ಸೇತುವೆ- ಪಾದಚಾರಿ ಮಾರ್ಗ ನಿರ್ಮಿಸಲು ಒತ್ತಾಯ


Team Udayavani, Jun 5, 2020, 7:49 AM IST

ಸೇತುವೆ- ಪಾದಚಾರಿ ಮಾರ್ಗ ನಿರ್ಮಿಸಲು ಒತ್ತಾಯ

ಬೀರೂರು: ಕೆ-ಶಿಪ್‌ ವತಿಯಿಂದ ಬೀರೂರು- ಅಜ್ಜಂಪುರ ರಸ್ತೆ ವಿಸ್ತರಣೆ ಸಲುವಾಗಿ ಭೂಮಿ ವಶಪಡಿಸಿಕೊಂಡಿದ್ದರೂ ಪಾದಚಾರಿ ಮಾರ್ಗ ಮತ್ತು ಅಜ್ಜಂಪುರ ರಸ್ತೆ ತಿರುವಿನಲ್ಲಿ ಸೇತುವೆ ನಿರ್ಮಾಣ ಮಾಡುವಲ್ಲಿ ಪ್ರಾಧಿಕಾರ ವಿಫಲವಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಬೀರೂರು, ಚನ್ನಗಿರಿ, ದಾವಣಗೆರೆ ರಾಜ್ಯ ಹೆದ್ದಾರಿ ನಿರ್ಮಾಣದ ಸಂದರ್ಭದಲ್ಲಿ ಕೆ-ಶಿಪ್‌ ವತಿಯಿಂದ ಪಟ್ಟಣ ವ್ಯಾಪ್ತಿಯಲ್ಲಿ ಪರಿಹಾರ ನೀಡಿ ಭೂಮಿ ವಶಪಡಿಸಿಕೊಳ್ಳಲಾಗಿದ್ದು ರಸ್ತೆ ವಿಸ್ತರಣೆ ಕಾರ್ಯ ಅಷ್ಟು ಸಮಂಜಸವಾಗಿಲ್ಲದ ನಿಟ್ಟಿನಲ್ಲಿ ನಾಗರಿಕರಿಗೆ ಕಿರಿಕಿರಿ ಉಂಟಾಗಿದೆ. ಇಲ್ಲಿನ ಪಾದಚಾರಿ ಮಾರ್ಗ ನಿರ್ಮಾಣಕ್ಕೆಂದು ವಶಪಡಿಸಿಕೊಳ್ಳಲಾಗಿದ್ದ ಭೂಮಿಯಲ್ಲಿ ಕಾಮಗಾರಿ ನಡೆಸದ ಕಾರಣ ಪರಿಹಾರ ಪಡೆದವರು ಅಕ್ರಮವಾಗಿ ಗೂಡಂಗಡಿಗಳು, ಗ್ಯಾರೇಜ್‌, ಕಟ್ಟಡ ನಿರ್ಮಾಣ ಮಾಡುವ ಪ್ರಯತ್ನ ನಡೆಸಿದ್ದು, ಸಂಬಂಧಪಟ್ಟವರು ಕಂಡರೂ ಸಹ ಕಾಣದಂತಿದ್ದಾರೆ ಎನ್ನುವ ಆರೋಪಗಳು ಸಾರ್ವಜನಿಕರಿಂದ ಕೇಳಿಬಂದಿವೆ. ಸರ್ಕಾರ ಪರಿಹಾರ ನೀಡಿ ವಶಪಡಿಸಿಕೊಂಡ ಭೂಮಿಯಲ್ಲಿ ಸಂಬಂಧಪಟ್ಟ ಕಾಮಗಾರಿ ನಡೆಸಬೇಕಿರುವುದು ಹೆದ್ದಾರಿ ಪ್ರಾಧಿಕಾರದ ಕರ್ತವ್ಯವಾಗಿದೆ.

ತನ್ನ ವ್ಯಾಪ್ತಿಯಲ್ಲಿ ಇರುವ ಭೂಮಿ ವಿಸ್ತೀರ್ಣವನ್ನು ಪ್ರಾಧಿಕಾರಕ್ಕೆ ಒದಗಿಸಿದ ಪುರಸಭೆ ಕೂಡ ಎಷ್ಟು ಭೂಮಿ ವಶಪಡಿಸಿಕೊಳ್ಳಲಾಗಿದೆ? ಅಲ್ಲಿ ಮತ್ತೆ ಅಕ್ರಮ ಕಾಮಗಾರಿ ಏನಾದರೂ ನಡೆದಿದಯೇ ಎನ್ನುವುದನ್ನು ಪರೀಕ್ಷಿಸಬೇಕಿತ್ತು. ಪುರಸಭೆ ವ್ಯಾಪ್ತಿಯಲ್ಲಿ ಹಣವುಳ್ಳವರು ಕಾಮಗಾರಿಗೆ ಪರವಾನಗಿ ಮತ್ತು ಇ-ಸ್ವತ್ತು ಇಲ್ಲದೆ ಕಟ್ಟಡ ಕಾಮಗಾರಿ ನಡೆಸಿದರೂ ಸುಮ್ಮನಿರುವ ಪುರಸಭೆ ಸಾಮಾನ್ಯ ಜನರು ಸಣ್ಣಪುಟ್ಟ ದುರಸ್ತಿ ನಡೆಸಿದರೂ ತಡೆವೊಡ್ಡುವ ಪ್ರಕ್ರಿಯೆ ನಡೆಸುತ್ತದೆ. ಇಂತಹ ಹಲವು ಆರೋಪಗಳು ಕಂಡರೂ, ಕೇಳಿಬಂದರೂ ಸುಮ್ಮನಿರುವ ಈ ಎರಡು ಸಂಸ್ಥೆಗಳ ನಡೆಯೂ ಪ್ರಶ್ನಾರ್ಹವಾಗಿದೆ. ಶೀರ್ಘ‌ವಾಗಿ ಇದನ್ನು ಸರಿಪಡಿಸಿಕೊಂಡು ಜನರ ಗೊಂದಲ ನಿವಾರಿಸಿ ವಶಪಡಿಸಿಕೊಂಡ ಭೂಮಿಯಲ್ಲಿ ಸೇತುವೆ, ಪಾದಚಾರಿ ಮಾರ್ಗದ ಕಾಮಗಾರಿ ಪೂರೈಸಲಿ ಎನ್ನುತ್ತಾರೆ ಸ್ಥಳೀಯ ನಿವಾಸಿ ಕೃಷ್ಣ.

ಈ ಕುರಿತು ಪ್ರತಿಕ್ರಿಯಿಸಿದ ಕೆ-ಶಿಪ್‌ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಶಿವಮೂರ್ತಿ, ಪಟ್ಟಣದಲ್ಲಿ ರಸ್ತೆ ವಿಸ್ತರಣೆ ಸೂಕ್ತವಾಗಿಯೇ ಆಗಿದೆ. ಸೇತುವೆ ಮತ್ತು ಪಾದಚಾರಿ ಮಾರ್ಗದ ನಿರ್ಮಾಣ ಗುತ್ತಿಗೆದಾರನ ಜವಾಬ್ದಾರಿಯಾಗಿದ್ದು, ಕಾಮಗಾರಿ ಅಪೂರ್ಣ ಎನ್ನುವ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ಕೆ.ಎಂ. ಸತ್ಯನಾರಾಯಣ್‌ ಮಾತನಾಡಿ, ಅಜ್ಜಂಪುರ ರಸ್ತೆಯಲ್ಲಿ ಕೆ-ಶಿಪ್‌ ಕಾಮಗಾರಿಗೆ ಪರಿಹಾರ ನೀಡಿ ಭೂಮಿ ವಶಪಡಿಸಿಕೊಂಡಿರುವುದು ಹೌದು. ಅಲ್ಲಿ ಅಕ್ರಮ ಕಟ್ಟಡ ಕಾಮಗಾರಿಗಳು ನಡೆದರೆ ಅದು ದಂಡನಾರ್ಹವಾಗಿದೆ.ತುಮಕೂರು ಕಚೇರಿಯಿಂದ ಇಲ್ಲಿ ಎಷ್ಟು ಭೂಮಿ ವಶಪಡಿಸಿಕೊಳ್ಳಲಾಗಿದೆ ಮತ್ತು ಎಷ್ಟ ಪರಿಹಾರ ನೀಡಲಾಗಿದೆ ಎನ್ನುವ ವರದಿ ತರಿಸಿಕೊಂಡಿದ್ದು ಸಂಬಂಧಪಟ್ಟವರ ಖಾತೆಗಳಿಂದ ಅಷ್ಟು ಅಳತೆಯ ನಿವೇಶನ ಖಡಿತಗೊಳಿಸಲಾಗುವುದು. ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ನೊಟೀಸ್‌ ನೀಡಿ ನೆಲಸಮಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.