ಅಪಘಾತದಲ್ಲಿ ಯೋಧ ಸಾವು, ಸಾವನ್ನಪ್ಪಿದ 20 ಗಂಟೆ ನಂತರ ಶವ ಪತ್ತೆ
Team Udayavani, Dec 19, 2019, 10:19 AM IST
ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಮೃತಪಟ್ಟ ಯೋಧನ ಮೃತದೇಹ ಸುಮಾರು 20 ಗಂಟೆಗಳ ಪತ್ತೆಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಸಮೀಪ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಬಾಳೇನಹಳ್ಳಿ ಗ್ರಾಮದ ಚಿದಾನಂದ್ ( 27) ಅಪಘಾತದಲ್ಲಿ ಮೃತಪಟ್ಟ ಸೈನಿಕ.
ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚಿದಾನಂದ್ ಕಳೆದ ಎರಡು ದಿನಗಳ ಹಿಂದೆ ಚಿಕ್ಕಪ್ಪನ ತಿಥಿ ಕಾರ್ಯಕ್ಕೆ ಬಂದಿದ್ದರು.
ಮೊನ್ನೆ ಬೈಕ್ ನಲ್ಲಿ ಸಖರಾಯಪಟ್ಟಣ ದಿಂದ ಬಾಳೇನಹಳ್ಳಿ ಗೆ ಹೋಗುವಾಗ ಅಪಘಾತ ನಡೆದಿತ್ತು. ಆದರೆ ಅವರ ಮೃತದೇಹ ಪತ್ತೆಯಾಗಿರಲಿಲ್ಲ.
ಪೊಲೀಸ್ ನೆಟ್ ವರ್ಕ್ ಬಳಸಿ ತನಿಖೆ ನಡೆಸಿದಾಗ 20 ಗಂಟೆ ನಂತರ ಹಳ್ಳದಲ್ಲಿ ಬಿದ್ದಿದ್ದ ಯೋಧನ ಮೃತ ದೇಹ ಪತ್ತೆಯಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ