ಕೊಟ್ಟಿಗೆಹಾರ : ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮಕ್ಕೆ ಬಂತೊಂದು ಬಸ್ಸು
Team Udayavani, Aug 1, 2022, 8:09 PM IST
ಕೊಟ್ಟಿಗೆಹಾರ : ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ, 75ನೇ ಸ್ವಾಂತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನು ಕಂಡಿರೋ ಸಂತಸದ ಸುದ್ದಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯವೇ ಇರಲಿಲ್ಲ. ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕುಟುಂಗಳು ವಾಸವಿದೆ.
ಬಣಕಲ್ ಹೋಬಳಿಗೆ ಬರಲು ಈ ಗ್ರಾಮಗಳ ಜನ ಸುಮಾರು 5-7 ಕಿ.ಮೀ. ನಡೆದೇ ಬರಬೇಕಿತ್ತು, ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಕೂಡ 5-7 ಕಿ.ಮೀ. ನಡೆದೇ ಬರಬೇಕಿತ್ತು. ಇದೀಗ ಸ್ಥಳಿಯರ ದಶಕಗಳ ಮನವಿ ಮೇರೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಈ ಗ್ರಾಮಗಳಿಗೆ ಬಸ್ಸನ್ನು ಬಿಟ್ಟಿದ್ದಾರೆ.
ದಿನಕ್ಕೆ ಎರಡು ಬಾರಿ ಓಡಾಡುವ ಬಸ್ಸು ಬೆಳಗ್ಗೆ-ಸಂಜೆ ಈ ಹಳ್ಳಿಗಳಿಗೆ ಹೋಗಿ ಬರಲಿದೆ. ಈ ಬಸ್ ಸ್ಥಳೀಯರಿಗೆ ಹಾಗೂ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ. ಈ ಹಳ್ಳಿಗಳಿಗೆ ರಸ್ತೆ ಕೂಡ ಸರಿ ಇರಲಿಲ್ಲ. ಇದೀಗ ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಕೂಡ ನಿರ್ಮಾಣವಾಗಿ, ಹಳ್ಳಿಗಳಿಗೆ ಬಸ್ ಸೌಲಭ್ಯ ಸಿಕ್ಕಿರೋದ್ರಿಂದ ಹಳ್ಳಿಗರು ಖುಷಿಪಟ್ಟಿದ್ದಾರೆ.
ಇಂದು ಬಸ್ಸನ್ನು ಉದ್ಘಾಟಿಸಿದ ಶಾಸಕ ಕುಮಾರಸ್ವಾಮಿ ಅದೇ ಬಸ್ಸಿನಲ್ಲಿ ಮತ್ತಿಕಟ್ಟೆ ಗ್ರಾಮದಿಂದ ಬಣಕಲ್ವರೆಗೂ ಸ್ಥಳಿಯರ ಜೊತೆಯೇ ಸಂಚರಿಸಿದ್ದಾರೆ.
ಇದನ್ನೂ ಓದಿ : ಗಂಡನ ಮನೆಯವರ ಕಿರುಕುಳ ಆರೋಪ : ಡೆತ್ ನೋಟ್ ಬರೆದಿಟ್ಟು ತಾಯಿ ಮಗು ನೇಣಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ