ಒಳಚರಂಡಿ ಕಾಮಗಾರಿ ಪರಿಶೀಲಿಸಿದ ಸಚಿವ ಬೇಗ್‌


Team Udayavani, Sep 15, 2017, 1:00 PM IST

15-chikmagaluru-2.jpg

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ರೋಷನ್‌ ಬೇಗ್‌ ಗುರುವಾರ ನಗರದ ವಿವಿಧೆಡೆಗಳಲ್ಲಿ ಸಂಚರಿಸಿ ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು.

ನಗರದ ಮಾರ್ಕೆಟ್‌ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಒಳಚರಂಡಿ ಯೋಜನೆಗೆ ನಿರ್ಮಿಸಿರುವ ಮ್ಯಾನ್‌ಹೋಲ್‌ ಕ್ಯಾಪ್‌ ಹಾಳಾಗಿರುವುದು ಕಂಡು ಬಂದಿತು. ಈ ಬಗ್ಗೆ ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಒಳಚರಂಡಿ ಕಾಮಗಾರಿಗೆ ಒಟ್ಟಾರೆ 4400 ಮ್ಯಾನ್‌ಹೋಲ್‌ಗ‌ಳನ್ನು ನಿರ್ಮಿಸಬೇಕಿದ್ದು, ಈವರೆಗೂ 3250 ಮ್ಯಾನ್‌ಹೋಲ್‌ಗ‌ಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಒಂದು ಮ್ಯಾನ್‌ಹೋಲ್‌ ಎಷ್ಟು ವರ್ಷ ಬಾಳಿಕೆ ಬರುತ್ತದೆ ಎಂದು ಸಚಿವರು ಗುತ್ತಿಗೆದಾರರನ್ನು ಪ್ರಶ್ನಿಸಿದಾಗ, ಆತ 30 ವರ್ಷ ಬಾಳಿಕೆ ಬರುತ್ತದೆ ಎಂಬ ಉತ್ತರ ನೀಡಿದರು. ಈ ಮ್ಯಾನ್‌ಹೋಲ್‌ ನಿರ್ಮಿಸಿ ಎಷ್ಟು ವರ್ಷವಾಗಿದೆ ಎಂಬ ಪ್ರಶ್ನೆಗೆ 4 ವರ್ಷಗಳಾಗಿವೆ ಎಂಬ ಉತ್ತರ ಬಂದಿತು. 30 ವರ್ಷ ಬಾಳಿಕೆ ಬರಬೇಕಾದ ಮ್ಯಾನ್‌ಹೋಲ್‌ ಕೇವಲ 4 ವರ್ಷಗಳಿಗೆ ಹಾಳಾಗಿದೆ ಎಂದರೆ ಇದರ ಗುಣಮಟ್ಟ ಹೇಗಿದೆ ಎಂಬುದು ತಿಳಿಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ಮ್ಯಾನ್‌ಹೋಲ್‌ ನಿರ್ಮಿಸಿ ಕೇವಲ 4 ವರ್ಷಗಳಾಗಿವೆ. ಇನ್ನೂ ಯೋಜನೆ ಚಾಲನೆಯೇ ಆಗಿಲ್ಲ. ಆಗಲೆ ಇದು ಹಾಳಾಗಿದೆ. ನಗರದೆಲ್ಲೆಡೆ ಇದೇ ಪರಿಸ್ಥಿತಿ ಇದೆ ಎಂದು ಸಚಿವರ ಗಮನಸೆಳೆದರು.

ನಂತರ ಉಪ್ಪಳ್ಳಿ ಬಡಾವಣೆಗೆ ಭೇಟಿ ನೀಡಿದಾಗ ಅಲ್ಲಿ ರಿಸೀವಿಂಗ್‌ ಚೇಂಬರ್‌ ಹಾಳಾಗಿರುವುದು ಕಂಡು ಬಂದಿತು. ಒಳಚರಂಡಿ ಕಾಮಗಾರಿಗೆ ಒಟ್ಟಾರೆ 7000 ರಿಸೀವಿಂಗ್‌ ಚೇಂಬರ್‌ ಮಾಡಬೇಕಿದ್ದು, ಈವರೆಗೂ 4 ಸಾವಿರ ಮಾಡಲಾಗಿದೆ ಎಂಬ ಉತ್ತರ ಅಧಿಕಾರಿಗಳಿಂದ ಬಂದಿತು.

ಶಾಸಕ ಸಿ.ಟಿ.ರವಿ ಮಾತನಾಡಿ, 2012ರಲ್ಲಿಯೇ ರಿಸೀವಿಂಗ್‌ ಚೇಂಬರ್‌ ನಿರ್ಮಾಣದ ಬಗ್ಗೆ ತಾವು ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳ ಗಮನಕ್ಕೆ ತಂದಿದೆ. ಆಗ ಕೇವಲ 800 ರಿಸೀವಿಂಗ್‌ ಚೇಂಬರ್‌ ಮಾಡಲಾಗಿತ್ತು. ಈಗ ನಿರ್ಮಿಸುತ್ತಿರುವ ರಿಸೀವಿಂಗ್‌ ಚೇಂಬರ್‌ ಗುಣಮಟ್ಟ ಸರಿ ಇಲ್ಲ. ಇದು ವೈಜ್ಞಾನಿಕವಾಗಿಯೂ ಇಲ್ಲ. ಇದನ್ನು ಬದಲಿಸಿ ಎಂಬ ಸೂಚನೆ ನೀಡಿದ್ದೆ. ತಾವು ಸೂಚನೆ ನೀಡಿದ ನಂತರವೂ ಪುನಃ ಅದೇ ಮಾದರಿಯಲ್ಲಿ ಮಾಡಲಾಗುತ್ತಿದೆ ಎಂದು ಸಚಿವರಿಗೆ ತಿಳಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಸಹ ಕೂಡಲೇ ರಿಸೀವಿಂಗ್‌ ಚೇಂಬರ್‌ಗಳನ್ನು ವೈಜ್ಞಾನಿಕ ರೀತಿಯಲ್ಲಿ ಮಾಡುವಂತೆ ಸೂಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೋಷನ್‌ ಬೇಗ್‌, ಒಳಚರಂಡಿ ಕಾಮಗಾರಿಯ ಗುಣಮಟ್ಟದಲ್ಲಿ ಸಾಕಷ್ಟು ಲೋಪಗಳಿವೆ ಎಂಬ ಬಗ್ಗೆ ಶಾಸಕ ಸಿ.ಟಿ.ರವಿ, ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ವಿವಿದೆಡೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮ್ಯಾನ್‌ಹೋಲ್‌, ರಿಸೀವಿಂಗ್‌ ಚೇಂಬರ್‌ಗಳಲ್ಲಿ ಲೋಪವಿರುವುದು ಕಂಡು ಬಂದಿದೆ ಎಂದರು.

ನಗರಸಭೆ ಅಧ್ಯಕ್ಷೆ ಕವಿತಾಶೇಖರ್‌, ಉಪಾಧ್ಯಕ್ಷ ರವೀಂದ್ರ ಪ್ರಭು, ಮಾಜಿ ಶಾಸಕಿ ಎ.ವಿ.ಗಾಯತ್ರಿಶಾಂತೇಗೌಡ, ಸಿಡಿಎ ಅಧ್ಯಕ್ಷ ಸೈಯ್ಯದ್‌ ಹನೀಫ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಡಿ.ಎಲ್‌.ವಿಜಯ್‌ಕುಮಾರ್‌, ಜಿಲ್ಲಾಧಿಕಾರಿ
ಜಿ.ಸತ್ಯವತಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಅಣ್ಣಾಮಲೈ, ನಗರಸಭೆ ಆಯುಕ್ತೆ ತುಷಾರಮಣಿ, ಒಳಚರಂಡಿ ಮಂಡಳಿಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.