ಕಾಂಗ್ರೆಸ್ ಗೆ ಸುಳ್ಳೇ ‘ಮನೆ ದೇವರು’: ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ. ರವಿ ಟೀಕೆ
Team Udayavani, Nov 30, 2020, 3:27 PM IST
ಚಿಕ್ಕಮಗಳೂರು: ಕಾಂಗ್ರೆಸ್ ಗೆ ಇರುವ ಪಟ್ಟವನ್ನು ಇನ್ಯಾರು ಕಿತ್ತುಕೊಳ್ಳಲು ಆಗುವುದಿಲ್ಲ. ಕಾಂಗ್ರೆಸ್ ಗೆ ಬಂದ ನಂತರ ಸಿದ್ದರಾಮಯ್ಯ ಕಾಂಗ್ರೆಸ್ ಪಾಠವನ್ನೇ ಕಲಿಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ ವೈ ವಿರುದ್ದ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸತ್ಯವನ್ನು ನಂಬದೇ ಇರುವವರಿಗೆ ಸತ್ಯವೆಲ್ಲಾ ಸುಳ್ಳಾಗಿ ಕಾಣುತ್ತದೆ. ಸತ್ಯವನ್ನು ನಂಬುವ ಸ್ವಭಾವ ಕಾಂಗ್ರೆಸ್ ನವರಿಗೆ ಇಲ್ಲ, ಸುಳ್ಳು ಹೇಳುವುದರಲ್ಲಿ ಅವರಿಗಿಂತ ನಿಸ್ಸೀಮರು ಯಾರು ಇಲ್ಲ ಎಂದರು.
ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಗೆ ಸುಳ್ಳೇ ‘ಮನೆ ದೇವರು’ ಆ ಕಾಂಗ್ರೆಸ್ ಗೆ ಹೋದ ಸಿದ್ದರಾಮಯ್ಯ ಸಹ ಸುಳ್ಳನ್ನೆ ಮನೆ ದೇವರಾಗಿ ಮಾಡಿಕೊಂಡಿದ್ದಾರೆ ಎಂದರು.
ಇದನ್ನೂ ಓದಿ:ನಾನು ಡಿಸಿಎಂ ಆಗಬೇಕೆನ್ನುವುದು ಜನರ ಆಸೆ: ಬಹಿರಂಗವಾಗಿಯೇ ಬೇಡಿಕೆಯಿಟ್ಟ ಶ್ರೀರಾಮುಲು
ಸಿಎಎ ವಿರುದ್ಧ ಭಯ ಹುಟ್ಟಿಸಿ ಮುಸ್ಲೀಂರನ್ನು ಬೀದಿಗೆ ಇಳಿಸಿದ್ದರು. ಕೇಂದ್ರದ ನೂತನ ಕೃಷಿ ಕಾಯ್ದೆಯ ಬಗ್ಗೆಯೂ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ನೂತನ ಕೃಷಿ ಕಾಯ್ದೆ ರೈತರ ಬದುಕನ್ನು ಕಿತ್ತುಕೊಳ್ಳುತ್ತದೆ ಎಂದು ಅಪಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು.
ನಟ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶ ಮಾಡುತ್ತಾರೆ ಎನ್ನುವುದು ಹತ್ತು ವರ್ಷದಿಂದ ಕೇಳಿಬರುತ್ತಿರುವ ಮಾತು. ಅವರು ನಿರ್ಣಯ ಮಾಡದೇ ನಾವು ಪ್ರತಿಕ್ರಿಯೆ ನೀಡೋದು ಸೂಕ್ತವಲ್ಲ, ರಾಜಕೀಯಕ್ಕೆ ಬರುವ ಬಗ್ಗೆ ರಜನಿಕಾಂತ್ ನಿರ್ಣಯ ಮಾಡಲಿ. ನಿರ್ಣಯ ಮಾಡಿದಮೇಲೆ ಸನ್ನಿವೇಶ, ಸಂದರ್ಭ ನೋಡಿ ಮುಂದಿನ ತೀರ್ಮಾನ ಅವರು ಕೈಗೊಳ್ಳಲಿ, ನಾವು ಪ್ರತಿಕ್ರಿಯೆ ಕೊಡುತ್ತೇವೆ. ನಾನು ವೈಯಕ್ತಿಕವಾಗಿ ಅವರ ಜೊತೆ ಮಾತಾನಾಡಿಲ್ಲ ಎಂದು ತಿಳಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ವಿಚಾರವಾಗಿ ಡಿ.4ರಂದು ಕೋರ್ ಕಮಿಟಿ ಸಭೆ ಇದೆ. ಕೆಲವು ಸಂಗತಿಗಳನ್ನು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಬೇಕಾಗಿದೆ. ವ್ಯಕ್ತಿಗಳನ್ನು ತೃಪ್ತಿಪಡಿಸೋಕೆ ಆಗುವುದಿಲ್ಲ. ಆಯ್ಕೆಯ ಮಾನದಂಡ ಹಾಗೂ ಆಯ್ಕೆಯ ಪ್ರಕಿಯೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…