‘ಅವರ ಸಮಾಧಿ ಮಣ್ಣಿನ ಮೇಲೆ ಸಂಘ,ಬಿಜೆಪಿ ಬಲವಾಗಿದೆ’:ಕನ್ನಯ್ಯ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು
Team Udayavani, Oct 2, 2021, 12:30 PM IST
ಚಿಕ್ಕಮಗಳೂರು: “ಬಿಜೆಪಿಯನ್ನು ತುಕ್ಡೆ-ತುಕ್ಡೆ ಮಾಡುತ್ತೇವೆ’ ಎಂಬ ಕಾಂಗ್ರೆಸ್ ನಾಯಕ ಕನ್ನಯ್ಯ ಕುಮಾರ್ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇವರ ತಾತ-ಮುತ್ತಾತರು ಈ ರೀತಿ ಹೇಳಿ ಕಳೆದು ಹೋಗಿದ್ದಾರೆ. ಅವರ ಸಮಾಧಿ ಮಣ್ಣಿನ ಮೇಲೆ ಸಂಘ, ಬಿಜೆಪಿ ಬಲವಾಗಿದೆ. ಕನ್ನಯ್ಯ ಕುಮಾರ್ ತುಕ್ಡೆ ಗ್ಯಾಂಗಿನ ನಾಯಕ” ಎಂದರು,
ಹಿಟ್ಟು ಹಳಸಿತ್ತು ಡ್ಯಾಶ್ ಕಾದಿತ್ತು ಎಂಬ ಗಾದೆ ಮಾತಿದೆ. ಈಗ ಅದೇ ಪರಿಸ್ಥಿತಿ ಕಾಂಗ್ರೆಸ್ಸಿನದ್ದಾಗಿದೆ. ಆಂತರಿಕ ಪ್ರಜಾಪ್ರಭುತ್ವ ಇಲ್ಲದ ಪಕ್ಷ ದೇಶಕ್ಕೇನು ಪ್ರಜಾಪ್ರಭುತ್ವ ದ ಪಾಠ ಹೇಳುತ್ತದೆ? ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಲ್ಲಿದೆ? ಅಲ್ಲಿರೋದು ವಂಶ ಪಾರಂಪರ್ಯ, ಪರಿವಾರವಾದ. ಪರಿವಾರವಾದ ಬಂದರೆ ಅಲ್ಲಿ ಮಾಲಿಕತ್ವ ಬರುತ್ತದೆ. ಅಲ್ಲಿ ಮಾಲೀಕರು-ನೌಕರರು, ಮಾಲೀಕರು-ಗುಲಾಮರು ಇರುತ್ತಾರೆ ಎಂದರು.
ಇದನ್ನೂ ಓದಿ:ರಾಷ್ಟ್ರದ ಜನರಿಗೆ ಗಾಂಧಿಜಿ, ಲಾಲಬಹುದ್ದೂರ್ ಶಾಸ್ತ್ರೀ ಇಂದಿಗೂ ಪ್ರೇರಕರು: ಕಾಗೇರಿ
ತುಕ್ಡೆ ಗ್ಯಾಂಗಿನ ನಾಯಕರಿಗೆ ಗತಿ ಇರಲಿಲ್ಲ, ಚುನಾವಣೆಯಲ್ಲಿ ಸೋತರು. ಇಂತವರು ಬಹಳ ಮಾತನಾಡಿ ಮಾತನಾಡಿ ಮಣ್ಣಾಗಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ