ಮತದಾರರ ಸೆಳೆಯಲು ಅಭ್ಯರ್ಥಿಗಳ ಕಸರತ್ತು

•ಬಿಜೆಪಿಯಿಂದ ಅಭಿವೃದ್ಧಿ ಮಂತ್ರ •ಕಾಂಗ್ರೆಸ್‌ಗೆ ಗೆಲ್ಲುವ ರಣತಂತ್ರ•ಸ್ಪರ್ಧಿಸಿದ ಏಕೈಕ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಹೋರಾಟದ ಮಂತ್ರ

Team Udayavani, May 23, 2019, 9:45 AM IST

cb-tdy-1..

ಶೃಂಗೇರಿ: ವಿವಿಧ ವಾರ್ಡ್‌ಗಳಲ್ಲಿ ಶಾಸಕ ಟಿ.ಡಿ.ರಾಜೇಗೌಡ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಶೃಂಗೇರಿ: ಬಿಜೆಪಿಗೆ ಅಭಿವೃದ್ಧಿ ಮಂತ್ರ, ಕಾಂಗ್ರೆಸ್‌ಗೆ ಗೆಲ್ಲುವ ರಣತಂತ್ರ, ಜೆಡಿಎಸ್‌ ಸ್ಪರ್ಧಿಸಿದ ಏಕೈಕ ಕ್ಷೇತ್ರದಲ್ಲಿ ಹೋರಾಟದ ಮಂತ್ರ ಹಾಗೂ ಪಕ್ಷೇತರರ ಅಬ್ಬರದ ಪ್ರಚಾರ, ವೈಯಕ್ತಿಕ ಮತದಾರರ ಭೇಟಿ, ಹಾಲಿ ಹಾಗೂ ಮಾಜಿ ಶಾಸಕರ ವೈಯಕ್ತಿಕ ಪ್ರತಿಷ್ಟೆಯ ಜಿದ್ದಾಜಿದ್ದಿ. ಇದು ಶೃಂಗೇರಿ ಪಟ್ಟಣ ಪಂಚಾಯತ್‌ ಚುನಾವಣೆಯ ಹೈಲೈಟ್ಸ್‌.

ಪ್ರಜ್ಞಾವಂತ ಮತದಾರರ ಚುನಾವಣೆಯಂದೇ ಕರೆಯುವ ಪಟ್ಟಣ ಪಂಚಾಯತ್‌ ಚುನಾವಣೆಗೆ ಕಾವು ತಾರಕ್ಕೇರಿದೆ. ಆದರೆ ಮತದಾರರು ಮಾತ್ರ ಗುಟ್ಟು ಬಿಟ್ಟುಕೊಡದೆ ಮೌನಕ್ಕೆ ಶರಣಾಗಿದ್ದಾರೆ.

ಇಲ್ಲಿನ ಪಟ್ಟಣ ಪಂಚಾಯತ್‌ 11 ವಾರ್ಡ್‌ ಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 25 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯಲಿದೆ. 1387 ಪುರುಷರು, 1477 ಮಹಿಳಾ ಮತದಾರರು ಸೇರಿ ಒಟ್ಟು 2858 ಮತದಾರರಿದ್ದಾರೆ. 11 ವಾರ್ಡ್‌ಗಳಲ್ಲಿ 4 ವಾರ್ಡ್‌ಗಳು ಮಹಿಳೆಯರಿಗೆ ಮೀಸಲಾಗಿದ್ದು, ಆದರೆ 11 ವಾರ್ಡ್‌ಗಳಲ್ಲಿ 7 ವಾರ್ಡ್‌ಗಳಲ್ಲಿ ಮಹಿಳಾ ಮತದಾರರೇ ನಿರ್ಣಾಯಕರಾಗಿದ್ದಾರೆ.

1ನೇ ವಾರ್ಡ್‌: 1ನೇ ವಾರ್ಡ್‌ನಲ್ಲಿ 130 ಪುರುಷರು, 125 ಮಹಿಳೆಯರು ಸೇರಿ 255 ಮತದಾರರಿದ್ದು, ಶೇ.60ರಷ್ಟು ಮತದಾರರು ಮುಸ್ಲಿಂ ಸಮುದಾಯದವರಾಗಿದ್ದಾರೆ. ಈ ವಾರ್ಡ್‌ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿದ್ದು, ಇಲ್ಲಿ 5 ಜನರ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‌ನಿಂದ ರಿಯಾಜ್‌ ಅಹಮದ್‌, ಬಿಜೆಪಿಯಿಂದ ಸಾದಿಕ್‌ ಅಹಮದ್‌, ಜೆಡಿಎಸ್‌ನಿಂದ ಫಯಾಜ್‌ ಮಹಮದ್‌ ಖಾನ್‌ ಅಭ್ಯರ್ಥಿಯಾಗಿದ್ದಾರೆ. ಪಕ್ಷೇತರರಾಗಿ ಅಸ್ಗರ್‌ ಆಲಿ ಖಾನ್‌, ರಫೀಕ್‌ ಅಹಮದ್‌ ಸ್ಪರ್ಧಿಸಿದ್ದಾರೆ.

2ನೇ ವಾರ್ಡ್‌: ಈ ವಾರ್ಡ್‌ ಪರಿಶಿಷ್ಟ ಜಾತಿಗೆ ಮೀಸಲಿದ್ದು, 147 ಪುರುಷರು, 155 ಮಹಿಳೆಯರು ಸೇರಿ ಒಟ್ಟು 302 ಮತದಾರರಿದ್ದು, ಜಿಪಂ ಸದಸ್ಯ ಬಿ.ಶಿವಶಂಕರ್‌ ಸಹೋದರ ಅರುಣ್‌ ಬಿಜೆಪಿಯಿಂದ ಸ್ಪರ್ಧಿಸಿದ್ದರೆ, ಶೇಖರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

3ನೇ ವಾರ್ಡ್‌: ಈ ವಾರ್ಡ್‌ನಲ್ಲಿ 117 ಪುರುಷರು, 106 ಮಹಿಳೆಯರು ಸೇರಿ ಒಟ್ಟು 223 ಮತದಾರರಿದ್ದು, ಹಿಂದುಳಿದ ವರ್ಗ ‘ಎ’ ಮಹಿಳೆಗೆ ಮೀಸಲಾಗಿದೆ. ಈ ವಾರ್ಡ್‌ನಲ್ಲಿ ಹ್ಯಾಟ್ರಿಕ್‌ ಗೆಲುವಿನತ್ತ ಮುಖ ಮಾಡಿರುವ ಕಳೆದ ಬಾರಿ ಅಧ್ಯಕ್ಷರಾಗಿದ್ದ ಬಿಜೆಪಿಯ ಶೋಭಾ ಅನಂತಯ್ಯ ಹಾಗೂ ಕಾಂಗ್ರೆಸ್‌ನಿಂದ ಎಂ.ರೂಪ ಸ್ಪರ್ಧಿಸುತ್ತಿದ್ದಾರೆ.

4ನೇ ವಾರ್ಡ್‌: ಈ ವಾರ್ಡ್‌ನಲ್ಲಿ 103 ಪುರುಷರು, 113 ಮಹಿಳಾ ಸೇರಿ ಒಟ್ಟು 216 ಮತದಾರರಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಕಾಂಗ್ರೆಸ್‌ನಿಂದ ಡಾ| ಭುವನೇಶ್ವರಿ ಬಲ್ಲಾಳ್‌, ಬಿಜೆಪಿಯಿಂದ ಶ್ರೀವಿದ್ಯಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

5ನೇ ವಾರ್ಡ್‌: ಅತ್ಯಂತ ಕಡಿಮೆ ಮತದಾರರನ್ನು ಹೊಂದಿರುವ ಈ ವಾರ್ಡ್‌ನಲ್ಲಿ 39 ಪುರುಷರು 50 ಮಹಿಳೆಯರು ಸೇರಿ ಒಟ್ಟು 89 ಮತದಾರರಿದ್ದಾರೆ. ಹಿಂದುಳಿದ ವರ್ಗ ‘ಎ’ಗೆ ಮೀಸಲಿರುವ ಈ ವಾರ್ಡ್‌ನಲ್ಲಿ ಬಿಜೆಪಿಯಿಂದ ವೇಣುಗೋಪಾಲ್, ಕಾಂಗ್ರೆಸ್‌ನಿಂದ ಶಂಕರಾಚಾರ್ಯ ಸ್ಪರ್ಧಿಸಿದ್ದಾರೆ.

6ನೇ ವಾರ್ಡ್‌: ಈ ವಾರ್ಡ್‌ನಲ್ಲಿ ಪುರುಷರು ಹಾಗೂ ಮಹಿಳೆಯರು ಸಮಬಲ ಹೊಂದಿದ್ದು ಒಟ್ಟು 250 ಮತದಾರರಿದ್ದಾರೆ. ಇಲ್ಲಿ ಬಜರಂಗ ದಳದ ರತ್ನಾಕರ ಬಿಜೆಪಿಯಿಂದ, ಕಾಂಗ್ರೆಸ್‌ನ ಮಂಜುನಾಥ್‌ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಈ ವಾರ್ಡ್‌ ಹಿಂದುಳಿದ ವರ್ಗ ‘ಬಿ’ಗೆ ಮೀಸಲಾಗಿದೆ.

7ನೇ ವಾರ್ಡ್‌: ಈ ವಾರ್ಡ್‌ ಜಿದ್ದಾಜಿದ್ದಿನಿಂದ ಕೂಡಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಿರುವ ಈ ವಾರ್ಡ್‌ನಲ್ಲಿ ವಿಶ್ವಹಿಂದೂ ಪರಿಷತ್‌ನ ಹರೀಶ್‌ ವಿ.ಶೆಟ್ಟಿ, ಬಿಜೆಪಿಯಿಂದ, ಸ್ಟೈಲೋ ದಿನೇಶ್‌ಶೆಟ್ಟಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. 128 ಪುರುಷರು, 158 ಮಹಿಳೆಯರು ಸೇರಿ ಒಟ್ಟು 286 ಮತದಾರರಿದ್ದಾರೆ.

8ನೇ ವಾರ್ಡ್‌: ಈ ವಾರ್ಡ್‌ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, 126 ಪುರುಷರು, 113 ಮಹಿಳೆಯರು ಸೇರಿ ಒಟ್ಟು 239 ಮತದಾರರಿದ್ದಾರೆ. ಕಾಂಗ್ರೆಸ್‌ನಿಂದ ಉಮೇಶ್‌ ಪುದುವಾಳ್‌, ಬಿಜೆಪಿಯಿಂದ ಪ್ರಕಾಶ್‌ ಸ್ಪರ್ಧಿಸಿದ್ದು, ಇಬ್ಬರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.

9ನೇ ವಾರ್ಡ್‌: ಈ ವಾರ್ಡ್‌ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಕಾಂಗ್ರೆಸ್‌ನಿಂದ ಎಚ್.ಎಸ್‌.ಸೌಮ್ಯ, ಬಿಜೆಪಿಯಿಂದ ರಾಕ ಸ್ಪರ್ಧಿಸಿದ್ದು, ಇಬ್ಬರ ನಡುವೆ ನೇರ ಹೋರಾಟ ಏರ್ಪಟ್ಟಿದೆ. 79 ಪುರುಷರು, 82 ಮಹಿಳೆಯರು ಸೇರಿ ಒಟ್ಟು 161 ಮತದಾರರಿದ್ದಾರೆ.

10ನೇ ವಾರ್ಡ್‌: ಈ ವಾರ್ಡ್‌ನಲ್ಲಿ 123 ಪುರುಷರು, 131 ಮಹಿಳೆಯರು ಸೇರಿ ಒಟ್ಟು 254 ಮತದಾರರಿದ್ದು, ಈ ವಾರ್ಡ್‌ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಬಿಜೆಪಿಯಿಂದ ಸುಮನ, ಕಾಂಗ್ರೆಸ್‌ನಿಂದ ಆಶಾ ಶೆಟ್ಟಿ ಸ್ಪರ್ಧಿಸಿದ್ದಾರೆ.

11ನೇ ವಾರ್ಡ್‌: ಈ ವಾರ್ಡ್‌ನಲ್ಲಿ 319 ಮಹಿಳೆಯರು, 270 ಪುರುಷರು ಸೇರಿ ಒಟ್ಟು 589 ಮತದಾರರಿದ್ದಾರೆ. ಬಿಜೆಪಿಯಿಂದ ನಿತ್ಯಾನಂದ, ಕಾಂಗ್ರೆಸ್‌ನಿಂದ ಆಶಾ ಸ್ಪರ್ಧಿಸಿದ್ದಾರೆ. ಈ ವಾರ್ಡ್‌ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.