75 ವರ್ಷದ ಬಳಿಕ ಬಸವೇಶ್ವರಸ್ವಾಮಿ ಅದ್ಧೂರಿ ತೆಪ್ಪೋತ್ಸವ


Team Udayavani, Dec 17, 2019, 2:39 PM IST

cm-tdy-1

ಕಡೂರು: ತಾಲೂಕಿನ ಸಿಂಗಟಗೆರೆ ಹೋಬಳಿ ಶೆಟ್ಟಿಹಳ್ಳಿ ಗ್ರಾಮ ದೇವತೆ ಶ್ರೀ ಬಸವೇಶ್ವರ ಸ್ವಾಮಿ, ಕಂಚುಗಲ್ಲು ಶ್ರೀ ವೀರಭದ್ರಸ್ವಾಮಿ ಹಾಗೂ ಶ್ರೀ ಕರಿಯಮ್ಮ ದೇವಿಯರ ತೆಪ್ಪೋತ್ಸವ ಕಾರ್ಯಕ್ರಮ ಸೋಮವಾರ ಅದ್ದೂರಿಯಾಗಿ ನೆರವೇರಿತು.

ಗ್ರಾಮದ ಹಿರಿಯರು ಹೇಳುವಂತೆ ಸುಮಾರು 75 ವರ್ಷಗಳ ಹಿಂದೆ ಇದೇ ರೀತಿ ತೆಪ್ಪೋತ್ಸವ ನಡೆದಿತ್ತು. ನಂತರ ಕಾರಣಾಂತರಗಳಿಂದ ಈ ಸೇವೆ ನಡೆದಿರಲಿಲ್ಲ. ಈ ಬಾರಿ ಉತ್ತಮ ಮಳೆ ಬಂದು, 45 ಹೇಕ್ಟೇರ್‌ ವಿಸ್ತೀರ್ಣದ ಶೆಟ್ಟಿಹಳ್ಳಿ ಕೆರೆ ತುಂಬಿದ್ದರಿಂದ ಹರ್ಷಗೊಂಡ ಭಕ್ತಾದಿ ಗಳು ಹಾಗೂ ಗ್ರಾಮಸ್ಥರು ತೆಪ್ಪೋತ್ಸವ ನಡೆಸಲು ತೀರ್ಮಾನಿಸಿದರು. ಈ ಹಿನ್ನೆಲೆಯಲ್ಲಿ ತೆಪ್ಪೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಕಂಚಗಲ್ಲು ಶ್ರೀ ವೀರಭದ್ರಸ್ವಾಮಿ, ಶೆಟ್ಟಿಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಕರಿಯಮ್ಮ ದೇವರ ಉತ್ಸವ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ನಂತರ ಕೆರೆಯಲ್ಲಿ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದ ತೆಪ್ಪದಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ನಂತರ ಸುಮಾರು ಒಂದು ಕಿ.ಮೀ. ಸುತ್ತಳತೆಯಲ್ಲಿ ತೆಪ್ಪವನ್ನು ಸುತ್ತಿಸಲಾಯಿತು. ಈ ವೇಳೆ ಶ್ರೀ ಬಸವೇಶ್ವರ ಸ್ವಾಮಿಗೆ, ವೀರಭದ್ರಸ್ವಾಮಿಗೆ ಜಯವಾಗಲಿ ಎಂಬ ಭಕ್ತರ ಜಯಘೋಷ ಮುಗಿಲು ಮುಟ್ಟಿತ್ತು.

ಕಲ್ಲಸಾದರಹಳ್ಳಿ, ಬಾಣವರ, ಪಂಚನಹಳ್ಳಿ, ಚಿಕ್ಕನಾಯ್ಕನಹಳ್ಳಿ, ಅರಸೀಕೆರೆ, ಕೆ.ಬಿದರೆ, ಸಿಂಗಟಗೆರೆ, ಕಡೂರು, ತರೀಕೆರೆ, ಹೋಸದುರ್ಗದಿಂದ ಬಂದಿದ್ದ ಸಾವಿರಾರು ಭಕ್ತರು ಅದರಲ್ಲೂ ಕೆರೆ ಏರಿಯ ಮೇಲೆ ಯುವಕರು, ಯುವತಿಯರು, ಮಕ್ಕಳು, ಮಹಿಳೆಯರು, ಹಿರಿಯರು ಜಾತಿ ಭೇದವಿಲ್ಲದೆ ಕುಳಿತು ತೆಪ್ಪೋತ್ಸವ ವೀಕ್ಷಿಸಿದರು. ಕನ್ನಡ- ಸಂಸ್ಕೃತಿ ಇಲಾಖೆಯಿಂದ ವೀರಗಾಸೆ, ಚಿಟ್ಟಿಮೇಳ ಕಾರ್ಯಕ್ರಮಗಳು ನಡೆದವು. ನಂತರ ಸುಮಾರು 4 ಸಾವಿರ ಭಕ್ತರಿಗೆ ಅನ್ನದಾಸೋಹ ನಡೆಯಿತು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.