ಸಿದ್ದುಗೆ ದೇಶಭಕ್ತ- ದೇಶವಿರೋಧಿಗಳ ನಡುವಿನ ವ್ಯತ್ಯಾಸ ಗೊತ್ತಿಲ್ಲ: ಸಿ.ಟಿ.ರವಿ


Team Udayavani, Sep 30, 2022, 6:45 AM IST

ಸಿದ್ದುಗೆ ದೇಶಭಕ್ತ- ದೇಶವಿರೋಧಿಗಳ ನಡುವಿನ ವ್ಯತ್ಯಾಸ ಗೊತ್ತಿಲ್ಲ: ಸಿ.ಟಿ.ರವಿ

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಭಕ್ತ ಸಂಘಟನೆ. ದೇಶದ ಮೇಲೆ ಬಾಹ್ಯ ಆಕ್ರಮಣ ಹಾಗೂ ಪ್ರಕೃತಿ ವಿಕೋಪಕ್ಕೆ ಒಳಗಾದಾಗ ದೇಶದ ಪರ ನಿಂತು ಕೆಲಸ ಮಾಡಿದ ಸಂಘಟನೆ. ದೇಶಭಕ್ತ ಸಂಘಟನೆಯನ್ನು ನಿಷೇಧಿ ಸುವುದು ಎಂದರೆ ಸಿದ್ದರಾಮಯ್ಯ ಏನೆಂದು ತಿಳಿದುಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸ್ವಯಂ ಸೇವಕರಾಗಿದ್ದವರು ದೇಶದ ಪ್ರಧಾನಿಯಾಗಿದ್ದಾರೆ. ನಾನು ಸ್ವಯಂ ಸೇವಕನಾಗಿ ಕೆಲಸ ಮಾಡಿದ್ದೇನೆ. ಸ್ವಯಂಸೇವಕ ಸಂಘ ಎಂದರೆ ಏನೆಂದು ನಮಗೆ ಗೊತ್ತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಷೇಧಿ ಸಲು ಕಾರಣ ಬೇಕಲ್ವಾ? ದೇಶಭಕ್ತ ಸಂಘಟನೆ, ದೇಶ ವಿರೋಧಿ ಸಂಘಟನೆ ಇವೆರೆಡರ ನಡುವಿನ ವ್ಯತ್ಯಾಸ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ ಎಂದರು.

ಅಲ್ಪಸಂಖ್ಯಾತರ ಮತಕ್ಕೆ ಆಸೆ ಪಟ್ಟು ದೇಶದ್ರೋಹದ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಪಕ್ಷಗಳು ಕುಮ್ಮಕ್ಕು ನೀಡುತ್ತಿವೆ. ನಮ್ಮ ಬದುಕು, ಜೀವನ, ಅಧಿಕಾರಕ್ಕಿಂತ ದೇಶ ದೊಡ್ಡದು. ಅವರಿಗೆ ದೇಶ ಹಾಳಾದರೂ ಪರವಾಗಿಲ್ಲ. ಅಧಿಕಾರ ಬೇಕು ಎಂಬ ಮನಸ್ಥಿತಿ ಹೊಂದಿದವರು. ಇವರ ಆಟ ಇಲ್ಲಿ ನಡೆಯುವುದಿಲ್ಲ ಎಂದರು.

ಲೂಟಿ ರವಿ ಮೊದಲು ಸಂವಿಧಾನಕ್ಕೆ ಗೌರವ ಕೊಡುವುದನ್ನು ಕಲಿಯಲಿ ಎಂಬ ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಫ್ತಾ ಗ್ಯಾಂಗ್‌ ನಾಯಕರೆಲ್ಲಾ ಪೊಲಿಟಿಕಲ್‌ ಲೇಬಲ್‌ ಅಂಟಿಸಿಕೊಂಡರೆ ನಾಯಕರಾಗಲು ಸಾಧ್ಯವಿಲ್ಲ. ಹರಿಪ್ರಸಾದ್‌ ಒಂದು ಕಾಲದಲ್ಲಿ ಹಫ್ತಾ ವಸೂಲಿ ಗ್ಯಾಂಗ್‌ನಲ್ಲಿದ್ದವರು. ಅವರು ನನಗೆ ಸರ್ಟಿಫಿಕೇಟ್‌ ಕೊಡುವ ಅವಶ್ಯಕತೆ ಇಲ್ಲ. ಬಿ.ಕೆ.ಹರಿಪ್ರಸಾದ್‌ ಇಲ್ಲಿಯವರೆಗೂ ಒಂದೇ ಒಂದು ಚುನಾವಣೆಯಲ್ಲಿ ಗೆಲುವು ಸಾಧಿ ಸಿಲ್ಲ. ಗೆಲ್ಲೋಕೆ ಸಾಧ್ಯನೂ ಇಲ್ಲ. ಹರಿಪ್ರಸಾದ್‌ ರೀತಿಯಲ್ಲಿ ನಾನು ಕೊತ್ವಾಲ್‌ ರಾಮಚಂದ್ರನ ಶಿಷ್ಯನೂ ಅಲ್ಲ. ಹಫ್ತಾ ವಸೂಲಿ ಮಾಡುವ ಕ್ಯಾರೆಕ್ಟರ್‌ ನನ್ನದಲ್ಲ ಎಂದರು.

ಸಿದ್ದರಾಮಯ್ಯ ಮಾತನಾಡುವ ಮುಂಚೆ ಎಚ್ಚರಿಕೆ ವಹಿಸಬೇಕು. ದೇಶದ್ರೋಹಿಗಳ ಜತೆ ಸೇರಿ ದೇಶಪ್ರೇಮಿಗಳನ್ನು ಅವಮಾನಿಸಿದರೆ ನೀವು ಉಳಿಯುವುದಿಲ್ಲ, ದೇಶದ್ರೋಹಿಗಳೂ ಉಳಿಯುವುದಿಲ್ಲ. ದೇಶಪ್ರೇಮಿಗಳನ್ನು ಹೊರ ಹಾಕಿದರೆ ದೇಶ ಉಳಿಸುವವರು ಯಾರು ಎಂದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.