ಸಿ.ಟಿ ರವಿ ನಿವಾಸದೆದುರು ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ
Team Udayavani, Dec 3, 2022, 2:14 PM IST
ಚಿಕ್ಕಮಗಳೂರು: ಸಿ.ಟಿ.ರವಿಯವರು ನೀಡಿದ ‘ಸಿದ್ರಾಮುಲ್ಲಾ ಖಾನ್’ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ಸಿ.ಟಿ.ರವಿ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲುಯತ್ನಿಸಿದರು.
ಶನಿವಾರ ನಗರದ ತಾಲ್ಲೂಕು ಕಚೇರಿಯಿಂದ ಮೆರವಣಿಗೆ ಹೋರಟು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು
ಈ ವೇಳೆ ಪೊಲೀಸರು ರಸ್ತೆ ಮಧ್ಯೆಯಲ್ಲೇ ತಡೆದರು. ಸಿ.ಟಿ.ರವಿ ಮನೆ ರಸ್ತೆ ಮಧ್ಯೆಯೇ ಅಡ್ಡ ಹಾಕಿದ ಬಿಜೆಪಿ ಕಾರ್ಯಕರ್ತರು. ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆಯ ಮತ್ತೊಂದು ಬದಿಯಲ್ಲಿ ಕಾಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ʼವರಾಹ ರೂಪಂʼ ವಿವಾದ: ಕೊನೆಗೂ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ ʼಕಾಂತಾರʼ
ಈ ವೇಳೆ ಪ್ರತಿಭಟನಕಾರರನ್ನು ನಿಯತ್ರಿಸುವಲ್ಲಿ ಪೊಲೀಸರು ಹರಸಾಹಸ ಪಟ್ಟರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಬೇಟಿ ನೀಡಿದರು. ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲು ಪೊಲೀಸರು ಮುಂದಾದರು. ನಮ್ಮನ್ನ ಏಕೆ ಬಂಧಿಸ್ತೀರಾ ಎಂದು ಪಟ್ಟು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರ ವಾಕ್ಸಮರ ನಡೆಸಿದರು. ಪೊಲೀಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.
ಒಂದೆಡೆ ಕಾಂಗ್ರೆಸ್ ಮುಖಂಡರು, ಭಾಷಣ ಮಾಡುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಘೋಷಣೆ ಕೂಗುತ್ತಾ, ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆ ಮುತ್ತಿಗೆ ಹಾಕದಂತೆ ಪ್ರತಿರೋಧ ಒಡ್ಡಿದರು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಾಡಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಬಾಲಕ ಸಾವು
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಓವಲ್ ಆತಿಥ್ಯ
ರಣಜಿ ಟ್ರೋಫಿ ಸೆಮಿಫೈನಲ್: ಕಾಡಿದ ಸೌರಾಷ್ಟ್ರ; ಕಾಪಾಡಿದ ಅಗರ್ವಾಲ್
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು