ಜೋಗ ಜಲಪಾತ ದರ್ಶನಕ್ಕೆ ಬ್ರೇಕ್!
Team Udayavani, Jun 9, 2020, 2:36 PM IST
ಸಾಂದರ್ಭಿಕ ಚಿತ್ರ
ಸಾಗರ: ಜಗತ್ ಪ್ರಸಿದ್ಧ ,ದ ವೀಕ್ಷಣೆಗೆ ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದ್ದರೂ ಪ್ರವಾಸೋದ್ಯಮ ಇಲಾಖೆ ಏಕಾಏಕಿ ತೀರ್ಮಾನ ಬದಲಿಸಿದ್ದರಿಂದ ಪ್ರವಾಸಿಗರ ದರ್ಶನಕ್ಕೆ ಬ್ರೇಕ್ ಬಿದ್ದಿತ್ತು. ಭಾನುವಾರ ಜಲಪಾತ ವೀಕ್ಷಣೆ ಸ್ಥಳದ ಸುತ್ತಮುತ್ತ ಕೀಟನಾಶಕಗಳನ್ನು ಸಿಂಪಡಿಸಿದ ಪರಿಣಾಮ ಅದರ ವಿಷದ ಅಂಶಗಳು ಉಳಿದಿದ್ದರೆ ಪ್ರವಾಸಿಗರಿಗೆ ಮಾರಕವಾಗಬಹುದು ಎಂಬ ಕಾರಣಕ್ಕೆ ಇನ್ನೂ ಒಂದು ದಿನದ ಅವಧಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸುವ ತೀರ್ಮಾನವನ್ನು ಪ್ರವಾಸೋದ್ಯಮ ಇಲಾಖೆ ಕೊನೆ ಕ್ಷಣದಲ್ಲಿ
ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಗೇಟ್ಗೆ ಅಳವಡಿಸಿದ್ದ ಬೀಗ ತೆರೆಯಲಾಗಿಲ್ಲ. ಮಂಗಳವಾರದಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಈ ಮಧ್ಯೆ ಸೋಮವಾರ ಪ್ರವಾಸಿಗರು ಕೂಡ ದೊಡ್ಡ ಮಟ್ಟದಲ್ಲಿ ಜೋಗಕ್ಕೆ ಬಂದಿರಲಲ್ಲ. ಆದರೆ, ಬೆರಳೆಣಿಕೆಯಷ್ಟು ಪ್ರವಾಸಿಗರು ಆಗಮಿಸಿ ನಿರಾಸೆಯಿಂದ ತೆರಳಿದರು. ಸಾಗರ, ಸಿದ್ದಾಪುರ, ಹಾವೇರಿ ಭಾಗಗಳಿಂದ ಸೋಮವಾರ ಕೆಲವು ಯುವಕರು ದ್ವಿಚಕ್ರವಾಹನಗಳಲ್ಲಿ ಜಲಪಾತ ವೀಕ್ಷಣೆಗೆ ಆಗಮಿಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಸೋಮವಾರ ಒಂದು ದಿನದ ಮಟ್ಟಿ ಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಮಶಿನ್ ಮುಂತಾದವನ್ನು ಭಾನುವಾರ ಜೋಗಕ್ಕೆ ತಲುಪಿಸಲಾಗಿದೆ. ಫಾಗಿಂಗ್, ಸ್ಯಾನಿಟೈಸೇಷನ್ ಮುಂತಾದ ಅಗತ್ಯ ಕ್ರಮಗಳ ನಂತರ ಪ್ರವೇಶಾವಕಾಶವನ್ನು ಒಂದು ದಿನ ನಿರ್ಬಂಧಿ ಸುವುದು ಸೂಕ್ತ ಎಂಬ ನಿರ್ಧಾರದ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗಿದೆ. ಮಾಸ್ಕ್ ಧರಿಸುವ ಮತ್ತು ಭೌತಿಕ ಅಂತರ ಕಾಪಾಡಿಕೊಳ್ಳುವ ನಿಯಮಗಳನ್ನು ಪ್ರವಾಸಿಗರು ಕಡ್ಡಾಯವಾಗಿ ಪಾಲಿಸಲೇಬೇಕು.
ರಾಮಕೃಷ್ಣ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು