ಜಾತೀಯತೆ ಅತ್ಯಂತ ಅಪಾಯಕಾರಿ


Team Udayavani, Nov 26, 2018, 4:31 PM IST

chikk-2.jpg

ಚಿಕ್ಕಮಗಳೂರು: ಜಾತೀಯತೆ, ಅಸ್ಪೃಶ್ಯತೆ ಮುಕ್ತ ದೇಶ ನಿರ್ಮಾಣ ಮಾಡಲು ಮುಂದಾಗುವಂತೆ ಶಾಸಕ ಸಿ.ಟಿ.ರವಿ ಕರೆ ನೀಡಿದರು. ಜಿಲ್ಲಾ ಹಳ್ಳಿಕಾರ ಯುವಕ ಸಂಘದ ವತಿಯಿಂದ ನಗರದ ಟಿ.ಎಂ.ಎಸ್‌. ಶಾಲೆಯ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಹಳ್ಳಿಕಾರರ ಸಮಾವೇಶ, ವಾರ್ಷಿಕೋತ್ಸವ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ, ಮಾಜಿ ಯೋಧರಿಗೆ ಹಳ್ಳಿಕಾರ ರತ್ನ ಪ್ರಶಸ್ತಿ ವಿತರಣೆ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ ಇದ್ದರೂ ಪರವಾಗಿಲ್ಲ.

ಜಾತೀಯತೆ ಬೇಡ. ಅದು ಅತ್ಯಂತ ಅಪಾಯಕಾರಿಯಾದುದು. ಜಾತಿಯತೆ ಇದ್ದಲ್ಲಿ ದೇಶ ಉಳಿಯಲು ಸಾಧ್ಯವಿಲ್ಲ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕಿದೆ ಎಂದರು.

ದೇಹ ಹಾಗೂ ಹಿಂದು ಎಂಬುದು ಒಂದೇ ರೀತಿ. ದೇಹದಲ್ಲಿ ಹಲವು ಭಾಗಗಳಿವೆ. ಬಾಯಿ, ಕೈ, ಕಾಲು, ಕಿವಿ, ಮೂಗು ಈ ರೀತಿಯಾಗಿ ಹಲವು ಭಾಗಗಳಿವೆ. ದೇಹದ ಯಾವುದೇ ಒಂದು ಭಾಗಕ್ಕೆ ನೋವುಂಟಾದಲ್ಲಿ ಇಡೀ ದೇಹವೇ ನೋವನುಭವಿಸುತ್ತದೆ. ಕಾಲಿಗೆ ಮುಳ್ಳು ಚುಚ್ಚಿದರೆ ಕೂಡಲೆ ಕೈ ಮುಳ್ಳನ್ನು ತೆಗೆದು ಹಾಕುತ್ತದೆ. ಒಂದು ವೇಳೆ ಕೈ ತನಗೂ ಅದಕ್ಕೂ ಸಂಬಂಧವಿಲ್ಲವೆಂದು ಸುಮ್ಮನಿದ್ದರೆ ಕಾಲು ಕೊಳೆತು ಇಡೀ ದೇಹವೇ ತೊಂದರೆಗೆ ಸಿಲುಕಿಕೊಳ್ಳುತ್ತದೆ ಎಂದು ವಿವರಿಸಿದರು.

ಅದೇ ರೀತಿ ನಮ್ಮಲ್ಲಿ ಹಲವು ಜಾತಿಗಳು, ಉಪಜಾತಿಗಳು ಇವೆ. ಆದರೂ ಎಲ್ಲರೂ ಹಿಂದೂಗಳೇ ಆಗಿದ್ದಾರೆ. ಯಾವುದೇ
ಒಂದು ಜಾತಿಗೆ ತೊಂದರೆಯಾದರೂ ಎಲ್ಲರೂ ಒಗ್ಗಟ್ಟಾಗಿ ತೊಂದರೆ ನಿವಾರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಹಿಂದುತ್ವಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಹೇಳಿದರು.

ಹಿಂದುತ್ವ ಇಲ್ಲವೆಂದರೆ ದೇಶವೇ ಇಲ್ಲದಂತಾಗುತ್ತದೆ. ಏಕೆಂದರೆ ದೇಶ ಉಳಿದಿರುವುದು ಸಂಸ್ಕೃತಿಯಿಂದ, ಸಂಸ್ಕೃತಿ ಇರುವುದು ಹಿಂದುತ್ವದಿಂದ. ಹಿಂದುತ್ವ ಇಲ್ಲವಾದಲ್ಲಿ ಸಂಸ್ಕೃತಿ ಇಲ್ಲ, ಆ ನಂತರ ದೇಶವೂ ಇಲ್ಲ. ಕಾಶ್ಮೀರ ಕಣಿವೆ ಇಂದಿಗೂ ದೇಶದ ಗಡಿಯೊಳಗೇ ಇದೆ. ಆದರೆ ಅಲ್ಲಿ ದೇಶದ ವಿರುದ್ಧ ಘೋಷಣೆ ಕೂಗಲಾಗುತ್ತದೆ, ನಮ್ಮ ಯೋದರಿಗೆ ಕಲ್ಲು ಹೊಡೆಯಲಾಗುತ್ತದೆ. ಅಲ್ಲಿ ಸಂಸ್ಕೃತಿ ಇಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದರು. 

ಕೆಲವರು ಸ್ವಾರ್ಥದಿಂದಲೊ, ತಿಳಿವಳಿಕೆ ಇಲ್ಲದೆಯೋ ಇಂದು ಜಾತಿಗಳನ್ನು ಒಡೆದು ಸಣ್ಣ ಪುಟ್ಟ ವಿಭಾಗಗಳನ್ನು ಮಾಡಿದ್ದಾರೆ. ಆದರೂ ತೊಂದರೆ ಇಲ್ಲ. ನಾವೆಲ್ಲರೂ ಹಿಂದುಗಳು ಎಂಬುದನ್ನು ಅರಿತು ದೇಶ ಉಳಿಸುವ ಕೆಲಸ ಮಾಡೋಣ ಎಂದು ಹೇಳಿದರು. ಹಳ್ಳಿಕಾರರು ಸಹ ಒಕ್ಕಲಿಗರೇ ಆಗಿದ್ದಾರೆ. ಒಂದೊಂದು ಭಾಗದಲ್ಲಿ ಅವರನ್ನು ಬೇರೆ ಬೇರೆ ಹೆಸರಿನಲ್ಲಿ ಕರೆಯಲಾಗುತ್ತದೆ. ಅಂತಿಮವಾಗಿ ಎಲ್ಲರೂ ಒಕ್ಕಲಿಗರು, ಎಲ್ಲರೂ ಹಿಂದುಗಳು. ರಾಜ, ಮಹಾರಾಜರ ಕಾಲದಲ್ಲಿ ಹಳ್ಳಿಕಾರರ ಕೊಡುಗೆ ಅಪಾರವಾಗಿದೆ. ಅವರಿಂದಾಗಿಯೇ ಹಲವು ಯುದ್ದಗಳನ್ನು ರಾಜರು ಗೆದ್ದಿದ್ದಾರೆ. 

ಈಗ ಸಂಘವನ್ನು ರಚಿಸಿಕೊಂಡು ಎಲ್ಲರೂ ಸಂಘಟಿತರಾಗುತ್ತಿರುವುದು ಸಂತಸದ ವಿಚಾರ ಎಂದರು. ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ಪಟೇಲ್‌ ಪಾಂಡು ಮಾತನಾಡಿ, ಈ ನಾಡು ಕಟ್ಟುವಲ್ಲಿ ಹಳ್ಳಿಕಾರರ ಕೊಡುಗೆ ಇದೆ. ಸಮುದಾಯದಲ್ಲಿ  ಉಪಪಂಗಡಗಳಿವೆ. ಆದರೂ ಎಲ್ಲರೂ ಒಗ್ಗಟ್ಟಾಗಿರಬೇಕು. ಆಧುನಿಕತೆಯ ಭರಾಟೆಯಲ್ಲಿ ಸಮುದಾಯಕ್ಕೆ ಉತ್ತಮ ಮಾರ್ಗದರ್ಶಕರ ಅವಶ್ಯಕತೆ ಇದೆ.
 
ಸಮುದಾಯದ ಹಿರಿಯರು ಸಲಹೆ ಸೂಚನೆಗಳನ್ನು ಕೊಡುವ ಮೂಲಕ ಸಂಘ ಬೆಳೆಸಬೇಕು ಎಂದರು. ಮಾಜಿ ಯೋಧರಾದ ನಾರಾಯಣಮೂರ್ತಿ, ಪರಮೇಶ್‌ ಬಾಬು, ಸಿ.ಎಚ್‌.ರಮೇಶ್‌ ಹಾಗೂ ಚಂದ್ರಶೇಖರ್‌ ಅವರಿಗೆ ಹಳ್ಳಿಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಎಸ್‌.ಎಸ್‌.ಎಲ್‌.ಸಿ. ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಧ್ಯಕ್ಷತೆಯನ್ನು ನಗರಸಭೆ ಮಾಜಿ ಉಪಾಧ್ಯಕ್ಷ ಕೋಟೆ ಶ್ರೀನಿವಾಸ್‌ ವಹಿಸಿದ್ದರು. ಹಳ್ಳಿಕಾರ ಮುಖಂಡ ಗಂಗಾಧರ ನಾಯಕ್‌, ರಾಜ್ಯ ಹಳ್ಳಿಕಾರ ಸಂಘದ ಅಧ್ಯಕ್ಷ ಮುನಿರಂಗಪ್ಪ, ನಗರಸಭಾ ಸದಸ್ಯ ಕೋಟೆ ಕೃಷ್ಣ, ವಕೀಲ ನಾಗಯ್ಯ, ಚಲನಚಿತ್ರ ನಟ ಹನುಮಂತೇ ಗೌಡ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.