ಭದ್ರಾ ಅರಣ್ಯ ಪ್ರದೇಶದಲ್ಲಿ ನೀಲ್ಗಾಯ್ ಗೋಚರ
Team Udayavani, Mar 11, 2018, 11:53 AM IST
ಚಿಕ್ಕಮಗಳೂರು: ಸಾಮಾನ್ಯವಾಗಿ ಹುಲ್ಲು ಗಾವಲು ಪ್ರದೇಶಗಳಲ್ಲಿ ಮಾತ್ರ ವಾಸಿಸುವ ನೀಲ್ ಗಾಯ್ (ಬ್ಲೂ
ಬುಲ್) ಭದ್ರಾ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.
ಮತ್ತೋಡಿ ಅರಣ್ಯ ಪ್ರದೇಶದಲ್ಲಿ ಸಫಾರಿ ವೇಳೆ ಇದರ ದರ್ಶನವಾಗಿದ್ದು ಪ್ರವಾಸಿಗರು ಫೋಟೊ ಕ್ಲಿಕ್ಕಿಸಿದ್ದಾರಲ್ಲದೆ,
ವಿಡಿಯೋ ಕೂಡ ಮಾಡಿದ್ದಾರೆ. ಸಫಾರಿಗೆ ತೆರಳಿದ್ದ ಪ್ರವಾಸಿಗರಿಂದಲೇ ಈ ಅಪರೂಪದ ಪ್ರಾಣಿ ಭದ್ರಾ ಅರಣ್ಯ
ವ್ಯಾಪ್ತಿಯಲ್ಲಿರುವುದು ಪತ್ತೆಯಾಗಿದೆ.
ಈ ಕುರಿತು ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಕಾಂತರಾಜ್ ಮಾಹಿತಿ ನೀಡಿ, ಭದ್ರಾ ವನ್ಯಜೀವಿ ವಿಭಾಗದಲ್ಲಿ ಈ
ಹಿಂದೆ ಈ ಪ್ರಾಣಿ ಕಣ್ಣಿಗೆ ಬಿದ್ದಿರಲಿಲ್ಲ. ಈ ಪ್ರಾಣಿ 1950ರಲ್ಲಿ ಒಮ್ಮೆ ಬಂಡೀಪುರ ಅರಣ್ಯದಲ್ಲಿ ಕಾಣಿಸಿಕೊಂಡಿರುವ ಬಗ್ಗೆ
ದಾಖಲೆ ಇದೆ. ನೀಲ್ಗಾಯ್ ಹುಲ್ಲುಗಾವಲು ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚಾಗಿ
ಕಂಡುಬರುತ್ತದೆ. ಇದರ ಮೇಲೆ ಹುಲಿ, ಚಿರತೆಗಳ ದಾಳಿ ಹೆಚ್ಚು. ಭದ್ರಾ ಅರಣ್ಯದಲ್ಲಿರುವ ಈ ಪ್ರಾಣಿಯನ್ನು
ಕೂಡಲೆ ಪತ್ತೆ ಹಚ್ಚುವಂತೆ ಸಿಬ್ಬಂದಿಗೆ ಸೂಚಿಸುವುದಾಗಿ ತಿಳಿಸಿದರು.
ಮಾಂಸಕ್ಕಾಗಿ ಈ ಪ್ರಾಣಿಯನ್ನು ಕದ್ದು ಇಲ್ಲಿಗೆ ತಂದಿರುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಅರಣ್ಯ ಇಲಾಖೆ
ಸೂಕ್ತ ತನಿಖೆ ನಡೆಸಬೇಕೆಂದು ವನ್ಯಜೀವಿ ಕಾರ್ಯಕರ್ತ ಜಿ.ವೀರೇಶ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ