ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ
Team Udayavani, Dec 27, 2021, 12:44 PM IST
ಚಿಕ್ಕಮಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಹತ್ತು ದಿನಗಳ ನೈಟ್ ಕರ್ಫ್ಯೂ ಆದೇಶಕ್ಕೆ ಬಿಜೆಪಿ ಶಾಸಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡಲಾಗದು. ಆದರೆ ಒಮಿಕ್ರಾನ್ ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು ಎಂದಿದ್ದಾರೆ.
ಇದನ್ನೂ ಓದಿ:ಹೊಸ ವರ್ಷ ಸಂಭ್ರಮಾಚರಣೆಗೆ ಎಲ್ಲಾದರೂ ಹೋಗಲಿ, ಆದರೆ..: ಸಿಎಂ ಎಚ್ಚರಿಕೆ
ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರ ವಹಿಸಬೇಕು. ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸರ್ಕಾರದ ನಿರ್ಣಯದ ವಿರುದ್ಧ ಚಾಟಿ ಬೀಸಿದರು.