ಅನಗತ್ಯ ತಿರುಗಾಟಕ್ಕೆ ಬಿತ್ತು ಬ್ರೇಕ್‌!


Team Udayavani, Mar 28, 2020, 2:27 PM IST

cm-tdy-1

ಚಿಕ್ಕಮಗಳೂರು: ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಕಟ್ಟನಿಟ್ಟಿನ ಕ್ರಮ ಕೈಗೊಂಡಿರುವ ಕಾರಣ ಜಿಲ್ಲಾದ್ಯಂತ ಶುಕ್ರವಾರ ಜನರು ರಸ್ತೆಗಿಳಿಯದಂತೆ ತಡೆಯುವಲ್ಲಿ ಪೊಲೀಸರು ಯಶಸ್ವಿಯಾದರು.

ಸರ್ಕಾರದ ಆದೇಶ ಪಾಲಿಸದೆ ಸುಳ್ಳು ನೆಪ ಹೇಳಿಕೊಂಡು ನಗರದಲ್ಲಿ ಸುತ್ತುವ ಪುಂಡರಿಗೆ, ಅಗತ್ಯವಸ್ತು ಖರೀದಿಗೆ ಗುಂಪಾಗಿ ಸೇರುವ ಜನರಿಗೆ ಪೊಲೀಸರು ಗುರುವಾರ ಲಾಠಿಯಿಂದ ಬಿಸಿ ಮುಟ್ಟಿಸಿದ್ದರು. ಪೊಲೀಸರ ಲಾಠಿಯ ರುಚಿ ಕಂಡವರು ಮನೆಯಿಂದ ಹೊರಬರಲು ಹೆದರುತ್ತಿದ್ದು ನಗರದ ರಸ್ತೆಗಳಲ್ಲಿ ಜನ ಸಂಚಾರವಿಲ್ಲದೇ ಇಡೀ ನಗರವೇ ಸಂಪೂರ್ಣ ಸ್ತಬ್ಧಗೊಂಡಿತ್ತು. ಅಲ್ಲಲ್ಲಿ ಬೈಕ್‌ ಮತ್ತು ಕಾರುಗಳಲ್ಲಿ ಸಂಚರಿಸುವವರನ್ನು ಪೊಲೀಸರು ತಡೆದು ಅನಗತ್ಯವಾಗಿ ತಿರುಗುವವರನ್ನು ಮನೆಗೆ ಕಳಿಸಿದರು.

ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸಲು ಮಸೀದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಹುದು ಎಂಬ ಹಿನ್ನೆಲೆಯಲ್ಲಿ ಮಸೀದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ತಾಲೂಕಿನ ಗೋರಿಗುಂಡಿ ಗ್ರಾಮದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹತ್ತಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಪೊಲೀಸರು ಅನೇಕ ಬಾರಿ ಸೂಚನೆ ನೀಡಿದರೂ ಯಾವುದಕ್ಕೂ ಜಗ್ಗದೇ ಪ್ರಾರ್ಥನೆ ಸಲ್ಲಿಸಲು ಮುಂದಾದ ಮೂವರನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ನಮ್ಮ ಗ್ರಾಮಕ್ಕೆ ಹೊರ ಜಿಲ್ಲೆ ಮತ್ತು ಹೊರ ಊರುಗಳಿಂದ ಯಾರೂ ಬರಬಾರದು ಎಂದು ಕೆಲ ಕಡೆಗಳಲ್ಲಿ ರಸ್ತೆ ಬಂದ್‌ ಮಾಡಿರುವ ಘಟನೆಗಳು ನಡೆದಿವೆ. ಜಿಲ್ಲೆಯ ಕೂದುವಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೂದುವಳ್ಳಿ ಮುಖ್ಯರಸ್ತೆ, ದಿಣ್ಣೇಕೆರೆ, ಬೊಮ್ಮೇನಹಳ್ಳಿ ಮೂರು ಕಡೆಗಳಲ್ಲಿ ಗ್ರಾಮಸ್ಥರು ಬೇಲಿ ಹಾಕಿ ಹೊರಗಿನವರು ಯಾರು ಬರದಂತೆ ತಡೆ ಒಡ್ಡಿದ್ದಾರೆ.

ಕಡೂರು ತಾಲೂಕಿನ ಗುಬ್ಬಿಹಳ್ಳಿ ಗ್ರಾಮಸ್ಥರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತಗೆ ಜಾಲಿಮುಳ್ಳು, ವಿದ್ಯುತ್‌ ಕಂಬ ಅಡ್ಡ ಹಾಕಿ ಹೊರಗಿನವರು ಗ್ರಾಮಕ್ಕೆ ಪ್ರವೇಶಿಸದಂತೆ ನಿಗಾ ವಹಿಸಿದ್ದಾರೆ.

ಜಿಲ್ಲೆಯ ಕೊಪ್ಪ ಪಟ್ಟಣದ ಎನ್‌.ಆರ್‌. ಪುರ ವೃತ್ತದಲ್ಲಿ ಬೈಕ್‌ ಸ್ಟಂಟ್‌ ಮಾಡಿದ ಯುವಕರನ್ನು ಪೊಲೀಸ್‌ ಜೀಪ್‌ನಲ್ಲಿ ಬೆನ್ನಟ್ಟಿ ಅಡ್ಡಗಟ್ಟಿ ಯುವಕರಿಗೆ ಲಾಠಿರುಚಿ ನೀಡಿದರು. ನಗರದ ಎಂಜಿ. ರಸ್ತೆ, ಐ.ಜಿ. ರಸ್ತೆ, ಮಾರ್ಕೆಟ್‌ ರಸ್ತೆ, ಬಸವನಹಳ್ಳಿ ರಸ್ತೆ, ಎಂಇಎಸ್‌ ಸರ್ಕಲ್‌, ಹನುಮಂತಪ್ಪ ವೃತ್ತ, ಆಜಾದ್‌ ಪಾರ್ಕ್‌ ವೃತ್ತ, ಎಐಟಿ ವೃತ್ತ ಜನಸಂಚಾರವಿಲ್ಲದೇ ಬಿಕೋ ಎನ್ನುತ್ತಿದೆ. ಪೊಲೀಸರಿಗೆ ಲಾಠಿ ಕೊಡಬಾರದು ಎಂಬ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಯನ್ನು ಬಿಟ್ಟು ಪೊಲೀಸ್‌ ವಾಹನದಲ್ಲಿ ಗಸ್ತು ತಿರುಗುತ್ತಾ ಧ್ವನಿವರ್ಧಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ದಿನಸಿ ಅಂಗಡಿ, ಹಣ್ಣಿನ ಅಂಗಡಿ, ತರಕಾರಿ ಅಂಗಡಿ, ಪೆಂಟ್ರೋಲ್‌ ಬಂಕ್‌, ಬ್ಯಾಂಕ್‌, ಎಟಿಎಂ, ಕೃಷಿ  ಔಷಧ ಅಂಗಡಿಗಳು, ಮೆಡಿಕಲ್‌ ಶಾಪ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಿದರೂ ಎಂದಿನಂತೆ ಜನರಿಲ್ಲದೇ ಬಿಕೋ ಎನ್ನುತ್ತಿದ್ದ ದೃಶ್ಯಗಳು ಕಂಡು ಬಂದವು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.