ಕಾರು ಅಪಘಾತ: ಜಿಲ್ಲಾಧಿಕಾರಿ ಪಾರು
Team Udayavani, Oct 27, 2018, 4:50 PM IST
ಚಿಕ್ಕಮಗಳೂರು: ದತ್ತಪೀಠಕ್ಕೆ ತೆರಳುತ್ತಿದ್ದ ವೇಳೆ ಜಿಲ್ಲಾಧಿಕಾರಿಗಳ ಕಾರು ಅಪಘಾತಕ್ಕೆ ಈಡಾಗಿದ್ದು, ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀರಾಮಸೇನೆ ವತಿಯಿಂದ ಅ.28ರಂದು ದತ್ತಪೀಠದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನದ
ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತೆ ಪರಿಶೀಲಿಸಲು ಶುಕ್ರವಾರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರುದತ್ತಪೀಠಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ ಜಿಲ್ಲಾಧಿಕಾರಿಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮುಳ್ಳಯ್ಯನಗಿರಿ ಮಾರ್ಗದ ಚನ್ನಗೊಂಡನಹಳ್ಳಿ ತಿರುವಿನಲ್ಲಿ ದತ್ತಪೀಠದಿಂದ ಬರುತ್ತಿದ್ದ ಹಾಸನ ಮೂಲದ ಪೊರ್ಡ್ ಐಕಾನ್ ಕಾರು ಹಾಗೂ ಜಿಲ್ಲಾಧಿಕಾರಿ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಜಿಲ್ಲಾಧಿಕಾರಿಗಳ ಕಾರಿನ ಬಂಪರ್ ಮತ್ತು ಇಂಡಿಕೇಟರ್ಗೆ ಹಾನಿಯಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ¨.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ