ಸಿದ್ದರಾಮಯ್ಯ ತಾಲಿಬಾನ್ ಗೆ ಕಡಿಮೆ ಇಲ್ಲದ ಮನಸ್ಥಿತಿಯವರು: ಸಿ.ಟಿ.ರವಿ ಟೀಕೆ


Team Udayavani, Feb 28, 2022, 3:34 PM IST

ಸಿದ್ದರಾಮಯ್ಯ ತಾಲಿಬಾನ್ ಗೆ ಕಡಿಮೆ ಇಲ್ಲದ ಮನಸ್ಥಿತಿಯವರು: ಸಿ.ಟಿ.ರವಿ ಟೀಕೆ

ಚಿಕ್ಕಮಗಳೂರು: ಕೇಸರಿ ಶಾಲು ತಿರಸ್ಕರಿಸುವ ಸಿದ್ದರಾಮಯ್ಯ ಮುಸ್ಲಿಂ ಧರ್ಮದ ಟೋಪಿ ಧರಿಸುತ್ತಾರೆ. ಕೇಸರಿ ಪೇಟವನ್ನು ನೋಡಿದರೆ ಸಿದ್ದರಾಮಯ್ಯ ಉರಿದು ಬೀಳುತ್ತಾರೆ. ಸಿದ್ದರಾಮಯ್ಯ ಒಬ್ಬರು ಮತೀಯವಾದಿ, ಸಿದ್ದರಾಮಯ್ಯ ತಾಲಿಬಾನ್ ಕ್ಕಿಂತ ಕಡಿಮೆ ಇಲ್ಲದ ಮನಸ್ಥಿತಿಯವರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಮೂಲಕ ಕಾಂಗ್ರೆಸ್ ಮತಿಯ ವಾದವನ್ನು ಹೊರಹಾಕಿದೆ. ಕಾಂಗ್ರೇಸ್ ನ ಜಾತ್ಯತೀತವಾದ ಎನ್ನುವುದು ನಾಟಕ, ಹಿಂದೂಗಳನ್ನು ಮೋಸ ಮಾಡುವುದಕ್ಕೆ ಮಾತ್ರ ಉಪಯೋಗವಾಗುತ್ತದೆ ಎಂದರು.

ಕೇಸರ ಪೇಟ ನೋಡಿದರೆ ಉರಿದುಬೀಳುವ ಸಿದ್ದರಾಮಯ್ಯನವರು ಸ್ಕಲ್ ಟೋಪಿ ಹಾಕಿಕೊಂಡು ಹೋಗಿದ್ದು ನೋಡಿದಾಗ ಅವರು ಜಾತ್ಯಾತೀತವೆಂದು ಯಾವ ಲೇಬಲ್ ನಲ್ಲಿ ಬರೆದುಕೊಂಡರೂ ನಂಬಲಾಗದು. ಕುಂಕುಮ ಕಂಡರೆ ಹೆದರಿಕೆಯಾಗುತ್ತದೆಂದು ಹೇಳಿದ್ದರು. ಅವರ ತಾಯಿಯ ಹಣೆಯಲ್ಲಿ ಕುಂಕುಮ ಇದೆ, ಪತ್ನಿಯ ಹಣೆಮೇಲೂ ಕುಂಕಮವಿದೆ. ಸೊಸೆಯ ಹಣೆಮೇಲೂ ಕುಂಕುಮವಿದೆ. ಅವರಿಗೆ ಹೆಣ್ಣು ಮಕ್ಕಳಿದ್ದರೆ ಅವರ ಹಣೆಯಲ್ಲಿಯೂ ಕುಂಕುಮ ಇದೆ ಎಂದರು.

ಕುಂಕುಮದಿಂದ ಜಗತ್ತಿನಲ್ಲಿ ಎಲ್ಲೂ ಭಯೋತ್ಪಾದನೆ ನಡೆದಿಲ್ಲ. ಸ್ಕಲ್ ಟೋಪಿಯ ಜನ ತಮ್ಮವರನ್ನು ಕೊಂದಿದ್ದಾರೆ ಬೇರೆಯವರನ್ನೂ ಕೊಂದಿದ್ದಾರೆ, ಬಹುಶಃ ಇವನ್ನೆಲ್ಲ ನೋಡಿದರೆ ಅವರ ತಂದೆ ಸಿದ್ದರಾಮಯ್ಯ ಎಂದು ಹೆಸರು ಇಡುತ್ತಿರಲಿಲ್ಲ. ಹಿಂದೆ ರಾಮನ ಹೆಸರಿದೆ ಎಂದಿದ್ದರು, ಅಂದಿನ ಕಾಲದ ಸಮಾಜ ಸುಧಾರಕ ಸಿದ್ದರಾಮನ ಹೆಸರಿದೆ. ಆದರೆ ಇವರು ನಡೆದುಕೊಳ್ಳುತ್ತಿರುವ ರೀತಿಗೂ ಅವ್ರಿಗೂ ಸಂಬಂಧವಿಲ್ಲ ಎನ್ನುವುದು ವ್ಯಕ್ತವಾಗುತ್ತದೆ ಎಂದು ಸಿ.ಟಿ ರವಿ ಟೀಕೆ ಮಾಡಿದರು.

ಇದನ್ನೂ ಓದಿ:ಯುದ್ಧದಿಂದ ಭಾರತದ ಕೃಷಿ ಕ್ಷೇತ್ರದ ಮೇಲೆ ಪರಿಣಾಮದ ಬಗ್ಗೆ ಚಿಂತೆ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ರಾಜಕಾರಣ ಬಿಟ್ಟರೆ ಬೇರೆನೂ ಇಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಿದೆ. ನಮ್ಮ ಪ್ರಶ್ನೆಗಳಿಗೆ ಇವತ್ತಿನವರೆಗೂ ಉತ್ತರ ಕೊಟ್ಟಿಲ್ಲ. ನೀವು ಇಲ್ಲಿ ಪಾದಯಾತ್ರೆ ನಾಟಕವನ್ನು ಮಾಡುವುದರ ಬದಲಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಿಯೋಗ ಕರೆದುಕೊಂಡು ತಮಿಳುನಾಡಗೆ ಹೋಗಿ. ಅಲ್ಲಿರುವ ಚಿದಂಬರಂ, ಡಿಎಂಕೆ ಸ್ಟಾಲಿನ್ ಅವರನ್ನು ಒಪ್ಪಿಸಿದರೆ ಸುಲಭವಾಗುತ್ತದೆ. ಅವರು ಅಕ್ಷೇಪಣೆ ಇಲ್ಲವೆಂದರೆ ಎಲ್ಲಾ ರೀತಿಯ ಅಡೆತಡೆಗಳು ನಿವಾರಣೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆ ಕೇವಲ ದೈಹಿಕ ಕಸರತ್ತು ಕೊಡಬಹುದು ಎಂದರು.

ತಮಿಳುನಾಡನ್ನು ಒಪ್ಪಿಸುವ ತಾಕತ್ತು ಸಿದ್ದರಾಮಯ್ಯನವರಿಗಿದೆ. ಸಿದ್ದರಾಮಯ್ಯ ಗುಟುರು ಹಾಕಿದರೆ ಸೋನಿಯಾ ಗಾಂಧಿ ಅಲರ್ಟ್ ಆಗುತ್ತಾರೆ. ಸೋನಿಯಾ ಗಾಂದಿ ಮಾತು ಹೇಳಿದರೆ ಚಿದಂಬರಂ ತೆಗೆದುಹಾಕಲ್ಲ. ಚಿದಂಬರಂ ಒಂದು ಮಾತು ಹೇಳಿದರೆ ಸ್ಟಾಲಿನ್ ತೆಗೆದುಹಾಕಲ್ಲ. ಇದು ಸುಲಭದಲ್ಲಿ ಅಗಲಿರುವ ಸಂಗತಿ. ಆದರೆ ಇಲ್ಲಿ ಮಾಡುತ್ತಿರುವುದು ರಾಜಕಾರಣ ಅದು ಬಿಟ್ಟು ಬೇರೆನೂ ಇಲ್ಲ ಎಂದು ಸಿ.ಟಿ ರವಿ ಹೇಳಿದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

7-

HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.