“ನಮ್ಮ ಪಕ್ಷದವರೇ ಪಿತೂರಿ ನಡೆಸುತ್ತಿದ್ದಾರೆ”: ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಆಕ್ರೋಶ
Team Udayavani, Jan 2, 2022, 10:32 AM IST
ಚಿಕ್ಕಮಗಳೂರು: ನಮ್ಮ ಪಕ್ಷದವರೇ ನನ್ನ ವಿರುದ್ದ ಪಿತೂರಿ ನಡೆಸುತ್ತಿದ್ದಾರೆ. ನಾನು ಕಾಂಗ್ರೆಸ್ ಸೇರುತ್ತೇನೆಂದು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸ್ವ-ಪಕ್ಷದ ಮುಖಂಡರ ವಿರುದ್ಧ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ನಾನ್ಯಾಕೆ ಕಾಂಗ್ರೆಸ್ ಗೆ ಹೋಗಲಿ? ನಾನು ಪಕ್ಷದ ನಿಷ್ಠಾಂವತ. ಬಿಜೆಪಿ ಮುಖಂಡರು, ಪಕ್ಷ ನನ್ನನ್ನು ಚೆನ್ನಾಗಿ ನೋಡಿಕೊಡಿದೆ. ನಾನು ಕಾಂಗ್ರೆಸ್ ಸೇರುವುದು ಸುಳ್ಳು, ಇದನ್ನು ಯಾರೂ ನಂಬುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ಒಮಿಕ್ರಾನ್ ವೇಗ ಪಡೆದಿದೆ… ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಿ: ಕೇಂದ್ರದ ಎಚ್ಚರಿಕೆ
ಸಂಪುಟ ಪುನರ್ ರಚನೆ, ಬೋರ್ಡ್ ನೀಡುವ ಸಮಯದಲ್ಲಿ ಮಾತ್ರ ಅಪ್ರಚಾರ ಮಾಡಲಾಗುತ್ತದೆ. ಸಂಪುಟ ಪುನರ್ ರಚನೆ ಸಮಯದಲ್ಲಿ ಮಾತ್ರ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಹೊರಬರುತ್ತದೆ. ನಾನು ಎಲ್ಲಿಯೂ ಬೋರ್ಡ್, ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ. ಆದರೂ ಈ ರೀತಿ ಸುದ್ದಿ ಹೊರಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನು ವಿರೋಧ ಪಕ್ಷದವರಿಗಿಂತ ನಮ್ಮ ಪಕ್ಷದವರೇ ಮಾಡುತ್ತಿದ್ದಾರೆ. ನಮ್ಮವರೇ ಕೆಲವರು ಕಾಂಗ್ರೆಸ್ ಸೇರುವ ಸುದ್ದಿ ಹರಿಬಿಡುತ್ತಿದ್ದಾರೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ