ಕನ್ನಡ ಬಳಸದ ಅಧಿಕಾರಿಗಳಿಗೆ ಚಾಟಿ ಬೀಸಿ


Team Udayavani, Jan 19, 2019, 9:07 AM IST

bid-6.jpg

ಮೂಡಿಗೆರೆ: ಕನ್ನಡದಲ್ಲಿ ವ್ಯವಹರಿಸಲು ಸೋಮಾರಿತನ ತೋರುವ ಕೆಲವು ಕನ್ನಡ ಬಲ್ಲ ಅಧಿಕಾರಿಗಳು ಹಾಗೂ ಕನ್ನಡ ಕಲಿಯಲು ಆಲಕ್ಷಿಸುವ ಕೆಲವು ಕನ್ನಡೇತರ ಅಧಿಕಾರಿಗಳನ್ನು ದಾರಿಗೆ ತರಲು ಸರ್ಕಾರ ನಿಗಾವಹಿಸಬೇಕೆಂದು 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ| ಡಿ.ಎಸ್‌.ಜಯಪ್ಪಗೌಡ ಆಗ್ರಹಿಸಿದರು.

ಮೂಡಿಗೆರೆಯಲ್ಲಿ ಶುಕ್ರವಾರ ಆರಂಭವಾದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಕನ್ನಡ ಜನಸಾಮಾನ್ಯರ ಸಂಪರ್ಕ ಭಾಷೆಯಾಗಿ ಯಶಸ್ವಿಯಾಗಿದೆ. ಆಡಳಿತ ಭಾಷೆಯಾಗಿ ಅದು ಯಶಸ್ಸುಗೊಳಿಸಲು ಸರ್ಕಾರ ತರಬೇತಿ ಕಾರ್ಯಕ್ರಮ ಸೇರಿದಂತೆ ಪೂರಕವಾದ ಅನೇಕ ಪದಕೋಶ ಹಾಗೂ ಪಾರಿಭಾಷಿಕ ಕೃತಿಗಳನ್ನು ಹೊರ ತಂದಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕಣ್ಗಾವಲನ್ನು ಇಟ್ಟಿದೆ. ಆಡಳಿತ ಭಾಷೆಯಾಗಿ ಕನ್ನಡವನ್ನು ಜಾರಿಗೊಳಿಸಿ ವರ್ಷಗಳೇ ಕಳೆದಿವೆ. ಈಗ ಸರ್ಕಾರ ಕೈಗೊಳ್ಳಬೇಕಾದುದು ಕೆಲವು ಬಿಗಿ ಕ್ರಮಗಳನ್ನು; ಆಗ ಮಾತ್ರ ಕನ್ನಡ ಆಡಳಿತದಲ್ಲಿ ಊರ್ಜಿತವಾಗಲು ಅಡ್ಡಿಯಾಗುವುದಿಲ್ಲ. ಕನ್ನಡದಲ್ಲಿ ವ್ಯವಹರಿಸಲು ಹಿಂಜರಿಯುವ ಕೆಲವು ಕನ್ನಡ ಬಲ್ಲ ಅಧಿಕಾರಿಗಳು ಹಾಗೂ ಕನ್ನಡ ಕಲಿಯಲು ಅಲಕ್ಷಿಸುವ ಕೆಲವು ಕನ್ನಡೇತರ ಭಾಷಾ ಅಧಿಕಾರಿಗಳು ದಾರಿಗೆ ಬರುವಂತೆ ಸರ್ಕಾರ ನಿಗಾ ವಹಿಸಬೇಕೆಂದು ಸಲಹೆ ಮಾಡಿದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ಹಿರಿಮೆ ಹಾಗೂ ಗರಿಮೆ ಅತ್ಯಂತ ಪ್ರಸ್ತುತ. ಆದರೆ ಕನ್ನಡದ ಆತಂಕಗಳು ಮರೆಯಾಗಿಲ್ಲ. ಕನ್ನಡ ಈ ನಾಡಿನಲ್ಲಿ ತನ್ನ ಹಿಡಿತವನ್ನು ಉಳಿಸಿಕೊಳ್ಳಬೇಕಾದರೆ ಅದು ಸಾಫ್ಟ್‌ವೇರ್‌ ಭಾಷೆಯಾಗುವುದು ಅನಿವಾರ್ಯ ಎಂದು ಅಭಿಪ್ರಾಯಪಟ್ಟರು.

ಕನ್ನಡ ಭಾಷೆ ಸಾಫ್ಟ್‌ ವೇರ್‌ ಭಾಷೆಯಾಗದಿದ್ದರೆ ಅದು ಹಿಂದೆ ಬೀಳುತ್ತದೆ. ಈ ಮಾತನ್ನು ಬಹಳ ಹಿಂದೆಯೇ ಖ್ಯಾತ ಸಾಹಿತಿ ಹಾಗೂ ಪರಿಸರವಾದಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸೂಚಿಸಿ ಎಚ್ಚರಿಸಿದ್ದರು ಎಂಬುದನ್ನು ನೆನಪಿಸಿಕೊಂಡ ಸರ್ವಾಧ್ಯಕ್ಷರು, ಕನ್ನಡವನ್ನು ತಂತ್ರಾಂಶ ಭಾಷೆಯಾಗಿಸಲು ಏನು ಕೆಲಸವಾಗಿದೆ ಎಂಬುದನ್ನು ತಜ್ಞರೇ ಸ್ಪಷ್ಟಪಡಿಸಬೇಕು ಎಂದರು.

ಒಂದು ಭಾಷೆಗೆ ಆತಂಕ ಎದುರಾಗುವುದು ಅದು ಶಿಕ್ಷಣ ಮಾಧ್ಯಮವಾಗಲು ಸಾಧ್ಯವಾಗದಿದ್ದಾಗ. ಇದಕ್ಕೆ ಐತಿಹಾಸಿಕ ಕಾರಣಗಳೂ ಇವೆ. ಸಂಸ್ಕೃತದ ಪ್ರಭಾವಳಿ ಅಡಿ ಬೆಳೆದ ಕನ್ನಡ ಸಾಹಿತ್ಯ ಅಲ್ಲಿಂದ ಪದ ಸಂಪತ್ತನ್ನು ಧಾರಾಳವಾಗಿ ಪಡೆದು ಬಳಸಿಕೊಂಡ ಪರಿಣಾಮ ದ್ರಾವಿಡ ಭಾಷೆಯ ಪಾರಿಭಾಷಿಕ ಪದಗಳ ಸ್ಥಾನದಲ್ಲಿ ಸಂಸ್ಕೃತ ಪದಗಳು ಬಂದು ಕುಳಿತವು ಎಂದು ವಿವರಿಸಿದರು.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣಕ್ಕೆ ಬಂದು ಇಂಗ್ಲಿಷ್‌ ಮಾಧ್ಯಮಕ್ಕೆ ಸೇರಿದರೆ ಪಠ್ಯ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತದೆ. ವಿಜ್ಞಾನ ವಿಷಯಗಳನ್ನು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳುವುದು ಕಷ್ಟ. ಸಮಾನ ಪದಕೋಶಗಳು ದೊರಕುವುದಿಲ್ಲ. ಹಿಂದೆಯೇ ವಿದ್ವಾಂಸ ಡಾ| ಎಂ.ಚಿದಾನಂದಮೂರ್ತಿ ಸಾಮಾಜಿಕ ವಿಜ್ಞಾನಗಳ ಅಕಾಡೆಮಿಯೊಂದನ್ನು ಸ್ಥಾಪಿಸಬೇಕೆಂಬ ಸಲಹೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಆದರೆ ಸರ್ಕಾರದಿಂದ ಅದಕ್ಕೆ ಒಪ್ಪಿಗೆಯೇ ಸಿಗಲಿಲ್ಲ ಎಂದು ಹೇಳಿದರು.

ಕರ್ನಾಟಕವು ಧಾರ್ಮಿಕವಾಗಿಯೂ ಪ್ರೌಢಿಮೆ ತೋರಿದೆ. 12ನೇ ಶತಮಾನದಷ್ಟು ಹಿಂದೆಯೇ ಬಸವಣ್ಣನವರು ದಯೆಯೇ ಧರ್ಮದ ಮೂಲವೆಂದು ಸಾರಿದರು. ಈ ಮಾತು ಸರ್ವಕಾಲಿಕ ಸತ್ಯ. ಕನಕದಾಸರು ಕುಲಕೇಳಿ ಮಣೆ ಹಾಕಬಾರದು ಎಂದು ಹೇಳಿದರು ಎಂದರು. ಈ ಜಿಲ್ಲೆ ಪ್ರವಾಸಿಗಳನ್ನು ಹಾಗೂ ಯಾತ್ರಾರ್ಥಿಗಳನ್ನು ಸೆಳೆಯುವ ಜಿಲ್ಲೆಯಾಗಿದೆ. ಇದಕ್ಕೆ ಪೂರಕವಾದ ಸೂಕ್ತ ಮೂಲ ಸೌಕರ್ಯಗಳ ಅಗತ್ಯವಿದೆ. ತೋಟಗಾರಿಕಾ ವಿಶ್ವವಿದ್ಯಾಲಯದ ನಿರೀಕ್ಷೆಯಲ್ಲಿ ಜನರಿದ್ದಾರೆ. ಚಿತ್ರದುರ್ಗ-ಮಂಗಳೂರು ಹೆದ್ದಾರಿಯ ಬಗ್ಗೆ ಜನ ಕುತೂಹಲಿಗಳಾಗಿದ್ದಾರೆ. ಇದರಿಂದ ಈಗಿನ ಕಡೂರು-ಮಂಗಳೂರು ಮಾರ್ಗದ ಸಂಚಾರದ ಒತ್ತಡ ಕಡಿಮೆ ಮಾಡಲು ಸಾಧ್ಯ ಎಂದು ವಿವರಿಸಿದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.