ಚಿಕ್ಕಮಗಳೂರು : ಚಲಿಸುತ್ತಿದ್ದ ಬೈಕಿನಲ್ಲಿ ಬೆಂಕಿ, ಸವಾರ ಪಾರು
Team Udayavani, Dec 3, 2019, 10:29 PM IST
ಚಿಕ್ಕಮಗಳೂರು : ಚಲಿಸುತ್ತಿದ್ದ ಬೈಕಿಗೆ ಬೆಂಕಿ ಹತ್ತಿ ಬೈಕ್ ಸಂಪೂರ್ಣ ಸುಟ್ಟುಹೋದ ಘಟನೆ ಚಿಕ್ಕಮಗಳೂರು ಕೆಎಸ್ಆರ್ ಟಿಸಿ ಡಿಪ್ಪೋ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಅದೃಷ್ಟವಶಾತ್ ಪಾರಾಗಿದಾನೆ.
ಚಿಕ್ಕಮಗಳೂರು ಮೂಡಿಗೆರೆ ರಸ್ತೆಯಲ್ಲಿ ಬರುತಿದ್ದ ಸಂದರ್ಭ ಬೈಕಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಇದನ್ನು ಅರಿತ ಬೈಕ್ ಸವಾರ ತಕ್ಷಣ ರಸ್ತೆ ಬದಿಯಲ್ಲಿ ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾನೆ ಅಷ್ಟೋತ್ತಿಗಾಗಲೇ ಬೈಕಿಗೆ ಬೆಂಕಿ ಸಂಪೂರ್ಣವಾಗಿ ಆವರಿಸಿಕೊಂಡಿತ್ತು.