ಚಾರ್ಮಾಡಿ ಘಾಟ್ನಲ್ಲಿ ಟ್ರಾಫಿಕ್ ಜಾಮ್, ಪರದಾಟ
Team Udayavani, Jan 21, 2018, 6:15 AM IST
ಚಿಕ್ಕಮಗಳೂರು: ಶಿರಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಳಿಸಿದ ಮೊದಲ ದಿನ ಶನಿವಾರವೇ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ಪ್ರಯಾಣಿಕರು ಪರದಾಡುವಂತಾಯಿತು. ಶಿರಾಡಿ ಘಾಟಿ ರಸ್ತೆ ದುರಸ್ತಿಗೊಳಿಸುವ ಹಿನ್ನೆಲೆಯಲ್ಲಿ ಅಲ್ಲಿ ಸಂಚಾರ ಸ್ಥಗಿತಗೊಳಿಸಿ ರಸ್ತೆ ಬಂದ್ ಮಾಡಲಾಗಿದೆ.
ಇದರಿಂದ ಅನಿವಾರ್ಯವಾಗಿ ವಾಹನಗಳೆಲ್ಲ ಚಾರ್ಮಾಡಿ ಘಾಟಿ ಮೂಲಕ ಸಂಚರಿಸುತ್ತಿವೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾತ್ರದ ವಾಹನ ಸಂಚಾರ ನಿಷೇಧಿಸಿದ್ದರೂ ಶನಿವಾರ ಲಾರಿಯೊಂದು ಈ ರಸ್ತೆಯಲ್ಲಿ ಬಂದಿದ್ದರಿಂದ ಕೊಟ್ಟಿಗೆಹಾರದ ಬಳಿ ಸಂಚಾರ ಅಸ್ತವ್ಯಸ್ತಗೊಂಡು ವಾಹನಗಳು ಗಂಟೆಗಟ್ಟಲೆ ರಸ್ತೆಯಲ್ಲೇ ನಿಲ್ಲುವಂತಾಗಿತ್ತು. ಪ್ರವಾಸಿಗರು ಸೇರಿದಂತೆ ಸ್ಥಳೀಯರು ಪರದಾಡುವಂತಾಯಿತು