ಚಾರ್ಮಾಡಿ ಘಾಟ್ ನಲ್ಲಿ ಹಂದಿಗಳ ಕಳೇಬರ ಎಸೆದು ಹೋದ ಕಿಡಿಗೇಡಿಗಳು
Team Udayavani, Nov 18, 2022, 11:15 AM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ನ ಮಲಯಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ.
ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರದ ಹಂದಿಗಳನ್ನು ಎಸೆದು ಹೋಗಿದ್ದು, ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿ ತಿರುಗಾಡುವಂತಾಗಿದೆ. ಅದರ ಸಮೀಪದಲ್ಲೇ ತೊರೆಯೊಂದು ಹರಿಯುತ್ತಿದ್ದು, ಹಂದಿಯ ಕಳೇಬರ ಕೊಳೆತು ತೊರೆ ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು ಹೋಗಿರುವ ಸಾಧ್ಯತೆ ಇದ್ದು, ಹೀಗೆ ಎಸೆದು ಹೋಗಿರುವವರ ವಿರುದ್ದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ