ಹಿಂದೂಗಳಲ್ಲಿನ ಹಿಂಜರಿಕೆ ಭಾವನೆ ತೊಡೆದು ಹಾಕಲು ಕರೆ


Team Udayavani, Sep 2, 2017, 3:09 PM IST

02-CHIK-3.jpg

ಮೂಡಿಗೆರೆ: ಹಿಂದೂ ಧರ್ಮ ಒಂದು ಜೀವನ ಪದ್ದತಿ. ಎಲ್ಲರನ್ನೂ ಒಪ್ಪಿಕೊಳ್ಳುವ ಹಾಗೂ ಅಪ್ಪಿಕೊಳ್ಳುವ ವಿಶ್ವದಲ್ಲಿನ ಏಕೈಕ ಧರ್ಮವಾಗಿದೆ ಎಂದು ಆರ್‌ಎಸ್‌ಎಸ್‌ ಪ್ರಮುಖ್‌ ಡಾ| ಕಲ್ಲಡ್ಕ ಪ್ರಭಾಕರ್‌ ಭಟ್‌ ತಿಳಿಸಿದರು.

ಅವರು ಪಟ್ಟಣದ ಸಾರ್ವಜನಿಕ ಮಹಾ ಗಣಪತಿ ಸೇವಾ ಸಮಿತಿ ಹಮ್ಮಿಕೊಂಡಿದ್ದ ಏಕದಶ ರುದ್ರ ಹೋಮ ಪೂಜೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಸಾವಿರಾರು ವರ್ಷಗಳಿಂದ ನಡೆದ ಆಕ್ರಮಣ ಮತ್ತು ಒಗ್ಗಟ್ಟಿನ ಕೊರತೆಯಿಂದ ಇಂದು ಹಿಂದೂಗಳಲ್ಲಿ ಉಂಟಾಗಿರುವ ಹಿಂಜರಿಕೆಯ ಭಾವನೆಯನ್ನು ಮೊದಲು ತೊಡೆದುಹಾಕಬೇಕು. ನಮ್ಮಲ್ಲಿನ ಸ್ವಾಭಿಮಾನ ಬಿಟ್ಟಿದ್ದರಿಂದ ಅಖಂಡ ಭಾರತದ ಕನಸನ್ನು ಮರೆತು ದೇಶ ಒಡೆಯುವ ಹಂತಕ್ಕೆ ತಲುಪಿದೆ ಎಂದ ಅವರು, ಜಗತ್ತಿನಲ್ಲಿ ಹಿಂದೂ ಧರ್ಮ ಬಿಟ್ಟರೆ ಬೇರೆ ಯಾವುದೇ ಧರ್ಮ ಸರ್ವೇಜನ ಸುಖೀನೋಭವಂತು ಎಂಬುದನ್ನು ಹೇಳಿಕೊಟ್ಟಿಲ್ಲ. ತಾಯಿಯನ್ನು ಪೂಜಿಸುವ ಏಕೈಕ ಧರ್ಮವಿದ್ದರೆ ಅದು ನಮ್ಮದು ಮಾತ್ರ. ಈ ಕಾರಣದಿಂದಲೆ ನವರಾತ್ರಿ ಹೆಸರಿನಲ್ಲಿ
ತಾಯಿ ಅವತಾರವಾದ ದುರ್ಗಿಯನ್ನು ಪೂಜೆ ಮಾಡುವ ಮೂಲಕ ಅಮ್ಮನ ಸೇವೆ, ತ್ಯಾಗ, ಸಮರ್ಪಣೆಗಳನ್ನು ನೆನಪಿಸಿಕೊಳ್ಳಲಾಗುತ್ತದೆ ಎಂದರು.

ಬೇರೆ ಧರ್ಮದವರು ತಮ್ಮ ಮತವನ್ನು ಅರೆದು ಕುಡಿದಿರುತ್ತಾರೆ. ಆದರೆ ನಾವು ನಮ್ಮ ಧರ್ಮಗ್ರಂಥಗಳು ಯಾವುದೆಂಬುದನ್ನೇ ಮರೆತುಬಿಟ್ಟಿದ್ದೇವೆ. ರಾಮಾಯಣ ಒಂದು ಜೀವನ ದರ್ಶನ. ಇದನ್ನು ತಾಯಂದಿರು ಮಕ್ಕಳಿಗೆ ಕಲಿಸಿಕೊಡಬೇಕು. ಶತಮಾನಗಳ ಹಿಂದೆಯೆ ಆರ್ಯಭಟ, ವರಹಾಮಿಹೀರಾ ಮುಂತಾದವರು ಭೂಮಿ ಸೂರ್ಯನ ಸುತ್ತ ಸುತ್ತುತ್ತದೆ ಎಂಬುದನ್ನು ಜಗತ್ತಿಗೆ ಸಾರಿದವರು. ಇಂತಹ ಧಾರ್ಮಿಕತೆಗೆ ಇಂದು ಮತಾಂತರ ಎಂಬ ಪೆಡಂಭೂತ ಲಗ್ಗೆ ಇಟ್ಟಿದ್ದು, ನಮ್ಮ ಹೆಣ್ಣು ಮಕ್ಕಳನ್ನು ಮತಾಂತರಿಸಿ ಭಯೋತ್ಪಾಧನೆಗೆ ಕಳುಹಿಸಿಕೊಡಲಾಗುತ್ತಿದೆ. ಇದಕ್ಕಾಗಿ ಕೇರಳದಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದೆ ಎಂದರು.

ಕಳೆದ 10 ವರ್ಷಗಳಿಂದ ತಮ್ಮ ಶಾಲೆಯ ಮಕ್ಕಳಿಗೆ ಊಟಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಬರುತ್ತಿದ್ದ ಸಹಾಯಧನವನ್ನು ಈಗಿನ ಸಿದ್ದರಾಮಯ್ಯ ಸರಕಾರ ತಡೆ ಹಿಡಿದಿದ್ದು, ಅದೇ ಅನ್ಯ ಧರ್ಮಿಯರಿಗೆ ಕೈಎತ್ತಿ ನೀಡುತ್ತಿದೆ. ಆದರೆ ಸಮಾಜ ಇಂದು ಭಿಕ್ಷೆಯ ಮೂಲಕ ಲಕ್ಷಾಂತರ ಹಣವನ್ನು ಶಾಲಾ ಮಕ್ಕಳಿಗೆ ನೀಡಿ, ಅನ್ನ ನೀಡಲು ಸಹಕರಿಸಿದ್ದು, ಅನ್ನ ಕಿತ್ತುಕೊಂಡ ಸರಕಾರಕ್ಕೆ ಧಿಕ್ಕಾರವಿರಲಿ ಎಂದು ಆಕ್ರೋಶವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಅವರನ್ನು ಹ್ಯಾಂಡ್‌ಪೋಸ್ಟ್‌ ಸರ್ಕಲ್‌ನಿಂದ ಪಟ್ಟಣದ ಕೆ.ಎಂ. ರಸ್ತೆ ಮೂಲಕ ಸಾರ್ವಜನಿಕ ಗಣಪತಿ ಪೆಂಡಾಲ್‌ಗೆ ಮೆರವಣಿಗೆ ಮೂಲಕ ಕರೆತರಲಾಯಿತು.  ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ,  ಜಿ.ಪಂ. ಅಧ್ಯಕ್ಷೆ  ಚೈತ್ರಶ್ರೀ, ತಾ.ಪಂ. ಅಧ್ಯಕ್ಷ ಕೆ.ಸಿ.ರತನ್‌, ಖಾಂಡ್ಯ ಪ್ರವೀಣ, ರಘು ಜನ್ನಾಪುರ ಮತ್ತಿತತರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.