ಕೆನರಾ ಬ್ಯಾಂಕ್ ಸೇವೆ ಸ್ಥಗಿತ
Team Udayavani, Jul 25, 2020, 11:52 AM IST
ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯ ಕೆನರಾ ಬ್ಯಾಂಕ್ ಉದ್ಯೋಗಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಬ್ಯಾಂಕ್ ಗ್ರಾಹಕರ ಸೇವೆ ಸ್ಥಗಿತಗೊಳಿಸಿದೆ.
ಬ್ಯಾಂಕಿನ ಉದ್ಯೋಗಿ ಒಬ್ಬರಿಗೆ (28), ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರು ಮಂಗಳವಾರ ಪರೀಕ್ಷೆಗೆ ಗಂಟಲ ದ್ರವ ನೀಡಿದ್ದು ಗುರುವಾರ ಪಾಸಿಟಿವ್ ಎಂದು ವರದಿ ಬಂದ ಹಿನ್ನೆಲೆಯಲ್ಲಿ ಅವರು ದಾವಣಗೆರೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಇತ್ತ ಬ್ಯಾಂಕಿನ ಸಿಬ್ಬಂದಿ ಶಾಖೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿಸಿದ್ದು ಜೊತೆಗೆ ಎಲ್ಲಾ ಸಿಬ್ಬಂದಿಯು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಹಾಗಾಗಿ ಶುಕ್ರವಾರ ಗ್ರಾಹಕರಿಗೆ ಯಾವುದೇ ಸೇವೆ ಲಭ್ಯವಾಗಿಲ್ಲ. ಆದರೆ ಆನ್ಲೈನ್ ವ್ಯವಹಾರ ನಡೆದಿದೆ.
ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ಸೋಮವಾರದ ವೇಳೆಗೆ ಸಿಬ್ಬಂದಿಯ ವರದಿ ಬಂದಲ್ಲಿ ಬ್ಯಾಂಕ್ ಗ್ರಾಹಕರ ಸೇವೆಗೆ ಮುಕ್ತವಾಗಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ