ಸಂತೆ ನಡೆಸಲು ಬಂದಿದ್ದ ವ್ಯಾಪಾರಿಗಳಿಗೆ ತಡೆ
Team Udayavani, Jul 19, 2020, 1:51 PM IST
ಆಲ್ದೂರು: ಶನಿವಾರ ಆಲ್ದೂರು ಪಟ್ಟಣದಲ್ಲಿ ಸಂತೆ ಹಾಕಲು ಬಂದಿದ್ದ ಅಂಗಡಿ ವ್ಯಾಪಾರಿಗಳಿಗೆ ಅಂಗಡಿಗಳನ್ನು ಹಾಕದಂತೆ ಸೂಚನೆ ನೀಡಿ ವಾಪಸ್ ಕಳುಹಿಸಲಾಯಿತು.
ಆಲ್ದೂರಿನಲ್ಲಿ ಪ್ರತಿ ಶನಿವಾರ ಸಂತೆ ನಡೆಯುತ್ತದೆ. ಆದರೆ ಕೋವಿಡ್ -19 ವೈರಸ್ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಾದ್ಯಂತ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದರೂ ಸಹ ಪ್ರತಿ ಶನಿವಾರ ಆಲ್ದೂರು ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಪಟ್ಟಣದ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಕಳೆದ ವಾರವೂ ವ್ಯಾಪಾರ ನಡೆಸಿದ್ದರು. ಇದರಿಂದಾಗಿ ಜನ ಜಂಗುಳಿ ಹೆಚ್ಚಾಗಿತ್ತು. ಟ್ರಾಫಿಕ್ ಜ್ಯಾಮ್ ಉಂಟಾಗಿ ಪಾದಚಾರಿಗಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ಶನಿವಾರ ಆಲ್ದೂರು ಪಟ್ಟಣದಲ್ಲಿ ಮೊದಲ ಕೋವಿಡ್- 19 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಭಿವೃದ್ಧಿ ಅಧಿಕಾರಿ ಸೋಮೇಗೌಡ ಹಾಗೂ ಸಿಬ್ಬಂದಿ ಪೋಲೀಸರ ಸಹಕಾರದೊಂದಿಗೆ ವ್ಯಾಪಾರಿಗಳನ್ನು ತಡೆದು ರಸ್ತೆ ಬದಿಯಲ್ಲಿ ಅಂಗಡಿಗಳನ್ನು ಹಾಕದಂತೆ ಸೂಚನೆ ನೀಡಿ ಬಂದ ವಾಹನಗಳನ್ನು ವಾಪಸ್ ಕಳುಹಿಸಿದರು.
ಅಂಗಡಿಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪಂಚಾಯತ್ನಿಂದ ಪರವಾನಗಿ ಪಡೆದವರಿಗೆ ಮಾತ್ರ ವ್ಯಾಪಾರಕ್ಕೆ ಅನುಮತಿ ನೀಡಲಾಯಿತು. ಆಲ್ದೂರು ಪಿಎಸ್ಐ ಶಂಬುಲಿಂಗಯ್ಯ ತಾವೇ ಕಾರ್ಯಾಚರಣೆಗೆ ಇಳಿದು ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಅನಗತ್ಯವಾಗಿ ಓಡಾಡುತ್ತಿದ್ದವರು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಂಗಡಿ- ಮುಂಗಟ್ಟುಗಳ ಮುಂದೆ ಓಡಾಡುವವರಿಗೆ ದಂಡ ವಿಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ
Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ
ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್