಟ್ಟಿಲೇರಿದ್ದೇನೆ. ಈ ವರ್ಷ ಸ್ವಲ್ಪ ಕಠಿಣ ನಿರ್ಧಾರ ತೆಗೆದುಕೊಂಡು ದಿನ 35 ಕಿ.ಮೀ ಕ್ರಮಿಸುತ್ತೇನೆ. ನಂತರ ಸಿಗುವ ದೇವಸ್ಥಾನಗಳಲ್ಲಿ ತಂಗುತ್ತೇನೆ. ಸುಮಾರು 22 ದಿನಗಳ ಕಾಲ ಈ ಪಾದಯಾತ್ರೆ ಆಗಲಿದೆ. ಡಿಸೆಂಬರ್ ತಿಂಗಳ ಕೊನೆಯ ವಾರದೊಳಗೆ ತಲುಪಬಹುದೆಂಬ ನಿರೀಕ್ಷೆಯಲ್ಲಿದ್ದೇನೆ. ತಲೆಯಲ್ಲಿ ಇರ್ಮುಡಿ ಹೊತ್ತು ತನ್ನ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಗೋಪಾಲಕೃಷ್ಣ ತಿಳಿಸಿದರು.
ಪಾದಯಾತ್ರಿಕ ಗೋಪಾಲಕೃಷ್ಣ ಅವರಿಗೆ ಬಿ.ವಿ. ಸುರೇಶ್, ರವಿ ಪೂಜಾರಿ, ಸಂತೋಷ್, ಪ್ರಕಾಶ್, ಸಂದೀಪ್, ಜಗದೀಶ್, ರತನ್, ಗಣೇಶ್, ಕಾರ್ತಿಕ್, ಕಿರಣ್ ಮತ್ತಿತರರು ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ
ಸಿ.ಟಿ.ರವಿ ‘ಮುಂದಿನ ಮುಖ್ಯಮಂತ್ರಿ’ ಆಗಲೆಂದು ಅಭಿಮಾನಿಗಳ ಪಾದಯಾತ್ರೆ
ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ,ಸಾವಿರಾರು ಸೀರೆಗಳು ವಶ
MUST WATCH
ಹೊಸ ಸೇರ್ಪಡೆ
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ವಿಶ್ವ ಚಾಂಪಿಯನ್ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್ ಸ್ಪೋರ್ಟ್ಸ್ ನ “ಟ್ರೋಫಿ ಟೂರ್’
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ