ಕಾಂಗ್ರೆಸ್ ನಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ರೆ ಕ್ರಿಮಿನಲ್ ಆಗ್ತಾರಾ? ಸಿ.ಟಿ.ರವಿ ಕಿಡಿ
Team Udayavani, Oct 29, 2020, 3:04 PM IST
ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಮುನಿರತ್ನ ಕ್ರಿಮಿನಲ್ ಹಿನ್ನಲೆಯವರು ಎಂದು ಸಿದ್ದರಾಮಯ್ಯ ಹೇಳಿದ್ದರು. ಹಾಗಾದರೆ ಎರಡು ಬಾರಿ ಟಿಕೆಟ್ ಕೊಟ್ಟು ಶಾಸಕ ಮಾಡಿದ ಪಾರ್ಟಿ ಯಾವುದು? ಅವರ ಪಕ್ಷದಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ರೆ ಕ್ರಿಮಿನಲ್ಲಾ ಎಂದು ಸಚಿವ ಸಿ ಟಿ ರವಿ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
2018ರ ಚುನಾವಣೆಯಲ್ಲಿ ಮುನಿರತ್ನ ಇಂದ್ರ, ಚಂದ್ರ, ದೇವೇಂದ್ರ ಎಂದಿದ್ದರು. ಈಗ ಮುನಿರತ್ನ ಪಾರ್ಟಿ ಬಿಟ್ಟ ಕೂಡಲೇ ಬದಲಾಗುತ್ತಾರಾ? ಹಳೇ ವಿಡಿಯೋ ತೆಗೆದು ನೋಡಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಗೆ ಮುನಿರತ್ನ ಪರ ಪ್ರಚಾರ ಮಾಡಿದ್ದಾರೆಂದು ನೋಡಿ ಎಂದರು.
“ಡಿ.ಕೆ.ಶಿವಕುಮಾರ್ ಬಾಂಬೆಗೆ ಹೋಗಿದ್ದರಲ್ಲಾ ಯಾಕೆ ಹೋಗಿದ್ದರು? ಶಾಸಕರನ್ನು ಮನವೊಲಿಸಿ ಕರೆತರ್ತೀನಿ ಅಂತ ತಾನೇ ಹೈಡ್ರಾಮ ಮಾಡಿ ಬಾಂಬೆಯಲ್ಲಿ ನಿಂತಿದ್ದು, ಇವರು ಸರಿ ಇಲ್ಲ ಎನ್ನುವುದಾದರೆ ಕರೆತರಲು ಯಾಕೆ ಹೋಗಿದ್ದರು? ಎಲ್ಲಾ ಒಪ್ಪಿದ್ದಾರೆ ನಿಮ್ಮನ್ನೆ ಮಂತ್ರಿ ಮಾಡ್ತೀವಿ ಬನ್ನಿ ಎಂದು ಸಿದ್ದರಾಮಯ್ಯ ಯಾಕೆ ಹೇಳಿದ್ದರು? ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ಸಚಿವ ಸಿ.ಟಿ.ರವಿ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ